ಕಲಬುರಗಿ: ಜಿಲ್ಲೆಯಾದ್ಯಂತ ಸುರಿದ ಮಳೆಯಿಂದ ತಮ್ಮ ಕ್ಷೇತ್ರದ ಗ್ರಾಮವಾದ ಲಿಂಗೈನವಾಡಿ ಗ್ರಾಮದಲ್ಲಿ ಮಳೆ ಸುರಿದರಿಂದ ಗ್ರಾಮದಲ್ಲಿ ಅಪಾರ ಬೆಳೆ ಹಾನಿಯಾಗಿವೆ. ಶಾಸಕರಾದ ತಾವೂಗಳು ಇದುವರೆಗೂ ಲಿಂಗೈನವಾಡಿ ಗ್ರಾಮಕ್ಕೆ ಭೇಟಿ ನೀಡಿಲ್ಲ.
ಕೂಡಲೇ ತಾವೂಗಳು ಭೇಟಿ ನೀಡಿ ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಗ್ರಾಮಸ್ಥರಾದ ವಿಜಯಕುಮಾರ್ ವಾಡೇಕರ್ , ಶರಣಪ್ಪ ಕೊಳ್ಳೂರ , ಸಚೀನ ಕೊಳ್ಳೂರ , ಮಲ್ಲು ಬಾಳಿ , ದತ್ತು ಎಡಿಗೆ , ರಿಜವಾನ್ ಮುಲ್ಲಾ , ಮಹೇಶ ವಾಗಮಡೆ ಸೇರಿದಂತೆ ಅನೇಕರು ಶಾಸಕ ಬಸವರಾಜ ಮತ್ತಿಮೂಡ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಗ್ರಾಮದ ಶರಣಬಸಪ್ಪ ಕೊಳ್ಳೂರ ಅವರ 50 ಕ್ವಿಂಟಲ್ ಉಳ್ಳಾಗಡಿ ಗಾದಗಿ ಸಂಪೂರ್ಣವಾಗಿ ಮಳೆಯಿಂದ ಕೊಚ್ಚಿ ಹೋಗಿದೆ.
ಈಗಾಗಲೇ ತಾವೂಗಳು ಕುರಿಕೋಟಾ , ಜವಳಗಾ , ಶ್ರೀಚಂದ , ಸಿರಗಾಪೂರ , ಕಣ್ಣೂರ , ಮಾಲಗತ್ತಿ , ಮಹಾಗಾಂವ , ನಾಗೂರ , ಚಿಂಚನಸೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದೀರಿ ಆದರೆ ತಮ್ಮ ಕ್ಷೇತ್ರದಲ್ಲಿ ಬರುವ ಲಿಂಗೈನವಾಡಿ ಗ್ರಾಮಕ್ಕೆ ಯಾಕೆ ಭೇಟಿ ನೀಡುತ್ತಿಲ್ಲ ಎಂದು ಪ್ರಶ್ನಿಸಿದರು ? ದಯಮಾಡಿ ತಾವೂಗಳು ಕೂಡಲೇ ಲಿಂಗೈನವಾಡಿ ಗ್ರಾಮಕ್ಕೆ ಭೇಟಿ ನೀಡಿ ಮಳೆ ಹಾನಿ ಬಗ್ಗೆ ಪರಿಶೀಲನೆ ಮಾಡಬೇಕೆಂದು ಈ ಮೂಲಕ ಅವರು ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…