ಸುರಪುರ: ನಗರದ ಟೈಲರ್ ಮಂಜಿಲ್ನಲ್ಲಿ ಜಯಕರ್ನಾಟಕ ಸಂಘಟನೆಯ ಮುಖಂಡರು ಸಭೆ ನಡೆಸಿ ಸರಕಾರ ರೈತರ ನೆರವಿಗೆ ಬರುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಘಟನೆ ತಾಲೂಕು ಅಧ್ಯಕ್ಷ ರವಿ ನಾಯಕ ಬೈರಿಮಡ್ಡಿ ಮಾತನಾಡಿ,ಸರಕಾರ ಪ್ರವಾಹ ಸಂದರ್ಭದಲ್ಲಿ ಕೂಡಲೆ ರೈತರ ನೆರವಿಗೆ ಬರಬೇಕು ಆದರೆ ಸರಕಾರದ ನಡೆ ತುಂಬಾ ನಿಧಾನವಾಗಿದೆ,ಆದ್ದರಿಂದ ಇದೇ ತಿಂಗಳ ೨೨ನೇ ತಾರೀಖು ನಮ್ಮ ಸಂಘಟನೆ ರಾಜ್ಯಾಧ್ಯಕ್ಷರಾದ ಬಿ.ಎನ್.ಜಗದೀಶ ಅವರು ಯಾದಗಿರಿ ಜಿಲ್ಲಾ ಪ್ರವಾಸಕ್ಕೆ ಬರುತ್ತಿದ್ದು ಅದೇ ದಿನ ಸರಕಾರಕ್ಕೆ ಒತ್ತಾಯಿಸಿ ಕೂಡಲೆ ನೆರೆಯಿಂದ ಹಾನಿಗೀಡಾದ ಜನರ ನೆರವಿಗೆ ಹಾಗು ರೈತರಿಗೆ ಕೂಡಲೆ ಪರಿಹಾರ ಬಿಡುಗಡೆ ಮಾಡುವಂತೆ ಆಗ್ರಹಿಸಲಿದ್ದೇವೆ ಎಂದು ತಿಳಿಸಿದರು.
ಸರಕಾರ ಇಂತಹ ಸಂದರ್ಭದಲ್ಲಿ ಜನರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಆದರೆ ಯಾದಗಿರಿ ಜಿಲ್ಲೆಯ ಅನೇಕ ಕಡೆಗಳಲ್ಲಿ ತೆರೆಯಲಾದ ಕಾಳಗಿ ಕೇಂದ್ರಗಳಲ್ಲಿ ಸರಿಯಾದ ವ್ಯವಸ್ಥೆ ಇರದಿರುವುದರಿಂದ ಜನರು ಬೇಸತ್ತು ಕಾಳಜಿ ಕೇಂದ್ರದಿಂದ ಹೊರ ಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ,ಕೂಡಲೆ ಜನರಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜು ದರಬಾರಿ ಶರಣು ಬೈರಿಮಡ್ಡಿ ಮಲ್ಲಪ್ಪ ನಾಯಕ ಯಲ್ಲಪ್ಪ ಕಲ್ಲೋಡಿ ಹಣಮಂತ್ರಾಯ ನಾಯಕ ಚಿಗರಿಹಾಳ ಸೇರಿದಂತೆ ಅನೇಕರಿದ್ದರು.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…