ಸುರಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ಸಲಹೆಯಂತೆ ಇಂದು ಸುರಪುರ ಮತ್ತು ಹುಣಸಗಿ ತಾಲೂಕಿನಾದ್ಯಂತ ಸಂಚರಿಸಿ ಕೊರೊನಾ ತಪಾಸಣೆ ನಡೆಸಲಾಗುತ್ತಿದೆ ಎಂದು ಯೂತ್ ಕಾಂಗ್ರೆಸ್ ಮುಖಂಡ ಮಂಜುನಾಥ ಸಾಹುಕಾರ ತಿಳಿಸಿದರು.
ತಾಲೂಕಿನ ತಿಂಥಣಿ ಗ್ರಾಮದಲ್ಲಿ ಯೂತ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕೊರೊನಾ ತಪಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿ,ಇಂದು ಎಲ್ಲೆಡೆ ಕೊರೊನಾ ವೈರಸ್ ಹಾವಳಿ ಹೆಚ್ಚಾಗಿದೆ ಆದರೆ ಸರಕಾರ ಮಾತ್ರ ಇದನ್ನು ನಿರ್ಮೂಲನೆ ಮಾಡದೆ ನಿರ್ಲಕ್ಷ್ಯ ತೋರಿದೆ,ಆದ್ದರಿಂದ ನಮ್ಮ ಕೆಪಿಸಿಸಿ ಪಕ್ಷದ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ಆದೇಶದಂತೆ ಇಂದು ಎಲ್ಲಾ ಗ್ರಾಮಗಳಲ್ಲೂ ನಮ್ಮ ಯೂತ್ ಕಾಂಗ್ರೆಸ್ ತಂಡ ಜನರ ಮನೆ ಬಾಗಿಲಿಗೆ ಹೋಗಿ ಕೊರನಾ ತಪಾಸಣೆ ನಡೆಸಲಿದೆ ಎಂದರು.
ತಿಂಥಣಿ ಗ್ರಾಮದಲ್ಲಿ ನಡೆದ ತಪಾಸಣಾ ಶಿಬಿರದಲ್ಲಿ ತಾಲೂಕು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಗಂಗಾಧರ ನಾಯಕ ತಿಂಥಣಿ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡರು.ಈ ಸಂದರ್ಭದಲ್ಲಿ ಯೂತ್ ಕಾಂಗ್ರೆಸ್ನ ಅನೇಕ ಮುಖಂಡರುಗಳಿದ್ದರು.
ಕಲಬುರಗಿ: ಈ ಕಥಾ ಸಂಕಲವನ್ನು ಓದಿದರೆ ಮಾತು ಬಾರದ ಮೌನ ಆವರಿಸುತ್ತದೆ. ಉತ್ತರ ಕರ್ನಾಟಕದ ಜನ ಮತ್ತೆ ಮತ್ತೆ ಬರೆದು…
ಕಲಬುರಗಿ: ವಿಶ್ವ ಹಿಂದೂ ಪರಿಷತ್, ಕಲಬುರಗಿ ಮಹಾನಗರ, ಗೋರಕ್ಷಾ ವಿಭಾಗ ವತಿಯಿಂದ ಸೆ.30.ರಂದು ಬೆಳಿಗ್ಗೆ 10.ರಿಂದ ಸಂಜೆ 5ರ ವರೆಗೆ…
ಕಲಬುರಗಿ: “ಸ್ವಚ್ಚತೆಯೇ ಆರೋಗ್ಯದ ಮೂಲ ಮಂತ್ರ” ಎಂದು ಶಾಂತಾ ಆಸ್ಪತ್ರೆಯ ವೈದ್ಯೆ ಡಾ. ಅಂಬಿಕಾ ಪಾಟಿಲ್ ಹೇಳಿದರು. ಇಂದು ಅವರು ಕರ್ನಾಟಕ…
ಅಫಜಲಪುರ: ಇಲ್ಲಿನ ಸರಕಾರಿ ಪಾಲಿಟೆಕ್ನಿಕ್ ಅಫಜಲಪೂರ ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಪ್ರಾದೇಶಿಕ ಕೇಂದ್ರ ಕಲಬುರಗಿಯ…
ಆಳಂದ; ಕೇಂದ್ರ ಸರ್ಕಾರದಿಂದ ಗ್ರಾಮ ಪಂಚಾಯತಗಳಿಗೆ ಮಂಜೂರಿಯಾಗಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯ ಮನೆಗಳಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಬಿಜೆಪಿ ಬೆಂಬಲಿತ…
ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶವು ಹಲವು ಹಿರಿಮೆಗಳಿಗೆ ಪ್ರಸಿದ್ಧಿಯಾಗಿದೆ. ಸ್ವತಂತ್ರ ಪೂರ್ವದ ಇತಿಹಾಸ ನೋಡಿದರೆ ಈ ಪ್ರದೇಶದಲ್ಲಿ ಅನೇಕ ರಾಜ…