ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಗರುಡಾದ್ರಿ ಕಲಾ ಮಂದಿರಲ್ಲಿ ನಾಡಹಬ್ಬದ ಅಂಗವಾಗಿ ನಾಡದೇವಿಯ ಘಟಸ್ಥಾಪನೆ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಕನ್ನಡ ಸಾಹಿತ್ಯ ಸಂಘದ ಮುಖಂಡ ಬಸವರಾಜ ಜಮದ್ರಖಾನಿ ಮಾತನಾಡಿ,ಕಳೆದ ನಾಲ್ಕು ದಶಕಗಳಿಂದ ಸಾಹಿತ್ಯ ಸಂಘದಿಂದ ಅದ್ಧೂರಿಯಾಗಿ ನಾಡಹಬ್ಬವನ್ನು ಆಚರಿಸಲಾಗುತ್ತಿತ್ತು,ಆದರೆ ಈ ವರ್ಷ ನಮ್ಮ ಸಂಘದ ಅಧ್ಯಕ್ಷರಾಗಿದ್ದ ರಾಜಾ ಮದನಗೋಪಾಲ ನಾಯಕರಿಲ್ಲದೆ ನಾಡಹಬ್ಬ ಆಚರಣೆ ಅಪೂರ್ಣ ಎನಿಸುತ್ತಿದೆ ಎಂದರು.
ಈ ವರ್ಷ ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕರಿಲ್ಲ ಹಾಗು ಕೊರೊನಾ ಎಂಬ ಮಹಾ ಮಾರಿ ಇಡೀ ದೇಶವನ್ನು ನಲುಗಿಸಿರುವುದರಿಂದ ನಾಡ ಹಬ್ಬದ ಯಾವುದೇ ಕಾರ್ಯಕ್ರಮವನ್ನು ಆಚರಿಸುತ್ತಿಲ್ಲ,ಆದರೆ ಸಾಂಪ್ರಾದಾಯಿಕವಾಗಿ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವುದರಿಂದ ಸರಳವಾಗಿ ನಾಡದೇವಿಯ ಘಟಸ್ಥಾಪನೆ ಮಾಡಿ ನಾಡ ಹಬ್ಬ ಮುಗಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ನಾಡದೇವಿಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಮಿಸಲಾಯಿತು.ಆದರೆ ಎಲ್ಲರ ಮನದಲ್ಲಿನ ಅಗಲಿದ ರಾಜಾ ಮದನಗೋಪಾಲ ನಾಯಕ ಅವರ ನೆನಪಿನ ನೋವು ಎದ್ದು ಕಾಣುತ್ತಿತ್ತು.
ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀನಿವಾಸ ಜಾಲವಾದಿ ಹಾಗು ಮುಖಂಡರಾದ ರಾಘವೇಂದ್ರ ಬಾಡಿಹಾಳ ರಾಜಶೇಖರ ದೇಸಾಯಿ ಶಿವಕುಮಾರ ಮಸ್ಕಿ ದೇವು ಹೆಬ್ಬಾಳ ರಾಘವೇಂದ್ರ ಭಕ್ರಿ ಹಣಮಂತ್ರಾಯ ದೊರೆ ಸೇರಿದಂತೆ ರಾಣಿ ಜಾನಕಿದೇವಿ ಶಾಲೆಯ ಶಿಕ್ಷಕರಿದ್ದರು.
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…