ಸುರಪುರ: ನಾನು ಇಲ್ಲಿಯ ವರೆಗೆ ೧೧ ಬಾರಿ ಕೊರೊನಾ ಪರೀಕ್ಷೆ ಮಾಡಿಸಿದ್ದೇನೆ ಆದರೆ ಇಲ್ಲಿಯವರೆಗೆ ನನಗರ ಕೊರೊನಾ ಪಾಸಿಟಿವ್ ಬಂದಿಲ್ಲ,ಆದರೆ ನನಗೆ ಕೊರೊನಾ ಪಾಸಿಟಿವ್ ಬಂದಿದೆ,ಚಿಕಿತ್ಸಾ ವೆಚ್ಚವಾಗಿ ೧೨ ಲಕ್ಷ ರೂಪಾಯಿ ಸರಕಾರದಿಂದ ಪಡೆದಿರುವುದಾಗಿ ಸುಳ್ಳು ಸುದ್ದಿಯನ್ನು ಹರಡಲಾಗಿದೆ ಎಂದು ಶಾಸಕ ನರಸಿಂಹ ನಾಯಕ (ರಾಜುಗೌಡ) ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವೀಡಿಯೊ ಸಂದೇಶ ಒಂದನ್ನು ನೀಡಿರುವ ಅವರು,ಖಾಸಗಿ ಸುದ್ದಿ ವಾಹಿನಿಯೊಂದು ನನಗೆ ಕೊರೊನಾ ಬಂದಿದೆ,ಕೊರೊನಾದ ಚಿಕಿತ್ಸೆಗಾಗಿ ಸರಕಾರದಿಂದ ೧೨ ಲಕ್ಷ ರೂಪಾಯಿಗಳ ಚಿಕಿತ್ಸಾ ವೆಚ್ಚ ಪಡೆದಿರುವುದಾಗಿ ಸುದ್ದಿ ಹರಡಲಾಗಿದೆ.ಇದು ಸತ್ಯಕ್ಕೆ ದೂರವಾಗಿದೆ.
ಸುದ್ದಿ ಪ್ರಸಾರ ಮಾಡುವವರು ನನ್ನಿಂದ ಯಾವುದೇ ಮಾಹಿತಿಯನ್ನು ಪಡೆಯದೆ ಸುಳ್ಳು ಸುದ್ದಿ ಹಬ್ಬಿಸಿರುವುದು ಬೇಸರ ಮೂಡಿಸಿದೆ.ಸ್ಪಷ್ಟತೆ ಇಲ್ಲದೆ ಸುಳ್ಳು ಸುದ್ದಿ ಹರಡುವುದು ಸರಿಯಲ್ಲ.ನಾನು ಅನೇಕ ಜನರು ಸಂಕಷ್ಟದಲ್ಲಿರುವಾಗ ನೆರವಾಗಿದ್ದೇನೆ,ಆದರೆ ನಾನು ಸರಕಾರದಿಂದ ಚಿಕಿತ್ಸಾ ವೆಚ್ಚ ಪಡೆದಿರುವುದಾಗಿ ಹೇಳುವ ಮೂಲಕ ಜನರಲ್ಲಿ ತಪ್ಪು ಸಂದೇಶ ಹರಡುವುದು ನೋವಿನ ಸಂಗತಿಯಾಗಿದೆ.
ಯಾರೇ ಆಗಲಿ ನನಗೆ ಕೊರೊನಾ ಸೊಂಕು ತಗುಲಿದ್ದರ ಬಗ್ಗೆ ಚರ್ಚೆ ಮಾಡುವುದಾದರೆ ಮಾಡಲಿ ಅದು ಬಿಟ್ಟು ವಿಷಯ ಸ್ಪಷ್ಟನೆ ಇಲ್ಲದೆ ಸುದ್ದಿ ತೋರಿಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…