ಬಿಸಿ ಬಿಸಿ ಸುದ್ದಿ

ಶೀಘ್ರ ಗ್ರಾಮ ಪಂಚಾಯತ್ ಚುನಾವಣೆಗೆ ಯಳಸಂಗಿ ಆಗ್ರಹ

ಆಳಂದ: ರಾಜ್ಯದಲ್ಲಿ ವಿಧಾನ ಪರಿಷತ್ ಮತ್ತು ಉಪ ಚುನಾವಣೆಗಳನ್ನು ನಡೆಸುವ ಸರ್ಕಾರ, ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಹಿಂದೇಟು ಹಾಕುವುದು ಸರಿಯಲ್ಲ. ಆದಷ್ಟು ಬೇಗ ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ನಿಂಬರ್ಗಾ ವಲಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಬಸವರಾಜ ಯಳಸಂಗಿ ಆಗ್ರಹಿಸಿದ್ದಾರೆ.

5,800 ಗ್ರಾಮ ಪಂಚಾಯತ್ ಅವಧಿ ಮುಗಿದು ಒಂದು ವರ್ಷ ಕಳೆದಿದೆ.ಇದರಿಂದ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ನಿಂತುಹೋಗಿದೆ.ಮಳೆಗಾಲದ ಕಾರಣ ಸೇತುವೆ, ರಸ್ತೆಗಳು ಕಿತ್ತು ಹೋಗಿವೆ. ಹೊಲಗಳಿಗೆ ಹೋಗಲು ರಸ್ತೆಗಲಿಲ್ಲ.ನೀರು ಹರಿದು ಹೋಗದೆ ಗ್ರಾಮಗಳಲ್ಲಿ ಮಡುಗಟ್ಟಿ ರೋಗದ ಭೀತಿ ಹರಡಿದೆ.ಅನೇಕ ಸಮಸ್ಯೆಗಳನ್ನು ಬಗೆಹರಿಸಲು ಗ್ರಾಮ ಪಂಚಾಯತ್ ಚುನಾವಣೆ ನಡೆಸುವುದು ಅನಿವಾರ್ಯವಾಗಿದೆ.

ಸಮಸ್ಯೆಗಳನ್ನು ಬಗೆಹರಿಸಲು ಆಡಳಿತಾಧಿಕಾರಿಗಳನ್ನು ಕೇಳಿದರೆ ಸರ್ಕಾರದ ಕಡೆ ಬೊಟ್ಟು ಮಾಡುತ್ತಾರೆ. ಹೀಗಿದ್ದರೆ ಜನರ ಗತಿ ಏನು ಎಂದು ಅವರು ಪ್ರಶ್ನಿಸಿದ್ದಾರೆ.ಚುನಾವಣಾ ಆಯೋಗ ಚುನಾವಣೆ ನಡೆಸಲು ಸಜ್ಜಾಗಿದ್ದರೂ, ಸರ್ಕಾರ ಮಾತ್ರ ಮಿನಮೇಷ ಎನಿಸುತ್ತಿದೆ.ಹಾಗಾಗಿ, ಕೂಡಲೇ ಸರ್ಕಾರ ಚುನಾವಣೆಗಳನ್ನು ನಿಗದಿಯಂತೆ ನಡೆಸಬೇಕು ಎಂದು  ತಿಳಿಸಿದರು.

emedialine

Recent Posts

371ಜೆ ಕಾಯ್ದೆ ದಶಮಾನೋತ್ಸವ ಹಿನ್ನೆಲೆ,ಸಂಭ್ರಮಾಚರಣೆಗೆ ಚಿಂತನೆ; ಡಿ.ಕೆ.ಶಿವಕುಮಾರ

ಕಲಬುರಗಿ; ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹೊಸ ಭಾಷೆಯನ್ನೆ ಬರೆದ 371ಜೆ ಕಾಯ್ದೆ ಜಾರಿಗೆ ಬಂದು ಇದೀಗ ದಶಮಾನೋತ್ಸವ ಆಚರಿಸುತ್ತಿದ್ದು, ಈ…

4 mins ago

ಕಲಬುರಗಿ: 25 ರಂದು ರಾಜ್ಯ ಮಟ್ಟದ ಪ್ರಥಮ ಗಜಲ್ ಸಮ್ಮೇಳನ

ಕಲಬುರಗಿ, ಆ. 20 - ಕರ್ನಾಟಕ ಗಜಲ್ ಅಕಾಡೆಮಿ ಬೆಂಗಳೂರು ವತಿಯಿಂದ ಸಹಕಾರದೊಂದಿಗೆ ಇದೇ ಆಗಸ್ಟ್ 25 ರಂದು ಒಂದು…

7 mins ago

ಸಿದ್ದರಾಮಯ್ಯ ಅವರದು ಹೆದರುವ ರಕ್ತವಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಕಲಬುರಗಿ: ಮುಡಾ ಹಗರಣದ ತನಿಖೆಗೆ ಮುಖ್ಯಮಂತ್ರಿಗಳೇ ನ್ಯಾಯಾಂಗ ಸಮಿತಿ ರಚಿಸಿ ತನಿಖೆಗೆ ಆದೇಶ ನೀಡಿದ್ದಾರೆ. ನಲವತ್ತು ವರ್ಷ ರಾಜಕಾರಣ ಮಾಡಿಕೊಂಡು…

10 mins ago

ನ್ಯಾಯಮೂರ್ತಿ ಡಾ. ಶಿವರಾಜ ವಿ. ಪಾಟೀಲರ ನುಡಿಮುತ್ತುಗಳು ಜೀವನದಲ್ಲಿ ಅಳವಡಿಸಿಕೊಳ್ಳಿ

ಕಲಬುರಗಿ: ನಗರದ ಜಸ್ಟಿಸ್ ಶಿವರಾಜ ವಿ. ಪಾಟೀಲ ಪ್ರತಿಷ್ಠಾನ ಮತ್ತು ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಕಲಬುರಗಿಯಲ್ಲಿ ಶ್ರಾವಣ…

19 hours ago

ಛಾಯಾಚಿತ್ರ ಪ್ರದರ್ಶನ ಭಾಷೆಯಷ್ಟೇ ಪ್ರಬಲ ಮಾಧ್ಯಮ

ಕಲಬುರಗಿ : ಒಂದು ಛಾಯಾಚಿತ್ರ ನೂರು ಪದಗಳಲ್ಲಿ ಹೇಳಬಹುದಾದೊಂದನ್ನು ಪರಿಣಾಮಕಾರಿ ಹೇಳುತ್ತದೆ, ಅದು ಭಾಷೆಯಷ್ಟೇ ಪ್ರಬಲ ಮಾಧ್ಯಮ ಎಂದು ಹಿರಿಯ…

19 hours ago

ಕಲಬುರಗಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು 29 ರಂದು: ಸರ್ವಾಧ್ಯಕ್ಷೆ ಲೇಖಕಿ ಪ್ರಮೀಳಾ ಜಾನಪ್ಪಗೌಡಗೆ ಸನ್ಮಾನ

ಕಲಬುರಗಿ: ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಆಗಷ್ಟ್ 29 ರಂದು ಹಮ್ಮಿಕೊಂಡಿರುವ ತಾಲೂಕಾ 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420