ಚಿಕ್ಕಮಗಳೂರು: ಹಾಳು ಬಿದ್ದಿರುವ ರಸ್ತೆ ದುರಸ್ತಿಗೆ SDPI ಆಗ್ರಹಿಸಿ ಪ್ರತಿಭಟನೆ

0
120

ಚಿಕ್ಕಮಗಳೂರು : ನಗರದ ಪ್ರಮುಖ ರಸ್ತೆಗಳು ಸೇರಿದಂತೆ ಎಲ್ಲಾ ರಸ್ತೆಗಳಲ್ಲಿ ಉಂಟಾಗಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕಾರ್ಯಕರ್ತರು ನಗರದಲ್ಲಿಂದು ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್ ವ್ರತ್ತದಲ್ಲಿ ಸಮಾವೇಶಗೊಂಡ SDPI ಕಾರ್ಯಕರ್ತರು ನಗರಸಭೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿ ಅವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಮಾತನಾಡಿದ SDPI ಜಿಲ್ಲಾಧ್ಯಕ್ಷರಾದ ಅಜ್ಮತ್ ಪಾಷ ರವರು ಸರ್ಕಾರ ವಿವಿಧ ಇಲಾಖೆಗಳ ಮೂಲಕ ಸಾರ್ವಜನಿಕರಿಂದ ತೆರಿಗೆ ವಸೂಲಿ ಮಾಡಲಾಗುತ್ತಿದೆ, ಆದರೆ ತೆರಿಗೆ ಹಣವನ್ನು ಅಭಿವೃಧ್ಧಿ ಕಾರ್ಯಗಳಿಗೆ ವಿನಿಯೋಗಿಸದೆ ಸಾರ್ವಜನಿಕರನ್ನು ವಂಚಿಸಲಾಗುತ್ತಿದೆ, ನಗರಸಭೆ ಸಾರ್ವಜನಿಕರಿಗೆ ಅಗತ್ಯ ನಾಗರಿಕ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು.

ಸಾರ್ವಜನಿಕರ ಸಮಸ್ಯೆಗಳನ್ನು ಬಲವಾಗಿ ಮುಂದಿರಿಸಿ ಸರ್ಕಾರ ವನ್ನು ಎಚ್ಚರಿಸಬೇಕಾದ ವಿರೋಧ ಪಕ್ಷಗಳು ಆಡಳಿತ ಪಕ್ಷದೊಂದಿಗೆ ಹೊಂದಾಣಿಕೆ ರಾಜಕೀಯ ಮಾಡುತ್ತಿದೆ ಎಂದರು.ನಗರದ ಎಲ್ಲಾ ರಸ್ತೆ ಗುಂಡಿಗಳನ್ನು ಸಂಬಂಧ ಪಟ್ಟ ಇಲಾಖೆ ಶೀಘ್ರದಲ್ಲೇ ಸರಿಪಡಿಸಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಎಲ್ಲಾ ಪ್ರಗತಿಪರ ಸಂಘಟನೆಗಳು ಒಟ್ಟು ಗೂಡಿ ಬೃಹತ್ ಹೋರಾಟ ನಡೆಸುವುದಾಗಿ ತಿಳಿಸಿದರು.

ಈ ಸಂಧರ್ಭದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ಅಜ್ಮತ್ ಪಾಷ, ಕಾರ್ಯದರ್ಶಿ ಮೊಹ್ಸೀನ್ ಪಿಎಫ್ಐ ವಲಯ ಕಾರ್ಯದರ್ಶಿ ಮುಬಾರಕ್, ಎಸ್ಡಿಪಿಐ ಜಿಲ್ಲಾ ನಾಯಕರಾದ ತನ್ವೀರ್, ಮುನೀರ್, ಸಾರ್ವಜನಿಕರು ಹಾಗು ಎಸ್ಡಿಪಿಐ ಕಾರ್ಯಕರ್ತರು, ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here