ಸುರಪುರ: ಕಲ್ಯಾಣ ಕರ್ನಾಟಕ ಭಾಗದಲ್ಲಿನ ಪ್ರವಾಹ ಪರಸ್ಥಿತಿ ವೀಕ್ಷಣೆಗೆ ಆಗಮಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ಹಾಗು ಸಂಸದ ನಳಿನಕುಮಾರ ಕಟೀಲ್ ಅವರು ಸುರಪುರಕ್ಕೆ ಭೇಟಿ ನೀಡಿದರು.
ನಗರದ ಬಿಜೆಪಿ ಕಚೇರಿ ಹಾಗು ಶಾಸಕರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ನಾಯಕತ್ವ ಬದಲಾವಣೆ ಇಲ್ಲ ಎಲ್ಲವೂ ಬರೀ ಊಹಾಪೋಹಗಳಾಗಿವೆ ಎಂದು ಬಿಜೆ ಸ್ಪಷ್ಟಪಡಿಸಿದರು.
ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ನೀಡಿರುವ ಮುಖ್ಯಮಂತ್ರಿ ಬದಲಾವಣೆ ಕುರಿತ ಹೇಳಿಕೆಗೆ ಪ್ರತಿಕ್ರಿಯಿಸಿ ಯಾವುದೇ ಕಾರಣಕ್ಕೂ ಯಡಿಯೂರಪ್ಪನವರ ಬದಲಾವಣೆ ಇಲ್ಲ,ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೆ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಯತ್ನಾಳ ಮಾತನ್ನು ಅಲ್ಲಗಳೆದರು. ಈಗಾಗಲೆ ಪ್ರವಾಹ ಸ್ಥಳಗಳನ್ನು ವೀಕ್ಷಣೆ ಮಾಡಿ ಬಂದಿರುವೆ,ನೆರೆಯಿಂದ ತೊಂದರೆಗೊಳಗಾದ ಎಲ್ಲರ ನೆರವಿಗೆ ಸರಕಾರವಿದೆ.ಸಂತ್ರಸ್ತರಿಗೆ ಅಗತ್ಯ ಸೌಲಭ್ಯವನ್ನು ಸರಕಾರ ಮಾಡಲಿದೆ,ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ ತಾತ್ಕಾಲಿಕ ಪರಿಹಾರವಾಗಿ ೧೦ ಸಾವಿರ ರೂಪಾಯಿಗಳನ್ನು ಅವರ ಖಾತೆಗೆ ಹಾಕಲಾಗುತ್ತಿದೆ.ಕೇಂದ್ರ ಸರಕಾರ ಪರಿಹಾರದ ಹಣವನ್ನು ಬಿಡುಗಡೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿ,ಹಿಂದೆ ಸಿದ್ರಾಮಣ್ಣನವರ ಸರಕಾರವಿದ್ದಾಗ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ ಎಂದು ಒಮ್ಮೆ ನೋಡಿಕೊಳ್ಳಲಿ ಎಂದು ಸಿದ್ರಾಮಯ್ಯನವರ ಹೇಳಿಕೆಗೆ ಟಾಂಗ್ ನೀಡಿದರು.
ಪರಿಶಿಷ್ಟ ಪಂಗಡಕ್ಕೆ ೭.೫ ಮೀಸಲಾತಿ ಪ್ರಮಾಣ ಹೆಚ್ಚಳದ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾನೂನಿನ ಅಡಿಯಲ್ಲಿ ಏನು ಮಾಡಲು ಸಾಧ್ಯವಿದೆ ಅದನ್ನು ಸರಕಾರ ಮಾಡಲಿದೆ ಎಂದರು.ಶಾಸಕರು ಮೀಸಲಾತಿ ಹೆಚ್ಚಳಕ್ಕಾಗಿ ರಾಜೀನಾಮೆ ನೀಡಲು ಸಿದ್ಧ ಎನ್ನುತ್ತಾರೆ ಎಂದಾಗಿ ಯಾವುದೇ ಉತ್ತರ ನೀಡದೆ ಮುಗಳ್ನಗೆಯಿಂದ ಜಾರಿಕೊಂಡರು.ಅಲ್ಲದೆ ಶ್ರೀರಾಮುಲು ಅವರು ನ್ಮಮ ಪಕ್ಷದ ದೊಡ್ಡ ನಾಯಕರು ಅವರು ಬಯಸಿದಂತೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ ಹಾಗು ರಾಜುಗೌಡರು ತಮಗೆ ಸಿಕ್ಕ ಜವಬ್ದಾರಿಯಲ್ಲಿ ಉತ್ತಮವಾಗಿ ಕೆಲಸ ಮಾಡಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ನಳೀನಕುಮಾರ್ ಕಟೀಲ್ ಅವರಿಗೆ ಅನೇಕ ವಿವಿಧ ಸಮಸ್ಯೆಗಳ ಕುರಿತು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ನರಸಿಂಹ ನಾಯಕ (ರಾಜುಗೌಡ) ಯಾದಗಿರಿ ಶಾಸಕ ವೆಂಕಟರಡ್ಡಿ ಮುದ್ನಾಳ ಸೇಡಂ ಶಾಸಕ ರಾಜಕುಮಾರ ಪಾಟೀಲ್ ಬಿಜೆಪಿ ಜಿಲ್ಲಾಧ್ಯಕ್ಷ ಶರಣಭೂಪಾಲ ರಡ್ಡಿ ಸ್ಥಳಿಯ ಮುಖಂಡರಾದ ರಾಜಾ ಹನಮಪ್ಪ ನಾಯಕ (ತಾತಾ) ಹೆಚ್.ಸಿ ಪಾಟೀಲ್ ಬಸನಗೌಡ ಹಳ್ಳಿಕೋಟೆ ಭೀಮಾಶಂಕರ ಬಿಲ್ಲವ್ ದೇವರಾಜ ನಾಯಕ ರಂಗನಗೌಡ ದೇವಿಕೇರಾ ಶ್ರೀನಿವಾಸ ನಾಯಕ ದರಬಾರಿ ದೊಡ್ಡದೆಸಾಯಿ ದೇವರಗೋನಾಳ ಸಣ್ಣ ದೇಸಾಯಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…
ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…