ಕೋವಿಡ್ ನಿಯಮ ಪಾಲಿಸಿ ಕೊರೊನಾ ದಿಂದ ದೂರವಿರಿ: ಡಿವೈಎಸ್ಪಿ ವೆಂಕಟೇಶ ಸಲಹೆ

ಸುರಪುರ: ಇಂದು ಕೊರೊನಾ ಹೆಚ್ಚಾಗಲು ಜನರ ನಿರ್ಲಕ್ಷ್ಯವೇ ಮುಖ್ಯ ಕಾರಣವಾಗಿದೆ.ಆದ್ದರಿಂದ ಎಲ್ಲರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ ಹುಗಿಬಂದಿ ತಿಳಿಸಿದರು.

ಪೊಲೀಸ್ ಇಲಾಖೆ ಹಾಗು ಗೃಹ ರಕ್ಷಕ ದಳದಿಂದ ಹಮ್ಮಿಕೊಳ್ಳಲಾದ ಕೊರೊನಾ ಜಾಗೃತಿ ಹಾಗು ಉಚಿತ ಮಾಸ್ಕ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ,ಕೊರೊನಾ ಸೊಂಕಿಗೆ ಯಾವುದೇ ಮದ್ದು ಇಲ್ಲ ಆದರೆ ಎಲ್ಲರು ನಿತ್ಯವು ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಹಾಗು ಆಗಾಗ ಕೈಗಳನ್ನು ಸಾಬೂನಿನಿಂದ ತೊಳೆಯುತ್ತಿದ್ದರೆ ಕೊರೊನ ಹರಡುವುದನ್ನು ತಡೆಯಲು ಸಾಧ್ಯವಿದೆ ಎಂದರು.

ಪೊಲೀಸ್ ಇನಸ್ಪೆಕ್ಟರ್ ಎಸ್.ಎಮ್.ಪಾಟೀಲ್ ಮಾತನಾಡಿ,ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮಾಸ್ಕ್ ಧರಿಸದೆ ಹೊರಗಡೆ ಬಂದವರಿಗೆ ದಂಡ ವಿಧಿಸಲಾಗುವದು.ಆದ್ದರಿಂದ ಎಲ್ಲರು ಕಡ್ಡಾಯವಾಗಿ ಮಾಸ್ಕ್ ಧರಿಸುವುದನ್ನು ರೂಢಿಸಿಕೊಳ್ಳುವಂತೆ ಕರೆ ನೀಡಿದರು.

ಗೃಹರಕ್ಷಕ ದಳದ ಕಂಪನಿ ಕಮಾಂಡರ್ ಯಲ್ಲಪ್ಪ ಹುಲಕಲ್ ಮಾತನಾಡಿ,ಇಂದು ಸರಕಾರದ ನಿಯಮದಂತೆ ಕೊರೊನಾ ಜಾಗೃತಿ ಅಭಿಯಾನ ನಡೆಸಲಾಗುತ್ತಿದೆ.ಸಾರ್ವಜನಿಕರು ಇಲಾಖೆಗಳ ಶ್ರಮವನ್ನು ಅರ್ಥ ಮಾಡಿಕೊಂಡು ಕೋವಿಡ್ ನಿಯಮಗಳನ್ನು ಪಾಲಿಸಿದಲ್ಲಿ ಕೊರೊನಾ ಮುಕ್ತ ಸಮಾಜ ನಿರ್ಮಾಣವಾಗಲಿದೆ.ಸಾರ್ವಜನಿಕರು ಇದನ್ನು ಅರಿತುಕೊಳ್ಳಬೇಕೆಂದರು.ಇದೇ ಸಂದರ್ಭದಲ್ಲಿ ರಾಜು ಪುಲ್ಸೆ ಇತರರು ಮಾತನಾಡಿದರು.

ಇದೇ ಸಂದರ್ಭದಲ್ಲಿ ನಗರದಲ್ಲಿ ಜಾಗೃತಿ ಜಾಥಾ ನಡೆಸಿ ಜನರಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪಿಎಸ್‌ಐ ಶರಣಪ್ಪ ಎಎಸ್‌ಐ ಸುರೇಶ ಕುಮಾರ ಹುಣಸಗಿ ಗೃಹರಕ್ಷಕ ದಳದ ಅಧಿಕಾರಿ ಆಶಿಕ್ ಅಲಿ ರಮೇಶ ಅಂಬುರೆ ಮುಖ್ಯ ಪೇದೆ ಮನೋಹರ ರಾಠೋಡ ಮಂಜುನಾಥ ಹಿರೇಮಠ ಭೀಮರಾಯ ಸಗರ ಸೇರಿದಂತೆ ಅನೇಕ ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

3 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420