ಸೇಡಂ: ಲೋಕಸಭಾ ಸದಸ್ಯರಾದ ಡಾ. ಉಮೇಶ್ ಜಾಧವ್ ಅವರು ಕೆಲವು ದಿನಗಳ ಹಿಂದಷ್ಟೇ ತಾಲ್ಲೂಕಿನ ಮಾಲ್ಖೆಡ್ ಗ್ರಾಮದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ವೇಳೆ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಪೀಡಿತ ಕುಟುಂಬಕ್ಕೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಭರವಸೆ ನೀಡಿದರು ಎಂದು ಹೋರಾಟಗಾರರಾದ ಉಮರ್ ಖಾನ್ ತಿಳಿಸಿದ್ದಾರೆ.
ಸಂಸದರ ಎದರುರು ಭರವಸೆ ನೀಡಿರುವುದನ್ನು ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ 23 ರಂದು ಪಟ್ಟಣದ ತಹಶೀಲ್ ಕಚೇರಿ ಮುಂದೆ ಪ್ರತಿಭಟನೆ ಹಮ್ಮಿಕೊಳಲಾಗಿದೆಂದು ಅವರು ತಿಳಿಸಿದ್ದಾರೆ.
ಶಾಸಕರ ಸುಳ್ಳು ಭರವಸೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಭರವಸೆಯನ್ನು ಈಡೇರಿಸಬೇಕೆಂದು ಒತ್ತಾಯಿಸಲಾಗುವುದು ಮತ್ತು ಈ ವೇಳೆಯಲ್ಲಿ ತಹಶೀಲ್ದಾರ್ ಅವರು ಪ್ರವಾಹ ಸಂಕಷ್ಟಕ್ಕೆ ಸಿಲುಕಿದ ತಾಲ್ಲೂಕು ನಿವಾಸಿಗಳಿಗೆ ಪರಿಹಾರದ ಬಿಡುಗಡೆ ಮಾಡಬೇಕಂದು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು ಅವರು ತಿಳಿಸಿದ್ದಾರೆ.