ಚರಣ್‌ ಸೌಹಾರ್ದ ಕೋ – ಆಪ್‌ ಬ್ಯಾಂಕಿನ ಮೊಬೈಲ್‌ ಬ್ಯಾಂಕಿಂಗ್‌ ಸೌಲಭ್ಯಕ್ಕೆ ಚಾಲನೆ

ಬೆಂಗಳೂರು: ಆಧುನಿಕ ಜಗತ್ತಿನ ವೇಗದ ತಂತ್ರಜ್ಞಾನವನ್ನು ಸಮರ್ಪಕವಾಗಿ ಅಳವಡಿಕೆಯಿಂದ ಮಾತ್ರ ಬ್ಯಾಂಕ್‌ನಂತಹ ಸಂಸ್ಥೆಗಳು ಅಭಿವೃದ್ದಿ ಹೊಂದಲು ಸಾ‍ಧ್ಯ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮನು ಬಳಿಗಾರ್‌ ಅಭಿಪ್ರಾಯಪಟ್ಟಿದ್ದಾರೆ.

ನಗರದ ಬಸವನಗುಡಿಯಲ್ಲಿನ ಚರಣ್‌ ಸೌಹಾರ್ದ ಕೋ- ಆಫರೇಟಿವ್‌ ಬ್ಯಾಂಕಿನ ವತಿಯಿಂದ ರಾಜ್ಯದಲ್ಲೇ ಮೊದಲ ಬಾರಿಗೆ ಚರಣ್‌ ಸಹಕಾರ ಬ್ಯಾಂಕು ತನ್ನ ಗ್ರಾಹಕರಿಗೆ ಹೊರತಂದಿರುವ ಮೊಬೈಲ್‌ ಬ್ಯಾಂಕಿಂಗ್‌ ಸೌಲಭ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಗತ್ತು ಕರೋನಾದಿಂದ ತೀವ್ರ ಸಂಕಷ್ಟಕ್ಕೆ ಈಡಾಗಿದೆ. ಇಂತಹ ದುರಿತ ಕಾಲದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳೊಂದಿಗೆ ಸ್ಪರ್ಧೆ ನಡೆಸುವಂತಹ ಸಹಕಾರ ಬ್ಯಾಂಕುಗಳು ಆಧುನಿಕ ತಂತ್ರಜ್ಞಾನನ್ನು ಅಳವಡಿಸಿಕೊಳ್ಳುವ ಮೂಲಕ ಗ್ರಾಹಕರುಗಳಿಗೆ ಉತ್ತಮ ಸೌಲಭ್ಯ ಒದಗಿಸಲು ಮುಂದಾಗುತ್ತಿರುವುದು ಬಹಳ ಸಂತಸದ ವಿಷಯವಾಗಿದೆ. ಆಧುನಿಕ ತಂತ್ರಜ್ಞಾನಗಳ ಅಳವಡಿಕೆಯಿಂದ ಬ್ಯಾಂಕಿನ ಹಲವಾರು ಸೌಲಭ್ಯಗಳು ಗ್ರಾಹಕರ ಕೈ ತುದಿಯಲ್ಲಿಯೇ ಲಭ್ಯವಾಗುವಂತೆ ಮಾಡಲಾಗಿದೆ. ಆಧುನಿಕತೆಯನ್ನು ಅಳವಡಿಸಿಕೊಳ್ಳುವುದು ಎಲ್ಲಾ ಸಂಸ್ಥೆಗಳಿಗೂ ಅನಿವಾರ್ಯ. ಜಗತ್ತಿನ ವೇಗದ ಜೊತೆ ಹೆಜ್ಜೆ ಹಾಕದಿದ್ದಲ್ಲಿ ಸಂಸ್ಥೆಗಳು ಅಭಿವೃದ್ದಿ ಸಾಧಿಸುವುದು ಸಾಧ್ಯವಿಲ್ಲ ಎಂದು ಹೇಳಿದರು.

ಚರಣ್‌ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷರಾದ ಬಿ.ವಿ ದ್ವಾರಕಾನಾಥ್‌ ಮಾತನಾಡಿ, ನಮ್ಮ ಗ್ರಾಹಕರ ಹೊಸದನ್ನ ಹಾಗೂ ಆಧುನಿಕ ತಂತ್ರಜ್ಞಾನವನ್ನು ನೀಡುವುದು ನಮ್ಮ ಪ್ರಮುಖ ಆದ್ಯತೆ ಆಗಿದೆ. ಈ ಮೊಬೈಲ್‌ ಬ್ಯಾಂಕಿಂಗ್‌ ಸೇವೆಯ ಮೂಲಕ ಗ್ರಾಹಕರು 24 ತಾಸುಗಳ ಕಾಲವೂ ಕೂಡಾ ತಮ್ಮ ಮೊಬೈಲ್‌ ನಿಂದಲೇ ಬ್ಯಾಲೇನ್ಸ್‌ ನ ಬಗ್ಗೆ ಮಾಹಿತಿ, ಮಿನಿ ಸ್ಟೇಟ್‌ಮೆಂಟ್‌, ಹಣ ವರ್ಗಾವಣೆ, ಹತ್ತಿರದ ಏಟಿಎಂ ಗಳನ್ನು ಹುಡುಕುವಂತಹ ಹಲವಾರು ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಐಆರ್‌ಸಿ ದ ಇನ್ಸಿಟ್ಯೂಟ್‌ ಆಫ್‌ ಚಾರ್ಟರ್ಡ ಅಕೌಂಟಂಟ್ಸ್‌ ಆಫ್‌ ಇಂಡಿಯಾದ ಅಧ್ಯಕ್ಷರಾದ ಪಂಪಣ್ಣ ಬಿ ಇ, ಚರಣ್‌ ಸೌಹಾರ್ದ ಬ್ಯಾಂಕಿನ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಬಿ.ವಿ ದ್ವಾರಕಾನಾಥ್‌ ಹಾಗೂ ನಿರ್ದೇಶಕರುಗಳು ಹಾಗೂ ಬೆಂ ಕೋ ಶ್ರೀನಿವಾಸ್‌ ಅವರು ಉಪಸ್ಥಿತರಿದ್ದರು

emedialine

Recent Posts

ವಿಕಲಚೇತರಿಗೆ ಅನುಕಂಪ ಬೇಡ ಮನುಷ್ಯರಂತೆ ಕಾಣಿ: ಡಾ.ಗವಿಸಿದ್ಧಪ್ಪ ಪಾಟೀಲ

ಬಸವಕಲ್ಯಾಣ: ವಿಕಲಚೇತನರು ತಮ್ಮ ಅಂಗವಿಕಲತೆ ಬಗ್ಗೆ ಅಗೌರವ ತಾಳಲಾರದೇ,ಅನುಕಂಪ ತೋರಿಸದೇ ಸ್ವ ಪ್ರತಿಭೆ ಹೊಂದಿದ ಅವರಿಗೆ ಮೂಲಭೂತ ಸೌಲಭ್ಯ ಗಳನ್ನು…

7 hours ago

ಸತ್ಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ

ಕಲಬುರಗಿ: ಸ್ಥಾಪಿತ ಸಿದ್ಧಾಂತ ಹೊಡೆದು ಹಾಕಿ ಅವೈದಿಕ ವಚನ ಸಾಹಿತ್ಯವನ್ನು ಜನಮಾನಸಕ್ಕೆ ಮುಟ್ಟಿಸಿದ ಡಾ.‌ಎಂ.ಎಂ.‌ಕಲಬುರ್ಗಿ ಯವರು ಸತ್ಯದ ಸಂಶೋಧಕರಾಗಿದ್ದರು ಎಂದು…

8 hours ago

ಮಕ್ಕಳೊಂದಿಗೆ ಹುಟ್ಟ ಹುಬ್ಬ ಆಚರಿಸಿಕೊಂಡ ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಸಂಜೆ ತಮ್ಮ ಹುಟ್ಟು ಹಬ್ಬವನ್ನು ಕಲಬುರಗಿ ನಗರದ ಆಳಂದ ನಾಕಾ ರಸ್ತೆಯಲ್ಲಿರುವ…

9 hours ago

ಚಿಂಚೋಳಿ ಗ್ರಾಮ ಅಡಳಿತಾಧಿಕಾರಿಗೆ ಡಿ.ಸಿ. ಪ್ರಶಂಸನಾ ಪತ್ರ; ಪಹಣಿಗೆ ಆಧಾರ್ ಜೋಡಣೆಯಲ್ಲಿ ಸಾಧನೆ

ಕಲಬುರಗಿ; ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಪಹಣಿಗೆ ಆಧಾರ್ ಜೋಡಣೆ ಮತ್ತು ಸರ್ಕಾರಿ ಜಮೀನುಗಳ ಸಂರಕ್ಷಣೆಯ ಲ್ಯಾಂಡ್ ಬೀಟ್ ಅಪ್ಲಿಕೇಶನ್ ನಲ್ಲಿ…

9 hours ago

ಉಚಿತ ಆರೋಗ್ಯ ತಪಾಸಣೆ| ರಾಜಾ ಕೃಷ್ಣಪ್ಪ ನಾಯಕ ಚಾಲನೆ

ಸುರಪುರ: ಹಿಂದಿನ ಕಾಲದಲ್ಲಿ ಅನೇಕ ಜನ ರಾಜರು ಸ್ವತಃ ತಾವೇ ಪಾರಂಪರಿಕ ವೈದ್ಯರಾಗಿದ್ದು ಬೇಟೆಗೆ ಹೋದ ಸಂದರ್ಭದಲ್ಲಿ ತಾವೇ ಮದ್ದು…

9 hours ago

ಲೋಕಾಯುಕ್ತ ಪೊಲೀಸ್ ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ

ಸುರಪುರ: ಸಾರ್ವಜನಿಕರು ತಮ್ಮ ಕೆಸಲ ಕಾರ್ಯಗಳಿಗಾಗಿ ಕಚೇರಿಗೆ ಬಂದಾಗ ವಿಳಂಬ ಮಾಡದೆ ನ್ಯಾಯಯುತವಾದ ಅರ್ಜಿಗಳ ಕೆಲಸ ಮಾಡಿಕೊಡುವಂತೆ ಕರ್ನಾಟಕ ಲೋಕಾಯುಕ್ತ…

9 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420