ಕಲಬುರಗಿ: ನಿನ್ನೆ ಜಿಲ್ಲೆಯ ಹಿರಿಯ ಹೋರಾಟಗಾರರ ಕೋವಿಡ್ ಸೋಂಕಿನಿಂದ ನಿಧನರಾದ ಮಾರುತಿ ಮಾನ್ಪಡೆ ಅವರ ಅಂತ್ಯ ಸಂಸ್ಕಾರ ಕಮಲಾಪುರ ತಾಲೂಕಿನ ಅಂಬಲಗಾ ಗ್ರಾಮದಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ, ಕೆಂಪು ವಂದನೆಗಳ ಜೈಕಾರದ ನಡುವೆ ನೆರವೇರಿಸಲಾಯಿತು.
ಇಂದು ಪೂರ್ವಹ್ನ ಮಾರುತಿ ಮಾನ್ಪಡೆ ಪಾರ್ಥಿವ ಶರೀರ ಸೊಲ್ಲಾಪುರದಿಂದ ಅಂಬುಲೆನ್ಸ್ನಲ್ಲಿ ತರಲಾಯಿತು. ಈ ವೇಳೆಯಲ್ಲಿ ಲಾಡಮುಗಳಿ, ಮುನ್ನಳ್ಳಿ, ಬೆಳಮಗಿ, ಅಂಬಲಗಾ ಕ್ರಾಸ್ನಲ್ಲಿ ನಿಂತಿದ್ದ ಸಾವಿರಾರು ಮಂದಿ ಮತ್ತು ಸಿಪಿಎಂ ಕಾರ್ಯಕರ್ತರು ಪಾರ್ಥಿವ ಶರೀರಕ್ಕೆ ಹೂಗಳು ಹಾಕಿ ಕೆಂಪು ವಂದನೆಗಳ ಜೈಕಾರ ಹಾಕುವ ಮೂಲಕ ವಂದನೆ ಸಲ್ಲಿಸಿದರು.
ಮಾನ್ಪಡೆ ಅವರ ಅಂತ್ಯ ಸಂಸ್ಕಾರದ ವೇಳೆ ಕೋವಿಡ್-19 ಮುಂಜಾಗ್ರತೆಗಾಗಿ ಕುಟುಂಬಸ್ಥರು ಸೇರಿ 20 ಮಂದಿ ಪಿಪಿಟಿ ಕಿಟ್ ಧರಿಸಿದ್ದವರಿಗೆ ಮಾತ್ರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಯಿತು.
ಸಿಪಿಎಂ ಪಕ್ಷದ ಕಾರ್ಯದರ್ಶಿ ಶರಣಬಸಪ್ಪ ಮಮಶೇಟ್ಟಿ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಭೀಮಶಂಕರ ಮಾಡಿಯಾಳ, ಯು.ಬಸವರಾಜು. ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ, ಗ್ರಾಮ ಪಂಚಾಯತ್ ನೌಕರರ ಸಂಘದ ರಾಜ್ಯ ಖಜಾಂಚಿ ಬಸವರಾಜ ಸರಡಗಿ, ಹಾಗೂ ಪ್ರಗತಿಪರ ಸಂಘಟನೆಗಳ ನಾಯಕರು ಅತ್ಯಂಸ್ಕಾರದಲ್ಲಿ ಭಾಗವಹಿಸಿದರು.
ಈ ವೇಳೆಯಲ್ಲಿ ಕಮಲಾಪುರ ತಾಲೂಕಿನ ತಹಶೀಲ್ದಾರ್, ಆರೋಗ್ಯ ಸಿಬ್ಬಂದಿ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೇರವೆರಿತು.
ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…
ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…
ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್ನ ದಾಸ್ನಾ…
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…
ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…
ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…