ಶಹಾಪುರ: 25 ರಂದು ಬೆಳಕಹನಿ ಕೃತಿ ಲೋಕಾರ್ಪಣೆ

1
244

ಶಹಾಪುರ: ಯುವ ಸಾಹಿತಿ ಹಾಗೂ ಶಿಕ್ಷಕ ಶ್ರೀ ಜ್ಯೋತಿ ನಾಯ್ಕ ರಚಿಸಿದ ಬೆಳಕಹನಿ ಕೃತಿ ಇದೇ ತಿಂಗಳು 25 ರಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ ಎಂದು ಕಸಾಪ ಗೌರವ ಕಾರ್ಯದರ್ಶಿಗಳಾದ ಬಸವರಾಜ ಸಿನ್ನೂರ ಪ್ರಕಟಣೆಗೆ ತಿಳಿಸಿದ್ದಾರೆ.

ಅಂದು ಬೆಳಿಗ್ಗೆ 10:30 ಕ್ಕೆ ಬೆಳಕಹನಿ ಕೃತಿ ಬಿಡುಗಡೆ ಹಾಗೂ ದಸರಾ ಕವಿಗೋಷ್ಠಿ ಕಾರ್ಯಕ್ರಮವನ್ನು ಅಬಕಾರಿ ಡಿವೈಎಸ್ಪಿ ಶ್ರೀರಾಮ್ ಬಿ. ರಾಠೋಡ ಉದ್ಘಾಟಿಸಲಿದ್ದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೆಗುಂದಿ ಕೃತಿ ಬಿಡುಗಡೆಗೊಳಿಸಲಿದ್ದಾರೆ.ಖ್ಯಾತ ಕಥೆಗಾರ ಹಿರಿಯ ಸಾಹಿತಿ ಸಿದ್ಧರಾಮ ಹೊನ್ಕಲ್ ಈ ಕೃತಿಯ ಕುರಿತು ಮಾತನಾಡಲಿದ್ದಾರೆ.ನಂತರ ಜರುಗುವ ಕವಿಗೋಷ್ಠಿ ಅಧ್ಯಕ್ಷತೆಯನ್ನು ಯುವಸಾಹಿತಿ ಬಂಡಾಯ ಬರಹಗಾರರು ಡಾ.ಗಾಳೆಪ್ಪ ಪೂಜಾರಿ ವಹಿಸಿಕೊಳ್ಳಲಿದ್ದಾರೆ.

Contact Your\'s Advertisement; 9902492681

ಕಲಬುರಗಿ ವಿಶ್ವಜ್ಯೋತಿ ಪ್ರತಿಷ್ಠಾನದ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ರುದ್ರಗೌಡ ಪಾಟೀಲ್,ರೇಖು ಚವ್ಹಾಣ,ಡಾ:ಜಗದೀಶ್ ಉಪ್ಪಿನ್,ಸಾಹಿತಿ ಸುರೇಶ ಕಂಬಳಿ,ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಸುಮಾರು 20 ಕ್ಕೂ ಹೆಚ್ಚು ಯುವ ಕವಿಗಳು ಭಾಗವಹಿಸಿ ತಮ್ಮ ಸ್ವರಚಿತ ಕವನ ವಾಚಿಸಲಿದ್ದಾರೆ ಎಂದು ತಿಳಿಸಿದ್ದಾರೆ.

1 ಕಾಮೆಂಟ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here