ಎಸ್ಟಿಗೆ ವಾಲ್ಮೀಕಿ ಸಮಾಜ ಬಿಟ್ಟು ಬೇರೆ ಸಮಾಜ ಸೇರಿಸಲು ನಾವು ಬಿಡಲ್ಲ: ವರದಾನಂದ ಶ್ರೀ ಎಚ್ಚರಿಕೆ

ಸುರಪುರ: ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ೭.೫ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ನಗರದ ತಹಸೀಲ್ ಕಚೇರಿ ಮುಂದೆ ಸಾಂಕೇತಿಕ ಧರಣಿ ನಡೆಸಿದರು.

ಧರಣಿಯ ನೇತೃತ್ವ ವಹಿಸಿದ್ದ ಗೋಲಪಲ್ಲಿ ಶ್ರೀ ವಾಲ್ಮೀಕಿ ಗುರು ಪೀಠದ ವರದಾನೇಶ್ವರ ಸ್ವಾಮೀಜಿ ಮಾತನಾಡಿ,ನಮ್ಮ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ೭.೫ಕ್ಕೆ ಹೆಚ್ಚಿಸಲು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ. ಆದರೆ ಸರಕಾರಗಳು ನಮಗೆ ವಂಚಿಸುತ್ತಿವೆ.ಇನ್ನು ಮುಂದೆ ನಮ್ಮ ಸಮುದಾಯ ಉಗ್ರ ಪ್ರತಿಭಟನೆಗೆ ಇಳಿಯಲಿದೆ ಎಂದು ಎಚ್ಚರಿಸಿದರು.

ಅಲ್ಲದೆ ಇಂದು ಅನೇಕ ಸಮುದಾಯಗಳು ನಮ್ಮನ್ನು ಎಸ್ಟಿಗೆ ಸೇರಿಸಿ ಎಂದು ಕೇಳುತ್ತಿದ್ದಾರೆ.ಆದರೆ ಸರಕಾರ ಯಾವುದೇ ಸಮುದಾಯವನ್ನು ಎಸ್ಟಿಗೆ ಸೇರಿಸಲು ಬಿಡುವುದಿಲ್ಲ. ಯಾವುದೇ ಸಮುದಾಯ ತಮಗೆ ಮೀಸಲಾತಿ ಕೇಳಲಿ ಆದರೆ ಪರಿಶಿಷ್ಟ ಪಂಗಡವೇ ಯಾಕೆ ಬೇಕು,ಹಾಗೊಮ್ಮೆ ಎಸ್ಟಿ ಬೇಕೆನ್ನುವವರು ತಮ್ಮ ಜಾತಿಯನ್ನು ಬಿಟ್ಟು ನಮ್ಮ ಜಾತಿಗೆ ಸೇರಿಕೊಳ್ಳಲಿ ಎಂದು ವಿವಾದದ ಮಾತನಾಡಿದರು.

ನಂತರ ಅನೇಕ ಮುಖಂಡರು ಮಾತನಾಡಿ,ನಾವು ಮೀಸಲಾತಿ ಹೆಚ್ಚಳದ ಬಗ್ಗೆ ಸರಕಾರಕ್ಕೆ ಭಿಕ್ಷೆ ಕೇಳುತ್ತಿಲ್ಲ ನ್ಯಾಯಮೂರ್ತಿ ನಾಗಮೋಹನ್‌ದಾಸ್ ಅವರು ನೀಡಿರುವ ವರದಿಯಂತೆ ನಮಗೆ ೭.೫ ಮೀಸಲಾತಿಯನ್ನು ಹೆಚ್ಚಿಸಲು ಕೇಳುತ್ತಿದ್ದೇವೆ.ಬೆಂಗಳೂರಲ್ಲಿ ನಮ್ಮ ಜಗದ್ಗುರುಗಳು ನಡೆಸುತ್ತಿರುವ ಧರಣಿಗೆ ಮಣಿದು ನೀತಿ ಸಂಹಿತೆ ಮುಗಿದ ನಂತರ ನಮ್ಮಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಕೇಳಿದ್ದೇವೆ.ಹಾಗೊಮ್ಮೆ ನಮ್ಮ ಬೇಡಿಕೆ ಈಡೇರಿಸಲು ನಮ್ಮ ಉಗ್ರ ಪ್ರತಿಭಟನೆಯನ್ನು ಹೆದುರಿಸಲು ಸರಕಾರ ಸಜ್ಜಾಗಲಿ ಎಂದು ತಿಳಿಸಿದರು.ಅಲ್ಲದೆ ನಮ್ಮ ಸಮಾಜದ ಮೀಸಲಾತಿಯಿಂದ ಆರಿಸಿ ಬಂದ ಶಾಸಕರು ಮತ್ತು ಮಂತ್ರಿಗಳು ಸ್ವಾಭೀಮಾನವಿದ್ದರೆ ಕೂಡಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೋರಾಟಕ್ಕೆ ಮುಂದಾಗುವಂತೆ ಆಗ್ರಹಿಸಿದರು.

ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ ಸೂಫಿಯಾ ಸುಲ್ತಾನ ಅವರ ಮೂಲಕ ಸಲ್ಲಿಸಿ ನಂತರ ಧರಣಿ ಮುಂದುವರೆಸಿದರು.

ಧರಣಿಯಲ್ಲಿ ಮುಖಂಡರಾದ ರಾಜಾ ರಾಮಪ್ಪ ನಾಯಕ ಜೇಜಿ ನಗರಸಭೆ ಸದಸ್ಯ ಸೋಮನಾಥ ಡೊಣ್ಣಿಗೇರಾ ವೆಂಕೋಬ ದೊರೆ ರಮೇಶ ದೊರೆ ಆಲ್ದಾಳ ವೆಂಕಟೇಶ ಬೇಟೆಗಾರ ರಾಮು ನಾಯಕ ಅರಳಳ್ಳಿ ಅಯ್ಯಣ್ಣ ಹಾಲಬಾವಿ ಹಣಮಂತ ಕಟ್ಟಿಮನಿ ಬೊಮ್ಮನಹಳ್ಳಿ ಭೀಮರಾಯ ಕಡಿಮನಿ ಶಿವರಾಜ ನಾಯಕ ನಾಗರಾಜ ಕಲಬುರ್ಗಿ ಸೇರಿದಂತೆ ಅನೇಕರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

2 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

5 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

5 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

5 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

5 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

5 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420