ಬಿಸಿ ಬಿಸಿ ಸುದ್ದಿ

ಕಲ್ಯಾಣಬಂಧು ತೋಂಟದ ಸಿಂಧು ಗ್ರಂಥ ಲೋಕಾರ್ಪಣೆ

ಭಾಲ್ಕಿ: ಪೂಜ್ಯ ಶ್ರೀ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ನಮ್ಮ ನಾಡು ಕಂಡ ಶ್ರೇಷ್ಠ ಮಹಾನುಭಾವಿಗಳು. ಗದುಗಿನ ತೋಂಟದಾರ್ಯ ಮಠ ಹಾಗೂ ಭಾಲ್ಕಿ ಮಠ ಎರಡಕ್ಕೂ ಅವಿನಾಭಾವ ಸಂಬಂಧವಿದೆ. ಪೂಜ್ಯ ಶ್ರೀ ಚನ್ನಬಸವ ಪಟ್ಟದ್ದೇವರು ಆಯುಷ್ಯದುದ್ದಕ್ಕೂ ಸಮಾಜಕ್ಕಾಗಿ ದುಡಿದರೂ ಬೀದರ ಜಿಲ್ಲೆ ಹೊರತುಪಡಿಸಿ ಕರ್ನಾಟಕದಲ್ಲಿ ಬೇರೆ ಯಾವ ಜಿಲ್ಲೆಯ ಮಠಾಧೀಶರು ಪೂಜ್ಯರಿಗೆ ಆಮಂತ್ರಣ ಕೊಟ್ಟಿರಲಿಲ್ಲ. ಪ್ರಪ್ರಥಮವಾಗಿ ಗದುಗಿನ ಪೂಜ್ಯ ಶ್ರೀ ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು ಪೂಜ್ಯರಿಗೆ ಗದಗ ಜಾತ್ರಾ ಮಹೋತ್ಸವದಲ್ಲಿ ಕರೆಯಿಸಿ ಅದ್ದೂರಿಯಾಗಿ ಸನ್ಮಾನಿಸಿದರು.

ಪೂಜ್ಯರ ಕಾರ್ಯಗಳನ್ನು ಬೀದರ ಜಿಲ್ಲೆಯ ಹೊರಗಡೆ ಪರಿಚಿಯಿಸಿದ ಕೀರ್ತಿ ಜಗದ್ಗುರುಗಳಿಗೆ ಸಲ್ಲುತ್ತದೆ. ಗದಗ ಶ್ರೀಮಠದಲ್ಲಿ ಶ್ರಾವಣ ಮಾಸದ ಒಂದು ತಿಂಗಳು ಪ್ರವಚನದಲ್ಲಿ ಡಾ.ಚನ್ನಬಸವ ಪಟ್ಟದ್ದೇವರ ಚರಿತ್ರೆ ಆ ಭಾಗದ ಜನರಿಗೆ ಉಣಬಡಿಸಿದ ಕೀರ್ತಿ ಜಗದ್ಗುರುಗಳಿಗೆ ಸಲ್ಲುತ್ತದೆ. ನಮಗೆ ಸಂಕಟ ಸಮಯದಲ್ಲಿ ನಮ್ಮ ಬೆನ್ನಿಗೆ ಧೈರ್ಯವಾಗಿ ನಿಂತು ಮುನ್ನಡೆಸುವ ಪ್ರೇರಣೆಯನ್ನು ಜಗದ್ಗುರುಗಳೆ ನೀಡಿದರು.

ನನ್ನ ಮೇಲಿರುವ ಅವರ ಅಪಾರ ಪ್ರೀತಿ ಎಂದೂ ಬೆಲೆ ಕಟ್ಟಲಿಕ್ಕೆ ಸಾಧ್ಯ ಇಲ್ಲ. ಆದರೂ ಅವರ ೨ನೇ ಪುಣ್ಯ ಸ್ಮರಣೆ ನಿಮಿತ್ಯವಾಗಿ ಕಲ್ಯಾಣ ಬಂಧು ತೋಂಟದ ಸಿಂಧು ಎಂಬ ಗ್ರಂಥವನ್ನು ಪ್ರಕಟಿಸುವ ಮೂಲಕ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದು ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ನುಡಿದರು. ಪಟ್ಟಣ ಚನ್ನಬಸವಾಶ್ರಮದಲ್ಲಿ ಹಮ್ಮಿಕೊಂಡಿರುವ ೨೫೩ ನೆಯ ಮಾಸಿಕ ಶರಣ ಸಂಗಮ ಹಾಗೂ ಪೂಜ್ಯ ಶ್ರೀ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರ ೨ನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕಲ್ಯಾಣಬಂಧು ತೋಂಟದ ಸಿಂಧು ಕೃತಿ ಲೋಕಾರ್ಪಣೆ ಸಮಾರಂಭದ ದಿವ್ಯಸನ್ನಿಧಾನ ವಹಿಸಿದರು.

ಶರಣ ವಿಶ್ವನಾಥಪ್ಪ ಬಿರಾದಾರ ಅವರಿಂದ ಕೃತಿ ಲೋಕಾರ್ಪಣೆ ಮಾಡಲಾಯಿತು. ಕೃತಿಯ ಸಂಪಾದಕರಾದ ಶರಣ ಡಾ.ಸೋಮನಾಥ ಯಾಳವಾರ ಅವರು ಕೃತಿಯ ಪರಿಚಯ ಮಾಡುವ ಮೂಲಕ ಜಗದ್ಗುರುಗಳ ಜೀವನ ಕಾರ್ಯವನ್ನು ಮನಮುಟ್ಟುವ ಹಾಗೆ ಪರಿಚಯಿಸಿದರು. ಪೂಜ್ಯ ಶ್ರೀ ನಿರಂಜನ ಸ್ವಾಮಿಗಳು, ಪೂಜ್ಯ ಶ್ರೀ ಮಹಾಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಬಸವಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಜಗದೇವ ಸ್ವಾಮಿಗಳು ನೇತೃತ್ವ ವಹಿಸಿದ್ದರು. ಶರಣ ಚಂದ್ರಕಾಂತ ಬಿರಾದಾರ ಅವರು ನಿರೂಪಿಸಿದರು. ಶರಣ ರಾಜು ಜುಬರೆ ಸ್ವಾಗತಿಸಿದರು.

ಶರಣ ವಿಶ್ವನಾಥಪ್ಪ ಬಿರಾದಾರ ಅವರಿಂದ ಕೃತಿ ಲೋಕಾರ್ಪಣೆ ಮಾಡಲಾಯಿತು. ಕೃತಿಯ ಸಂಪಾದಕರಾದ ಶರಣ ಡಾ.ಸೋಮನಾಥ ಯಾಳವಾರ ಅವರು ಕೃತಿಯ ಪರಿಚಯ ಮಾಡುವ ಮೂಲಕ ಜಗದ್ಗುರುಗಳ ಜೀವನ ಕಾರ್ಯವನ್ನು ಮನಮುಟ್ಟುವ ಹಾಗೆ ಪರಿಚಯಿಸಿದರು.

ಪೂಜ್ಯ ಶ್ರೀ ನಿರಂಜನ ಸ್ವಾಮಿಗಳು, ಪೂಜ್ಯ ಶ್ರೀ ಮಹಾಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಬಸವಲಿಂಗ ಸ್ವಾಮಿಗಳು, ಪೂಜ್ಯ ಶ್ರೀ ಜಗದೇವ ಸ್ವಾಮಿಗಳು ನೇತೃತ್ವ ವಹಿಸಿದ್ದರು. ಶರಣ ಚಂದ್ರಕಾಂತ ಬಿರಾದಾರ ಅವರು ನಿರೂಪಿಸಿದರು. ಶರಣ ರಾಜು ಜುಬರೆ ಸ್ವಾಗತಿಸಿದರು.

emedialine

Recent Posts

ಅಧ್ಯಾತ್ಮದ ಜ್ಞಾನ ಬದುಕಿಗೆ ಬೆಳಕು ನೀಡುತ್ತದೆ

ಕಲಬುರಗಿ:ಮಾನವನ ಬದುಕಿಗೆ ಅಧ್ಯಾತ್ಮದ ಜ್ಞಾನವು ಅರಿವು ಮೂಡಿಸುವುದಲ್ಲದೆ,ಬೆಳಕು ನೀಡುತ್ತದೆ ಎಂದು ಪುರಾಣ ಪಂಡಿತ ಮಲ್ಲಿಕಾರ್ಜುನ ಶಾಸ್ತ್ರಿ ಅಭಿಪ್ರಾಯ ಪಟ್ಟಿದ್ದಾರೆ. ಜಯನಗರ…

28 mins ago

ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆ ಸಮೀಕ್ಷೆ : ಡಾ. ಶಾಲಿನಿ ರಜನೀಶ್

ಬೆಂಗಳೂರು: ಮೊಬೈಲ್ ಆಪ್ ಮೂಲಕ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪತ್ತೆಹಚ್ಚಲು ಜುಲೈ 15 ರಿಂದ 30 ರವರೆಗೆ ಸಮೀಕ್ಷೆ ನಡೆಸಲಾಗುವುದು…

3 hours ago

ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ: ಸಿಎಂ ಸಿದ್ದು

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ…

3 hours ago

ಕನ್ನಡದ ನೆಲದಲ್ಲಿ ಕನ್ನಡಿಗರ ಮಕ್ಕಳೇ ಉದ್ಯೋಗ ಮಿಸಲಾತಿ ಕೇಳುವಂತಹ ಪರಸ್ಥಿತಿ ಆಘಾತಕಾರಿ

ಕಲಬುರಗಿ: ಡಾ.ಸರೋಜನಿ ಮಹಿಷಿ ವರದಿ ಅನುಷ್ಠಾನಕ್ಕೆ ನಡೆದ, ನಡೆಯುತ್ತಿರುವ ಹೋರಾಟಗಳಿಗೆ ಲೆಕ್ಕವೇ ಇಲ್ಲ. ಮಹಿಷಿ ವರದಿಯ ಹೆಸರು ಹೇಳಿ ಆಳಿದ…

3 hours ago

ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹೇಶ್ ರೆಡ್ಡಿ ನಾಮಪತ್ರ ಸಲ್ಲಿಕೆ

ಕಲಬುರಗಿ: ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಕಾರ್ಯಕಾರಿ ಸದಸ್ಯ ಸಮಿತಿಗೆ ಮಹಾಸಭಾದ ಅಧ್ಯಕ್ಷ ಶರಣಕುಮಾರ ಮೋದಿ ಹಾಗೂ ಸಮಾಜದ…

3 hours ago

ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲ: ರಾಜ್ಯ ಸರಕಾರದ ವಿರುದ್ಧ ಸಾಂಕೇತಿಕ ಧರಣಿ ಸತ್ಯಾಗೃಹ

ಕಲಬುರಗಿ: ಕರ್ನಾಟಕ ನೆಲದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಲ್ಲಿ ವಿಫಲವಾದ ರಾಜ್ಯ ಸರ್ಕಾರ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಪುನೀತರಾಜ…

3 hours ago