ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಶಿಕ್ಷಕ ಬಾಂಧವರು ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಶಶೀಲ ನಮೋಶಿ ಅವರಿಗೆ ಮತ ಚಲಾಯಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ ಮನವಿ ಮಾಡಿದರು.
ಶುಕ್ರವಾರ ತಾಲೂಕಿನ ವಿವಿಧ ವಲಯದ ಮತಗಟ್ಟೆಯ ಪ್ರಭಾರಿಗಳು ಹಾಗೂ ಉಸ್ತುವಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಜಿ.ಪಂ ಸದಸ್ಯ ಹರ್ಷಾನಂದ ಎಸ್ ಗುತ್ತೇದಾರ ಮಾತನಾಡಿ, ಶಶೀಲ ನಮೋಶಿಯವರು ಈ ಹಿಂದೆ ಮೂರು ಬಾರಿ ಆಯ್ಕೆಯಾದಾಗ ಶಿಕ್ಷಕರ ಹಿತ ಕಾಪಾಡಲು ಪ್ರಮಾಣಿಕ ಪ್ರಯತ್ನ ಪಟ್ಟಿದ್ದರು ಈ ಬಾರಿಯೂ ಅವರಿಗೆ ಆಯ್ಕೆ ಮಾಡುವುದರ ಮೂಲಕ ಶಿಕ್ಷಕರ ಕ್ಷೇತ್ರಕ್ಕೆ ಒಬ್ಬ ಅರ್ಹ ವ್ಯಕ್ತಿಯನ್ನು ಪ್ರತಿನಿಧಿಯನ್ನಾಗಿ ಮಾಡಬೇಕು ಎಂದು ಹೇಳಿದರು.
ಪಕ್ಷದ ಪ್ರಭಾರಿಗಳು, ಉಸ್ತುವಾರಿಗಳು ತಮಗೆ ವಹಿಸಿದ ಕೆಲಸವನ್ನು ಅತ್ಯಂತ ನಿಷ್ಟೆಯಿಂದ ನಿರ್ವಹಿಸುವುದರ ಮೂಲಕ ಪಕ್ಷಕ್ಕೆ ಸೇವೆ ಸಲ್ಲಿಸಬೇಕು. ಪ್ರತಿಯೊಬ್ಬ ಶಿಕ್ಷಕರನ್ನು ಭೇಟಿಯಾಗಿ ನಮೋಶಿಯವರ ಗೆಲುವಿಗೆ ಪ್ರಯತ್ನಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಜಿ.ಪ್ರ. ಕಾರ್ಯದರ್ಶಿ ಅಶೋಕ ಬಗಲಿ, ಮಂಡಲ ಅಧ್ಯಕ್ಷ ಆನಂದರಾವ ಪಾಟೀಲ ಕೋರಳ್ಳಿ, ಸಂಜಯ ಮಿಸ್ಕಿನ್, ಗೌರಿ ಚಿಚಕೋಟಿ, ಮಲ್ಲಿಕಾರ್ಜುನ ಕಂದಗೂಳೆ, ಗುರುನಾಥ ಪಾಟೀಲ ಸೇರಿದಂತೆ ಇತರರು ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…