ನೀರು ನುಗ್ಗಿ ರೈತರು ಕಂಗಾಲು: ಪರಿಹಾರಕ್ಕೆ ಅಲ್ಲಮಪ್ರಭು ಪಾಟೀಲ್ ಆಗ್ರಹ

0
20

ಕಲಬುರಗಿ: ತಾಲ್ಲೂಕಿನಲ್ಲಿ ಬರುವ ಮೇಳಕುಂದ (ಬಿ) ಮತ್ತು ಮೇಳಕುಂದ (ಕೆ,) ಗ್ರಾಮದ ರಸ್ತೆಗಳು ಸಂಪೂರ್ಣ ನೀರಿಂದ ಕೊಚ್ಚಿಕೊಂಡು ಹೋಗಿವೆ ಮತ್ತು ರೈತರ ಹೊಲಗಳಲ್ಲಿ ನೀರು ನುಗ್ಗಿ ಸಂಪೂರ್ಣ ಬೆಳೆನಾಶವಾಗಿ ರೈತರು ಕಂಗಾಲಾಗಿದ್ದಾರೆ.

ಈ ಗ್ರಾಮಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ನೆಲೋಗಿ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನೀಲಕಂಠರಾವ್ ಮೂಲಗೆ, ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ ಪಾಟೀಲ್, ತಾಲೂಕು ಪಂಚಾಯತ್ ಸದಸ್ಯ ರವಿ ಕೊಳ್ಳು ಇವರುಗಳು ಭೇಟಿ ನೀಡಿ ರೈತರೊಂದಿಗೆ ಹಾಗೂ ಊರಿನ ಮುಖಂಡರೊಂದಿಗೆ ಚರ್ಚಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಕ್ಷಣ ಪರಿಹಾರಕ್ಕೆ ಸೂಚಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ಭೀಮರಾವ ಕೊಲ್ಲೂರು ಹಾಗೂ ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here