ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ : ಶಾಂತಿಯುತ ಮತದಾನ

ಶಹಾಬಾದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ನಡೆದ ಮತದಾನ ಪ್ರಕ್ರಿಯೆ ಬಹುತೇಖ ಶಾಂತಿಯುತವಾಗಿ ನಡೆದಿದ್ದು, ಶೇ 61.84 %ರಷ್ಟು ಮತದಾನವಾಗಿದೆ.

ಒಟ್ಟು 173 ಶಿಕ್ಷಕ ಮತದಾರರಲ್ಲಿ 107 ಮತದಾರರು ಮತ ಚಲಾಯಿಸಿದರು. 63 ಪುರುಷ ಮತದಾರರು ಮತ್ತು 44 ಮಹಿಳಾ ಮತದಾರರು ಮತ ಚಲಾಯಿಸಿದರು.

ನಗರದ ತಹಸೀಲ್ದಾರ ಕಾರ್ಯಾಲಯದ ಮತದಾನ ಕೇಂದ್ರದಲ್ಲಿ ಬೆಳಿಗ್ಗೆ 8ಗಂಟೆಗೆ ಮತದಾನ ಪ್ರಾರಂಭಗೊಂಡಿದ್ದು, ಬೆಳಗಿನ ಜಾವದಲ್ಲಿಯೇ ಶಿಕ್ಷಕ ಮತದಾರರು ಬಂದು ಬಿರುಸಿನ ಮತ ಚಲಾಯಿಸಿದರು. ಮಧ್ಯಾಹ್ನ ಹೊತ್ತಿಗೆ ಮತದಾನ ನೀರಸ ಪ್ರಕ್ರಿಯೆ ಕಂಡುಬಂದಿತು.ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದರಿಂದ ಕೆಲವು ಶಿಕ್ಷಕರು ತಮ್ಮ ತಮ್ಮ ಗ್ರಾಮಗಳಿಗೆ ತೆರಳಿದ್ದರಿಂದ ಅವರನ್ನು ಕರೆಯಿಸಿ ಮತದಾನ ಮಾಡಲು ವಿವಿಧ ರಾಜಕೀಯ ಪಕ್ಷಗಳು ಹರಸಾಹಸ ಪಟ್ಟರು.

ಕೆಲವು ಖಾಸಗಿ ಸಂಸ್ಥೆಗಳ ಕೆಲವು ಶಿಕ್ಷಕರನ್ನು ಮತ ಚಲಾಯಿಸುವಂತೆ ಹೇಳಿದರೂ ಮತ ಚಲಾಯಿಸುವಲ್ಲಿ ನಿರ್ಲಕ್ಷ್ಯ ತೋರಿದರು. ಬೆಳಿಗ್ಗೆ ಬೇಗನೆ ಬಂದು ಮತ ಚಲಾಯಿಸಿ ಬೇರೆ ಕೆಲಸಕ್ಕೆ ಹೋಗುವಂತ ದೃಶ್ಯ ಕಂಡುಬಂದಿತು. ಶಿಕ್ಷಕ ಮತದಾರರು ಮತದಾನ ಕೇಂದ್ರಕ್ಕೆ ಬರುವ ಸಂಖ್ಯೆ ಕಡಿಮೆಯಾಗಿದ್ದರೂ, ಒಬ್ಬೊಬ್ಬರಾಗಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ಮತಗಟ್ಟೆಯ ದೂರದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಟೆಂಟ್ ಹೊಡೆದು ಮತದಾರರನ್ನು ಓಲೈಸಲು ನಿರತರಾಗಿದ್ದರು. ಮತದಾರರನ್ನು ಮತ ಕೇಂದ್ರಗಳಿಗೆ ಕರೆ ತರಲು ವಿವಿಧ ಪಕ್ಷಗಳು ವಾಹನಗಳ ವ್ಯವಸ್ಥೆ ಮಾಡಿದ್ದರು.ಅಲ್ಲದೇ ವಿವಿಧ ಪಕ್ಷದ ಮುಖಂಡರು ಮತದಾರರಿಗೆ ಕರೆ ಮಾಡಿ ಮತ ಚಲಾಯಿಸಲು ಹೇಳುತ್ತಿರುವುದು ಕಂಡು ಬಂದಿತು.ಅಲ್ಲದೇ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಮತಗಟ್ಟೆಗೆ ಬರುತ್ತಿದ್ದ ಶಿಕ್ಷಕ ಮತದಾರರನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದ ದೃಶ್ಯಗಳು ಕಂಡು ಬಂದವು.

ಮತದಾನದ ವೇಳೆ ಸ್ಯಾನಿಟೈಜರ್, ಸ್ಕ್ರೀನಿಂಗ್ ಮೂಲಕ ಪರೀಕ್ಷೆ ನಡೆಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಮತ ಚಲಾಯಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿತ್ತು.ಯಾವುದೇ ಅಹಿತಕರ ಘಟನೆ ನಡೆಯದಂತೆ ಡಿವಾಯ್ಎಸ್ಪಿ ವೆಂಕನಗೌಡ ಪಾಟೀಲ, ಪಿಐ ಅಮರೇಶ.ಬಿ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

 

emedia line

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420