ಮಾರುತಿ ಮಾನ್ಪಡೆ ಸಾವಿನ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಹೇಳಿಕೆಗೆ ಶಾಸಕ ಖರ್ಗೆ ಆಕ್ರೋಶ

0
147

ಕಲಬುರಗಿ: ಜನಪರ- ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಸಾವಿನ ಕುರಿತಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆ‌ ನಾಚಿಕೆಗೇಡಿನದ್ದು ಎಂದು ಕೆಪಿಸಿಸಿ ವಕ್ತಾರರಾದ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟ್ ಮೂಲಕ ತಮ್ಮ ಅಸಮಧಾನ ಹೊರಹಾಕಿರುವ ಅವರು ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋಧಿ ಮಸೂದೆಗಳ ವಿರುದ್ದ ಶ್ರೀಯುತ ಮಾನ್ಪಡೆಯವರು ಹೋರಾಡುತ್ತಲೇ ಬಂದಿದ್ದರು.

Contact Your\'s Advertisement; 9902492681

” ಕೊರೋನಾ‌ದಂತ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಲಜ್ಜೆಗೆಟ್ಟ ಬಿಜೆಪಿ ಸರಕಾರ ರೈತ ವಿರೋಧಿ ಮಸೂದೆ ಜಾರಿಗೆ ತಂದಾಗ ಸನ್ಮಾನ್ಯ ಮಾನ್ಪಡೆಯವರು ಹೋರಾಟಕ್ಕಿಳಿದಿದ್ದರು. ಆದರೆ ಈಗ  ಅವರ ಸಾವಿನ ಕುರಿತಾಗಿ ಕೇಂದ್ರ ಸಚಿವರ ಹೇಳಿಕೆ ನಾಚಿಕೆಗೇಡಿನದ್ದು ” ಎಂದು ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ‌ ಸರಕಾರ‌ ಕೊಡುಗೆ ಏನು ? ಎಂದು ಪ್ರಶ್ನಿಸಿರುವ ಅವರು, ನೆರೆ ಹಾವಳಿ ಸಂದರ್ಭದಲ್ಲಿ ಭೇಟಿ ನೀಡಲಿಲ್ಲವೇಕೆ ? ಎಂದು ಸದಾನಂದಗೌಡವರನ್ನು ಶ್ರೀ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here