ಕಲಬುರಗಿ: ಜನಪರ- ರೈತಪರ ಹೋರಾಟಗಾರ ಮಾರುತಿ ಮಾನ್ಪಡೆ ಸಾವಿನ ಕುರಿತಾದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಹೇಳಿಕೆ ನಾಚಿಕೆಗೇಡಿನದ್ದು ಎಂದು ಕೆಪಿಸಿಸಿ ವಕ್ತಾರರಾದ ಹಾಗೂ ಶಾಸಕರಾದ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟ್ವಿಟ್ ಮೂಲಕ ತಮ್ಮ ಅಸಮಧಾನ ಹೊರಹಾಕಿರುವ ಅವರು ಕೇಂದ್ರ ಸರಕಾರ ಜಾರಿಗೆ ತಂದ ರೈತ ವಿರೋಧಿ ಮಸೂದೆಗಳ ವಿರುದ್ದ ಶ್ರೀಯುತ ಮಾನ್ಪಡೆಯವರು ಹೋರಾಡುತ್ತಲೇ ಬಂದಿದ್ದರು.
” ಕೊರೋನಾದಂತ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ಲಜ್ಜೆಗೆಟ್ಟ ಬಿಜೆಪಿ ಸರಕಾರ ರೈತ ವಿರೋಧಿ ಮಸೂದೆ ಜಾರಿಗೆ ತಂದಾಗ ಸನ್ಮಾನ್ಯ ಮಾನ್ಪಡೆಯವರು ಹೋರಾಟಕ್ಕಿಳಿದಿದ್ದರು. ಆದರೆ ಈಗ ಅವರ ಸಾವಿನ ಕುರಿತಾಗಿ ಕೇಂದ್ರ ಸಚಿವರ ಹೇಳಿಕೆ ನಾಚಿಕೆಗೇಡಿನದ್ದು ” ಎಂದು ಸನ್ಮಾನ್ಯ ಶ್ರೀ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಬಿಜೆಪಿ ಸರಕಾರ ಕೊಡುಗೆ ಏನು ? ಎಂದು ಪ್ರಶ್ನಿಸಿರುವ ಅವರು, ನೆರೆ ಹಾವಳಿ ಸಂದರ್ಭದಲ್ಲಿ ಭೇಟಿ ನೀಡಲಿಲ್ಲವೇಕೆ ? ಎಂದು ಸದಾನಂದಗೌಡವರನ್ನು ಶ್ರೀ ಪ್ರಿಯಾಂಕ್ ಖರ್ಗೆ ಕುಟುಕಿದ್ದಾರೆ.
ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…
ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…
ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್ಐಆರ್…
ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…
ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…
ಕಲಬುರಗಿ: ಇನ್ನರ್ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…