ಕಲಬುರಗಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಪರಿಹಾರ ನೀಡುವಲ್ಲಿ ಸರಕಾರ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭಾರಿ ಮಳೆಯಿಂದಾಗಿ ನೆರೆ ಹಾವಳಿಗೆ ತುತ್ತಾಗಿರುವ ಪ್ರದೇಶದ ವೈಮಾನಿಕ ಸಮೀಕ್ಷೆ ನಡೆಸಿ ಒಂದು ವಾರ ಆದರೂ ನೆರೆ ಪೀಡಿತ ಜನರಿಗೆ ಪರಿಹಾರ ಸಿಕ್ಕಿಲ್ಲ.ವೈಮಾನಿಕ ಸಮೀಕ್ಷೆಯ ವರದಿ ಸಿದ್ಧಪಡಿಸಲು ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆ.
ಇದೊಂದು ರಾಷ್ಟ್ರೀಯ ವಿಪತ್ತು ಘೋಷಣೆ ಮಾಡಲು ಸರಕಾರ ಹಿಂಜರಿಯುತ್ತಿದೆ. ನದಿಗಳಲ್ಲಿ ಪ್ರವಾಹ ಬಂದು ಅನೇಕ ಗ್ರಾಮಗಳು ಜಲಾವೃತ ಆಗಿವೆ.ಜನರ ಮನೆಗಳಿಗೆ ನೀರು ನುಗ್ಗಿ ಇದ್ದ ಬದ್ದ ದವಸಧಾನ್ಯ ಹಾಳಾಗಿದ್ದು ಊಟಕ್ಕೂ ಗತಿ ಇಲ್ಲದೆ ಪರಿದಾಡುವಂತಾಗಿದೆ.ಸೂರು ಕಳೆದುಕೊಂಡು ಬೀದಿ ಪಾಲಾಗಿದ್ದಾರೆ.ಜಮೀನುಗಳಲ್ಲಿ ನೀರು ನುಗ್ಗಿ ಬಿತ್ತಿದ ಬೆಳೆ ಕೊಚ್ಚಿಕೊಂಡು ಹೋಗಿವೆ.ವಾಣಿಜ್ಯ ಬೆಳೆ ತೊಗರಿ, ಕಬ್ಬು, ಬಾಳೆ ನೀರಿನಲ್ಲಿ ನಿಂತು ಹಾಳಾಗಿವೆ.ಇದರಿಂದ ರೈತರಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಆದರೂ ಮುಖ್ಯಮಂತ್ರಿಗಳು ಪರಿಹಾರ ನೀಡುವ ಗೋಜಿಗೆ ಹೋಗದೆ ಉಪಚುನಾವಣೆಯಲ್ಲಿ ಮೈ ಮರೆತಿದ್ದಾರೆ.ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಲತಾಯಿ ಧೋರಣೆ ಮಾಡುತ್ತಿದ್ದಾರೆ.ರೈತರ ಮತ್ತು ನೆರೆ ಸಂತ್ರಸ್ತರ ಸಂಕಷ್ಟ ಅರಿತು ಕೂಡಲೇ ಪರಿಹಾರ ನೀಡುವಂತೆ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…
ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…
ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…