ನಾಡು ಸಂಕಷ್ಟದಲ್ಲಿದೆ ರಾಜ್ಯೋತ್ಸವ ಆಚರಣೆ ಸರಳವಾಗಿರಲಿ: ವೆಂಕಟೇಶ ಬೈರಿಮಡ್ಡಿ

ಸುರಪುರ: ಈ ವರ್ಷ ರಾಜ್ಯದಲ್ಲಿ ಕೊರೊನಾ ಹಾವಳಿಯಿದೆ ಅಲ್ಲದೆ ನೆರೆ ಹಾವಳಿಯಿಂದಾಗಿ ಜನಸಾಮಾನ್ಯರು ಹಾಗು ರೈತರು ದೊಡ್ಡ ಮಟ್ಟದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಆದ್ದರಿಂದ ಈ ವರ್ಷ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸೋಣ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ವೆಂಕಟೇಶ ನಾಯಕ ಬೈರಿಮಡ್ಡಿ ತಿಳಿಸಿದರು.

ನಗರದ ಟೈಲರ್ ಮಂಜಿಲ್‌ನಲ್ಲಿ ಸಭೆ ನಡೆಸಿ ಮಾತನಾಡಿ,ಕರವೇ ವತಿಯಿಂದ ಹಿಂದಿನಿಂದಲೂ ವಿಜೃಂಭಣೆಯಿಂದ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುತ್ತಾ ಬರಲಾಗಿದೆ.ಆದರೆ ಈ ವರ್ಷ ಇಡೀ ನಾಡೇ ಇಂದು ಸಂಕಷ್ಟದಲ್ಲಿದೆ,ಇಂತಹ ಸಂದರ್ಭದಲ್ಲಿ ಅದ್ಧೂರಿ ಕಾರ್ಯಕ್ರಮದ ಬದಲಾಗಿ ಜನರ ನೆರವಿಗೆ ನಿಲ್ಲೋಣ.ಎಲ್ಲರು ನಿಮ್ಮ ನಿಮ್ಮ ಗ್ರಾಮಗಳಲ್ಲಿ ಸರಳವಾಗಿ ರಾಜ್ಯೋತ್ಸವ ಆಚರಿಸುವಂತೆ ತಿಳಿಸಿದರು.ನಂತರ ಜಾಲಿಬೆಂಚಿ ಗ್ರಾಮ ಶಾಖೆಗೆ ನೂತನ ಪದಾಧಿಕಾರಿಗಳನ್ನು ನೇಮಕಗೊಳಿಸಲಾಯಿತು.

ಪದಾಧಿಕಾರಿಗಳು: ರಾಜಾ ಅಮರಪ್ಪ ನಾಯಕ ಜಹಾಗೀರದಾರ ಗೌರವಾಧ್ಯಕ್ಷ ಭೀಮು ನಾಯಕ ಅಧ್ಯಕ್ಷ ಪ್ರವೀಣ ಕುಮಾರ ಉಪಾಧ್ಯಕ್ಷ ಬಸವರಾಜ ಸೆಕ್ರಟರಿ ಪ್ರಧಾನ ಕಾರ್ಯದರ್ಶಿ ಕಾಶೀನಾಥ ಮರಾಠ ಸಹ ಕಾರ್ಯದರ್ಶಿ ಫಾರುಕ್ ಪಟೇಲ್ ಸಂಘಟನಾ ಕಾರ್ಯದರ್ಶಿ ಶರಣು ಬಳಿ ಸಹ ಸಂಘಟನಾ ಕಾರ್ಯದರ್ಶಿ ರವಿಕುಮಾರ ಕಾಮತ್ ಪ್ರಧಾನ ಸಂಚಾಲಕ ಮಲ್ಲು ಮಡಿವಾಳ ಸಂಚಾಲಕ ಹಾಗು ಅಂಬರೀಶ ಸಾಹುಕಾರ ಖಜಾಂಚಿಯಾಗಿ ನೇಮಕಗೊಳಿಸಲಾಯಿತು.

ಸಭೆಯಲ್ಲಿ ಮುಖಂಡರುಗಳಾದ ಶಿವಮೋನಯ್ಯ ಎಲ್.ಡಿ.ನಾಯಕ ಅಂಬ್ಲಯ್ಯ ಬೇಟೆಗಾರ ಶ್ರೀನಿವಾಸ ಡಿ.ನಾಯಕ ಹಣಮಂತ ಹಾಲಗೇರಾ ಪ್ರಕಾಶ ಹೆಗ್ಗಣದೊಡ್ಡಿ ನೀಲಕಂಠಗೌಡ ಪ್ರಕಾಶ ಮಾರಲಬಾವಿ ಶ್ರೀಶೈಲ ಕಾಚಾಪುರ ಬಾವಸಾಬ್ ನದಾಫ್ ಕೃಷ್ಣಾ ಪರಸನಹಳ್ಳಿ ಸೇರಿದಂತೆ ಅನೇಕರಿದ್ದರು.

emedialine

Recent Posts

ನಾಡಹಬ್ಬ ಆಚರಣೆ ಅಂಗವಾಗಿ ನಾಡ ದೇವತೆ ಸ್ತಬ್ಧ ಚಿತ್ರಗಳ ಮೆರವಣಿಗೆ

ಸುರಪುರ: ಕನ್ನಡ ಸಾಹಿತ್ಯ ಸಂಘ ಸುರಪುರ ಹಾಗೂ ಪಬ್ಲಿಕ್ ರಿಕ್ರಿಯೇಷನ್ ಕ್ಲಬ್ ವತಿಯಿಂದ 38ನೇ ನಾಡಹಬ್ಬ ಉತ್ಸವಾಚರಣೆ ಅಂಗವಾಗಿ ನಗರದ…

13 hours ago

ವೀರಪ್ಪ ನಿಷ್ಠಿ ಕಾಲೇಜ್ ಮಹಾತ್ಮ ಗಾಂಧಿಜಿ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ

ಸುರಪುರ: ನಗರದ ಶ್ರೀ. ವೀರಪ್ಪ ನಿಷ್ಠಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಸಮೂಹ ಸಂಸ್ಥೆಗಳ ಅಡಿಯಲ್ಲಿ ನಡೆದ…

13 hours ago

ಲೈಂಗಿಕ ದೌರ್ಜನ್ಯ ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ 8ಕ್ಕೆ ಸುರಪುರ ಬಂದ್

ಸುರಪುರ: ಕೊಡೇಕಲ್ ಗ್ರಾಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಇದೇ ಅಕ್ಟೋಬರ್ 8 ರಂದು ಸುರಪುರ ಬಂದ್…

13 hours ago

ಗರ್ಭಿಣಿ ಮಹಿಳೆಯರಿಗೆ ಹಣ್ಣು ಹಂಪಲು ವಿತರಣೆ

ಕಲಬುರಗಿ:  ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನ್ ಎಸ್ ಕಿಳ್ಳಿ ರವರ ಜನ್ಮ ದಿನದ ಆಂಗವಾಗಿ ಶ್ರೀನಿವಾಸ ಸರಡಗಿ…

13 hours ago

ಮಹಾತ್ಮ ಗಾಂಧೀಜಿಯವರ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು

ಕಲಬುರಗಿ: ಗುಲ್ಬರ್ಗ ವಿಶ್ವವಿದ್ಯಾಲಯ ಕಲಬುರ್ಗಿ ಮತ್ತು ಸರಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿಯ ಎನ್.ಎಸ್. ಎಸ್ ಘಟಕದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ…

13 hours ago

ಜುಡೋಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕಲಬುರಗಿ: ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ರಾಜ್ಯಮಟ್ಟದ ಶಾಲಾ ಮಕ್ಕಳ ಆಟೊಗಳ ಸ್ಪರ್ಧೆ 2024 25 ಈಚೆಗೆ ಬೆಂಗಳೂರಿನಲ್ಲಿ ನಡೆದ…

13 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420