ರಾಮನಿಗೆ ಸಿಕ್ಕ ಮನ್ನಣೆ ಮಹರ್ಷಿ ವಾಲ್ಮೀಕಿ ಗೂ ಸಿಗಲಿ: ಶಿವಕುಮಾರ ಮ್ಯಾಗಳಮನಿ

ಕವಿತಾಳ : ಪಟ್ಟಣದ ಮಸ್ಕಿ ಕ್ರಾಸ್ ( ವಾಲ್ಮೀಕಿ ನಾಮಫಲಕ) ಹತ್ತಿರ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ (ರಿ) ಕವಿತಾಳ ಮತ್ತು ವಿವಿಧ ಸಂಘಟನೆಗಳ ಮತ್ತು ಮುಖಂಡರ ನೇತೃತ್ವದಲ್ಲಿ ವಾಲ್ಮೀಕಿ ಮಹರ್ಷಿಯವರ ಜಯಂತಿ ಯನ್ನು ಆಚರಣೆ ಮಾಡಲಾಯಿತು.

ಜಯಂತಿ ಕಾರ್ಯಕ್ರಮ ವನ್ನು ಉದ್ದೇಶಿಸಿ SFI ರಾಜ್ಯ ಉಪಾಧ್ಯಕ್ಷ ಹಾಗೂ ಕವಿತಾಳ ನವ ನಿರ್ಮಾಣ ವೇದಿಕೆಯ ಅಧ್ಯಕ್ಷರಾದ ಶಿವಕುಮಾರ ಮ್ಯಾಗಳಮನಿ ಮಾತನಾಡಿ ಕ್ರಿ.ಪೂ 500 ಕಾಲಘಟ್ಟದಲ್ಲಿ ಭಾರತದಲ್ಲಿ ಜನಿಸಿದ ವಾಲ್ಮೀಕಿ ಯವರು ವಿದ್ಯೆ ಕೆಲವರಿಗೆ ಸಿಮೀತವಾದ ಆ ಕಾಲಘಟ್ಟದಲ್ಲಿ ತಮ್ಮ ಸ್ವಂತದ ಶಕ್ತಿ ಮತ್ತು ದಿವ್ಯ ಜ್ಞಾನ, ತಪ್ಪಿಸಿನ ಪರಿಣಾಮವಾಗಿ ರಾಮಾಯಣ ಗ್ರಂಥವನ್ನು ಬರೆದು ವಿಶ್ವಕ್ಕೆ ನೀಡಿದರು.

ನಿಜ ರಾಮಯಾಣಯದಲ್ಲಿರುವ ಮನುಕುಲದ ಹಿತ ಕಾಯುವ ಸಾರವನ್ನು ಎತ್ತಿ ಹಿಡಿಯಬೇಕಿದೆ ಹಾಗೂ ತಳ ಸಮುದಾಯದ ಹಿನ್ನೆಲೆಯಲ್ಲಿ ಬಂದ ವಾಲ್ಮೀಕಿ ಯವರಿಗೆ ಜಾತಿ ಆಧಾರಿತ ಭಾರತದಲ್ಲಿ ಸರಿಯಾದ ಮನ್ನಣೆ ಸಿಗುತ್ತಿಲ್ಲ, ರಾಮನಿಗೆ ಸಿಕ್ಕ ಮನ್ನಣೆ ವಾಲ್ಮೀಕಿ ಗೆ ಸಿಗುತ್ತಿಲ್ಲ ಇದು ದುರಂತ. ಇಬ್ಬರಿಗೂ ಮನ್ನಣೆ ಸಿಗಬೇಕಿದೆ ಎಂದರು.

ವಾಲ್ಮೀಕಿ ಯವರು ರಾಮಾಯಣ ಕೇಲವ ಒಂದು ಜಾತಿ ಮತ್ತು ಧರ್ಮಕ್ಕೆ ಸೀಮಿತ ಅಲ್ಲ ಮನುಷ್ಯನ ಪ್ರಗತಿಗೆ ಸಂಬಂಧಿಸಿದಾಗಿದೆ. ಅದು ಒಳಗೊಂಡಿರುವ 24000 ಶ್ಲೋಕ ಮತ್ತು 07 ಖಂಡಗಳನ್ನು ಎಲ್ಲಾ ಭಾಷೆಗಳಿಗೂ ಭಾಷಾಂತರ ಮಾಡಿ ಮಾನವನ ಶ್ರೇಯಸ್ಸಿಗಾಗಿ ಅದನ್ನು ಬಳಕೆ ಮಾಡಿಕೊಳ್ಳಬೇಕಿದೆ ಎಂದರು.

ನಂತರ ಜಿಲ್ಲಾ ಉಪಾಧ್ಯಕ್ಷರಾದ ಭೀನಣ್ಣ ನಾಯಕ ಕಾಚಾಪುರ ಮಾತನಾಡಿ ವಾಲ್ಮೀಕಿ ಯವರನ್ನು ಒಂದು ಜಾತಿಗೆ ಸೀಮಿತ ಮಾಡದೆ ಎಲ್ಲರೊಂದತ ಅನ್ಯೋನ್ಯತೆ ಯಿಂದ ಬಾಳೋಣ ಸಮಾಜದ ಒಳಿತಿಗಾಗಿ ಒಂದಾಗಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಕವಿತಾಳ ಘಟಕದ ಅಧ್ಯಕ್ಷರಾದ ಹನುಮಗೌಡ ನಾಯಕ, ವಿವಿಧ ಸಮಾಜದ ಮುಖಂಡರಾದ ಯಮನ್ನಪ್ಪ ದಿನ್ನಿ, ನಿಂಗಪ್ಪ ತೋಳ, ಶಿವನಪ್ಪ , ಲಾಳೇಶ್, ಯಂಕೋಬ ನಾಯಕ, ಮುಗ್ದಮ್ ಸಾಬ್, ಮುಸ್ತಫ್ ಸೇರಿ ಅನೇಕರಿದ್ದರು.

emedialine

Recent Posts

ಶ್ರೀಮತಿ ವಿ. ಜಿ  ಕಾಲೇಜಿನ ವಿದ್ಯಾರ್ಥಿನಿಯರಿಂದ ದಾಂಡಿಯಾ ನೃತ್ಯ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಪದವಿ ಪೂರ್ವ ಮಹಿಳಾ ಮಹಾವಿದ್ಯಾಲಯ ಕಲಬುರಗಿಯಲ್ಲಿ ಪ್ರತಿ ವರ್ಷದಂತೆ…

3 hours ago

ತೂಕದಲ್ಲಿ ಆಗುವ ವ್ಯತ್ಯಾಸ ಸರಿಪಡಿಸಿ: ಪ್ರತಿ ಟನ್ ಕಬ್ಬಿಗೆ 3500 ಬೆಲೆ ನಿಗದಿ ಪಡಿಸಿ

ಅಫಜಲಪುರ: 2024-25ನೇ ಸಾಲಿನಲ್ಲಿ ಅಫಜಲಪುರ ತಾಲೂಕಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ರೈತರಿಗೆ ಕನಿಷ್ಠ 3500 ರೂ.ಬೆಲೆ ನಿಗದಿ ಪಡಿಸಿ ಘೋಷಣೆ ಮಾಡಬೇಕು,ಅಲ್ಲದೇ…

9 hours ago

ಕಲಬುರಗಿ: ಯತಿ ನರಸಿಂಹಾನಂದ್ ಬಂಧನಕ್ಕೆ ಆಗ್ರಹಿಸಿ ದಿಢೀರ್ ಪ್ರತಿಭಟನೆ

ಕಲಬುರಗಿ: ಕಾರ್ಯಕ್ರಮ ಒಂದರಲ್ಲಿ ಪ್ರವಾದಿ ಮುಹಮ್ಮದ್ (ಸ.ಅ) ಅವರ ವಿರುದ್ಧ ಅಕ್ರಮಣಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಗಾಜಿಯಾಬಾದ್‌ನ ದಾಸ್ನಾ…

19 hours ago

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ…

21 hours ago

ನೀರಿನ ಬಿಲ್ ಬಡ್ಡಿ ಮನ್ನಾ ಮಾಡಲು ಡಾ.ರಶೀದ್ ಜಿಲ್ಲಾಧಿಕಾರಿಗಳಿಗೆ ಮನವಿ

ಶಹಾಬಾದ: ನಗರಸಭೆ ವ್ಯಾಪ್ತಿಯ ಸಾರ್ವಜನಿಕರ ಕುಡಿಯುವ ನೀರಿನ ಬಿಲ್ ಬಡ್ಡಿ ಮನ್ನಾ ಮಾಡಿ ಅಸಲು ಮಾತ್ರ ಪಾವತಿಸಲು ಅನುಕೂಲ ಮಾಡಿಕೊಡಬೇಕೆಂದು…

21 hours ago

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿ; ಮತ್ತಿಮಡು

ಶಹಾಬಾದ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಇವುಗಳ ಪ್ರಗತಿಗೆ ಆದ್ಯತೆ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು…

21 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420