ವಾಡಿ: ಪಟ್ಟಣದ ರೈಲು ನಿಲ್ದಾಣದಲ್ಲಿ ಮಹರ್ಷಿ ವಾಲ್ಮೀಕಿ ಋಷಿಗಳ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಬೇಡ ಸಮುದಾಯದ ಮುಖಂಡರು ವಾಲ್ಮೀಕಿ ಜಯಂತಿ ಆಚರಿಸಿದರು. ರೈಲ್ವೆ ಠಾಣೆಯ ಪಿಎಸ್ಐ ವೀರಭದ್ರಪ್ಪ ಹಾಗೂ ವಾಲ್ಮೀಕಿ ಸಮಾಜದ ಹಿರಯ ಮುಖಂಡ ಭೀಮರಾವ ದೊರೆ ಅವರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಮಾಲೆ ಅರ್ಪಿಸುವ ಮೂಲಕ ಪೂಜೆ ಸಲ್ಲಿಸಿದರು.
ರೈಲು ನಿಲ್ದಾಣ ವ್ಯವಸ್ಥಾಪಕ ವಿವೇಕಕುಮಾರ, ಮಹರ್ಷಿ ವಾಲ್ಮೀಕಿ ಸಮಾಜದ ಮುಖಂಡರಾದ ಸುಭಾಷ ಚಾಮನೂರ, ಸಾಬಣ್ಣ ಮುಸ್ಲಾ, ಕರಣಪ್ಪ ದೇಸಾಯಿ, ಭಾಗಣ್ಣ ದೊರೆ, ಭೀಮಣ್ಣ ಹವಾಲ್ದಾರ, ಬೀಮರಾಯ ಅಂದೋಲಾ, ನಾಗರಾಜ ಜಮಾದಾರ, ವೆಂಕಟೇಶ ದೊರೆ, ದೇವಿಂದ್ರ ದೊರೆ, ವಿಜಯಕುಮಾರ ಚಟ್ಟಳ್ಳಿ, ಅಬ್ದುಲ್ ರಶೀದ್, ಹಣಮಂತರಾಯ, ಸುನೀಲ ದೊರೆ ಸೇರಿದಂತೆ ಚೈಲ್ಡ್ಲೈನ್ ಸಿಬ್ಬಂದಿಗಳು ಮತ್ತಿತರರು ಪಾಲ್ಗೊಂಡಿದ್ದರು.
ಪುರಸಭೆ ಕಚೇರಿ: ನಗರ ಆಡಳಿತ ಸಂಸ್ಥೆ ಪುರಸಭೆಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಪುರಸಭೆ ಅಧ್ಯಕ್ಷೆ ಝರೀನಾಬೇಗಂ ಪೂಜೆ ನೆರವೇರಿಸಿದರು.
ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ವಾಲ್ಮೀಕಿ ಸಮಾಜದ ಮುಖಂಡ ಭೀಮರಾವ ದೊರೆ, ಪುರಸಭೆ ಸದಸ್ಯರಾದ ಪೃಥ್ವಿರಾಜ ಸೂರ್ಯವಂಶಿ, ಮಹ್ಮದ್ ಗೌಸ್, ದೇವಿಂದ್ರ ಕರದಳ್ಳಿ, ಭೀಮರಾಯ ಸುಬೇದಾರ, ಮರಗಪ್ಪ ಕಲಕುಟಗಿ, ಮುಖಂಡರಾದ ನಾಗೇಂದ್ರ ಜೈಗಂಗಾ, ತುಕಾರಾಮ ರಾಠೋಡ, ಶರಣಪ್ಪ ವಾಡೇಕರ ಪಾಲ್ಗೊಂಡಿದ್ದರು. ಸಿಬ್ಬಂದಿ ಮಲ್ಲಿಕಾರ್ಜುನ ಯಳಸಂಗಿ ನಿರೂಪಿಸಿ, ವಂದಿಸಿದರು.
ಬಿಜೆಪಿ ಕಚೇರಿ: ಮಾಜಿ ಶಾಸಕ ವಾಲ್ಮೀಕಿ ನಾಯಕ ಅವರು ಮಹರ್ಷಿ ವಾಲ್ಮಿಕಿ ಜೀವನ ಕುರಿತು ವಿವರಿಸಿದರು. ಬಿಜೆಪಿ ಅಧ್ಯಕ್ಷ ಬಸವರಾಜ ಪಂಚಾಳ, ಪ್ರಧಾನ ಕಾರ್ಯದರ್ಶಿ ವೀರಣ್ಣ ಯಾರಿ, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮುಕ್ಕಣ್ಣ, ಯುವ ಮೋರ್ಚಾ ಅಧ್ಯಕ್ಷ ರವಿ ಕಾರಬಾರಿ, ಪುರಸಭೆ ಸದಸ್ಯ ಭೀಮಶಾ ಜಿರೊಳ್ಳಿ, ಭೀಮರಾಯ ಸುಬೇದಾರ, ಹರಿ ಗಲಾಂಡೆ, ಗಿರಿಮಲ್ಲಪ್ಪ ಕಟ್ಟಿಮನಿ, ಕಿಶನ ಜಾಧವ, ರಿಚ್ಚರ್ಡ್ ಮರೆಡ್ಡಿ, ದೌಲತರಾವ ಚಿತ್ತಾಪುರಕರ, ಅಂಬಾದಾಸ ಜಾಧವ ಪಾಲ್ಗೊಂಡಿದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…