ಜೀವನ ಭದ್ರತೆಗೆ ಆಗ್ರಹಿಸಿ ಛಾಯಾಗ್ರಾಹಕರ ಪ್ರತಿಭಟನೆ

ವಾಡಿ: ಕೊರೊನಾ ಲಾಕ್‌ಡೌನ್ ಸಂಕಷ್ಟದಲ್ಲಿ ಸಿಲುಕಿ ಕರಾಳ ದಿನಗಳನ್ನು ಅನುಭವಿಸುತ್ತ ವ್ಯವಹಾರ ನಷ್ಟದಲ್ಲಿರುವ ಫೋಟೋಗ್ರಾಫರ್‌ಗಳು ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯಮಟ್ಟದ ಸ್ಟೂಡಿಯೋ ಬಂದ್ ಕರೆಯನ್ನು ಬೆಂಬಲಿಸಿ ಪ್ರತಿಭಟನೆಗಿಳಿದ ಸ್ಥಳೀಯ ಛಾಯಾಚಿತ್ರಗ್ರಾಹಕರು ಹಾಗೂ ವಿಡಿಯೋಗ್ರಾಫರ್‌ಗಳು ರಾಜ್ಯ ಮತ್ತು ಕೇಂದ್ರ ಸರಕಾರಗಳು ನಮ್ಮ ಕಷ್ಟ ಅರಿತು ಪರಿಹಾರ ಘೋಷಿಸುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಕ್ರೂರಿ ಕೊರೊನಾ ಸಾಂಕ್ರಾಮಿಕ ರೋಗ ಕಾಲಿಟ್ಟ ಗಳಿಗೆಯಿಂದ ಫೋಟೊ ಸ್ಟೂಡಿಯೋ ವ್ಯವಹಾರ ಸ್ಥಗಿತಗೊಂಡಿದೆ. ಛಾಯಾಚಿತ್ರ ತೆಗೆಯುವ ಕಾಯಕವನ್ನೇ ನೆಚ್ಚಿಕೊಂಡಿರುವ ನಮ್ಮ ಬದುಕು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಸರಕಾರದ ಯೋಜನೆಗಳಿಗೆ ನಮ್ಮನ್ನು ಬಳಸಿಕೊಳ್ಳುತ್ತಿಲ್ಲ. ನಮ್ಮ ಬದುಕು ಸಂಪೂರ್ಣ ಬೀದಿಪಾಲಾಗಲು ಆಳುವ ಸರಕಾರಗಳೇ ಕಾರಣವಾಗಿವೆ ಎಂದು ಆಪಾದಿಸಿದರು.

ಕೋವಿಡ್-೧೯ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಛಾಯಾಗ್ರಹಣ ಅಕಾಡೆಮಿ ಸ್ಥಾಪಿಸಬೇಕು. ಆರೋಗ್ಯ ಮತ್ತು ಜೀವ ವಿಮೆ, ಜಿಪಂ ಹಾಗೂ ಗ್ರಾಪಂ ಯೋಜನೆಗಳ ಛಾಯಾಗ್ರಹಣದ ಹಕ್ಕು ನೀಡಬೇಕು. ಸಬ್ಸೀಡಿಯಲ್ಲಿ ಬ್ಯಾಂಕ್ ಸಾಲ ನೀಡಬೇಕು. ಚುನಾವಣೆಯ ಚಿತ್ರೀಕರಣಕ್ಕೆ ಅವಕಾಶ ನೀಡಬೇಕು. ಜೀವನ ಭದ್ರತೆ ಒದಗಿಸಬೇಕು.

ವೆಬ್ ಕ್ಯಾಮೆರಾ ತೊಗಲಗಬೇಕು. ಪ್ರತಿಭಾವಂತ ಛಾಯಾಚಿತ್ರಕಾರರನ್ನು ಗುರುತಿಸಿ ಪ್ರಶಸ್ತಿ ನೀಡಬೇಕು. ಕಾರ್ಮಿಕ ಇಲಾಖೆಯ ಯೋಜನೆಗಳಿಗೆ ನಮ್ಮನ್ನು ಫಲಾನುಭವಿಯನ್ನಾಗಿಸಬೇಕು. ಸ್ಮಾರ್ಟ್ ಕಾರ್ಡ್ ವಿತರಿಸಬೇಕು. ಬಸ್ ಮತ್ತು ರೈಲ್ವೆ ಪಾಸ್ ಸೌಲಭ್ಯ ಒದಗಿಸುವುದು ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ಫೋಟೊಗ್ರಾಫರ್ ಮತ್ತು ವಿಡಿಯೋಗ್ರಾಫರ್ ಅಸೋಷಿಯೇಷನ್‌ನ ನಗರ ಸಮಿತಿ ಅಧ್ಯಕ್ಷ ಶರಣಪ್ಪ ಹಡಪದ ಕುಂದನೂರ, ಉಪಾಧ್ಯಕ್ಷ ಭೀಮಣ್ಣ ಹವಾಲ್ದಾರ, ಕಾರ್ಯದರ್ಶಿ ಸಿದ್ರಾಮ ಕರದಳ್ಳಿ, ಸಹ ಕಾರ್ಯದರ್ಶಿ ಭೀಮರಾಯ ಭಂಡಾರಿ, ವಿಲಿಯಂ ಪ್ರಕಾಶ, ಸಂಜಯ ಚವ್ಹಾಣ, ಮಲ್ಲಿಕಾರ್ಜುನ ನಾಟೀಕಾರ, ವಿನಾಯಕ ಖೈರೆ, ಭೀಮರಾಯ ನರಿಬೋಳಿ, ಜಾರ್ಜ್ ಪ್ರಕಾಶ, ತೋಟೇಂದ್ರ ಸ್ವಾಮಿ, ಬಸವರಾಜ ಕರದಳ್ಳಿ, ಮೋಹನ ಮಾಲಗತ್ತಿ, ಶಣ್ಮುಖ ಕಟ್ಟಿಮನಿ, ರಾಜು ಗುತ್ತೇದಾರ, ಯಲ್ಲಣ್ಣ ಕಟ್ಟಿಮನಿ, ಸೋಮಶೇಖರ ಸೂಲಹಳ್ಳಿ, ಅಣವೀರಯ್ಯ ಸ್ವಾಮಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

4 mins ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

11 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

14 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

14 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

14 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

14 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420