ಕಲಬುರಗಿ: ಕರ್ನಾಟಕದಲ್ಲಿ ಈಗಾಗಲೇ ಚುನಾವಣಾ ಪರ್ವ ಆರಂಭವಾಗಿರುವ ಬೆನ್ನಲ್ಲೇ ಒಂದರ ಮೇಲೊಂದರಂತೆ ಚುನಾವಣೆಗಳು ನಡೆಯುತ್ತಿರುವುದು ಸಂತೋಷದ ವಿಷಯ. ಆದರೆ ಈಗಾಗಲೇ ಗ್ರಾಮ ಪಂಚಾಯತ್ ಅವಧಿ ಮುಗಿದು ಐದು ತಿಂಗಳು ಕಳೆದರು ಗ್ರಾಮ ಪಂಚಾಯತ್ ಚುನಾವಣೆ ನಡೆಸಲು ಸರಕಾರ ಆಸಕ್ತಿ ತೋರಿಸದೆ ನಿರ್ಲಕ್ಷಿಸಿ ಈವರೆಗೂ ಚುನಾವಣಾ ದಿನಾಂಕ ಘೋಷಿಸದಿರುವುದು ಬೇಸರದ ಸಂಗತಿಯಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ಕಲ್ಯಾಣ ಕರ್ನಾಟಕ ಅಧ್ಯಕ್ಷರಾದ ಶರಣು ಹೊಸಮನಿ ಅಸಮಾಧಾನ ವ್ಯಕ್ತಪಡಿಸಿದರು.
ಈ ಕುರಿತು ಹೇಳಿಕೆ ನೀಡಿದ ಅವರು , ಗ್ರಾಮೀಣ ಭಾಗಗಳಲ್ಲಿ ಜನಪ್ರತಿನಿಧಿಗಳಿಲ್ಲದ ಕ್ಷೇತ್ರಗಳು ಕಿಂಚಿತ್ತು ಅಭಿವೃದ್ಧಿ ಕಾಣದೇ ಮೂಲ ಸೌಕರ್ಯದಿಂದ ವಂಚಿತವಾಗಿವೆ. ಜೊತೆಗೆ ಆಗಬೇಕಾಗಿರುವ ಕೆಲಸಗಳು ಹಾಗೇಯೇ ನಿಂತಿವೆ. ಸರಕಾರ ಕೇವಲ ಕೊರೊನಾ ನೆಪವೊಡ್ಡಿ ಗ್ರಾಮ ಪಂಚಾಯತ್ ಚುನಾವಣೆ ನಡೆಸದಿರುವುದು ನಿಜಕ್ಕೂ ದುಃಖಕರವಾಗಿದೆ ಎಂದರು.
ಈಗಾಗಲೇ ವಿಧಾನ ಪರಿಷತ್ ಚುನಾವಣೆ ನಡೆದು ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆಯು ಮುಗಿಯುತ್ತಾ ಬಂದಿದೆ. ಈ ಚುನಾವಣೆಗಳಿಗೆ ಎದುರಾಗದೇ ಇರುವ ಕೊರೊನಾ , ಗ್ರಾಮ ಪಂಚಾಯತಿ ಚುನಾವಣೆಗಳಿಗೆ ಮಾತ್ರ ಅಡಿಯಾಗುತ್ತದೆಯೇ ? ಎಂದು ಪ್ರಶ್ನಿಸಿದರು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಆಡಳಿತ ವಿಕೆಂದ್ರೀಕರಣ ಪರಿಣಾಮಕಾರಿಯಾಗಿ ಕೆಲಸ ಮಾಡಲು ರಾಜ್ಯ ಸರಕಾರ ದಯಮಾಡಿ 6,021 ಗ್ರಾಮ ಪಂಚಾಯತಿಗಳಿಗೆ ಶೀಘ್ರವೇ ಚುನಾವಣೆಗೆ ದಿನಾಂಕ ಘೋಷಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…