ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಸದಸ್ಯನ ಕೊಲೆ

0
147

ಕಲಬುರಗಿ: ಜಮೀನು ವಿವಾದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತ್ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಶಿವಲಿಂಗಪ್ಪ ಭೋಗಶೆಟ್ಟಿ (55) ಕೊಲೆಯಾದ ದುರ್ದೈವಿ, ಇವರು ಗ್ರಾಮ ಪಂಚಾಯಿತ್ ಸದಸ್ಯರೆಂದು ತಿಳಿದುಬಂದಿದ್ದು, ಕಲಬುರಗಿ ನಗರದ ಕೈಲಾಶ್‌ ನಗರದಲ್ಲಿ ಘಟನೆ ನಡೆಸಿದ್ದು, ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.

Contact Your\'s Advertisement; 9902492681

ಜಮೀನು ವಿವಾದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು, ಸ್ಥಳಕ್ಕೆ ರಾಘವೇಂದ್ರ ನಗರ ಪೊಲೀಸ್‌ರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಸದ್ಯ ಕೊಲೆಯಾದ ವ್ಯಕ್ತಿಯ ಶವವನ್ನು ಸ್ವಗ್ರಾಮ ಕಡಗಂಚಿಗೆ ರವಾನಿಸಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here