ಬಿಸಿ ಬಿಸಿ ಸುದ್ದಿ

ಸುರಪುರದಲ್ಲಿ ನವಜಾತ ಶಿಶು ಪತ್ತೆ: ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ ಪೊಲೀಸರು

ಸುರಪುರ: ನಗರದ ಕಬಾಡಗೇರಾ ಖುರೇಶಿ ಮೊಹಲ್ಲಾದ ಮದ್ಯದಲ್ಲಿನ ಸಾವಜನಿಕ ಶೌಚಾಲಯದ ಬಳಿಯಲ್ಲಿ ಮೂರು ದಿನದ ನವಜಾತ ಗಂಡು ಶಿಶುವೊಂದು ಪತ್ತೆಯಾಗಿದೆ.

ಅನಾಥವಾಗಿದ್ದ ಶಿಶುವನ್ನು ನೋಡಿದ ಸ್ಥಳಿಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮಾಹಿತಿ ನೀಡಿದ್ದರಿಂದಾಗಿ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಭಾಕರ ಕವಿತಾಳ ಇವರು ಮಕ್ಕಳ ರಕ್ಷಣಾ ಇಲಾಖೆಗೆ ತಿಳಿಸಿದ್ದರಿಂದಾಗಿ ಸ್ಥಳಕ್ಕೆ ಯಾದಗಿರಿ ಮಕ್ಕಳ ರಕ್ಷಣಾ ಅಧಿಕಾರಿ ಅಶೋಕ ರಾಜನ್ ದಶರಥ ನಾಯಕ ಮಹಿಳಾ ರಕ್ಷಕಿ ಅನಿತಾ ಹಡಪದ ಅವರು ಮಕ್ಕಳ ರಕ್ಷಣಾ ಘಟಕದ ಅಧೀಕ್ಷಕಿ ನಾಗಮ್ಮ ಹಿರೇಮಠ ಅವರೊಂದಿಗೆ ಸ್ಥಳಕ್ಕೆ ಬಂದು ಶಿಶುವನ್ನು ರಕ್ಷಿಸಿದ್ದಾರೆ.

ನಂತರ ಪೊಲೀಸ್ ಠಾಣೆಗೆ ಬಂದು ಇನ್ಸ್ಪೇಕ್ಟರ್ ಎಸ್.ಎಮ್.ಪಾಟೀಲ್ ಅವರಿಗೆ ವಿಷಯ ತಿಳಿಸಿ ದೂರು ನೀಡಿದ ನಂತರ ಮಗುವಿನ ಆರೋಗ್ಯ ರಕ್ಷಣೆಗಾಗಿ ಯದಗಿರಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಈ ಕುರಿತು ಮಕ್ಕಳ ರಕ್ಷಣಾ ಅಧಿಕಾರಿ ಅಶೋಖ ರಾಜನ್ ಮಾಹಿತಿ ನೀಡಿ ಮಂಗಳವಾರ ಮಗುವನ್ನು ಕಲಬುರ್ಗಿಯ ಅಮೂಲ್ಯ ಶಿಶು ಗೃಹಕ್ಕೆ ಕಳುಹಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.

ಸುರಪುರ ಠಾಣೆಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಅಂಗನವಾಡಿ ಮೇಲ್ವಿಚಾರಕಿ ಪದ್ಮಾ ನಾಯಕ ಇತರರಿದ್ದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

7 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

7 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

7 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

7 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

8 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

9 hours ago