ಶಹಾಬಾದ:ಉತ್ತಮವಾಗಿ ಬೆಳೆದು ನಿಂತ ತೊಗರಿ ಬೆಳೆಗೆ ಮಂಜು ಕವಿದ ಪರಿಣಾಮ ಹೂವುಗಳು ಉದುರಿತ್ತಿದ್ದು, ಇದಕ್ಕೆ ಕೃಷಿ ಅಧಿಕಾರಿಗಳು ಮತ್ತು ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ಬೆಳೆಗಳ ರಕ್ಷಣೆಗೆ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕೆಂದು ಚಿತ್ತಾಪೂರ ಎಪಿಎಂಸಿ ಅಧ್ಯಕ್ಷ ಸಿದ್ದುಗೌಡ ಅಫಜಲಪೂರಕರ್ ತಿಳಿಸಿದ್ದಾರೆ.
ಈಗಾಗಲೇ ಪ್ರಸಕ್ತ ವರ್ಷ ಮಳೆ ಹೆಚ್ಚಾಗಿ ಹೆಸರು ಮತ್ತು ಉದ್ದು ಸಂಪೂರ್ಣ ನಷ್ಟವಾಗಿದೆ.ನಂತರ ಅತಿಯಾದ ಮಳೆಯಿಂದ ನದಿಯಲ್ಲಿ ಪ್ರವಾಹ ಉಂಟಾಗಿ ಸಾವಿರಾರು ಎಕರೆ ಪ್ರದೇಶದ ಬೆಳೆಗಳು ನಷ್ಟವಾಗಿವೆ. ಅತಿವೃಷ್ಟಿಯಿಂದ ರೈತರ ಸಾಕಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ.ಇರುವ ತೊಗರಿ ಬೆಳೆ ಹೂವು ಬಿಟ್ಟು ನಳನಳಿಸುತ್ತಿರುವಾಗಲೇ ಮಂಜು ಆವರಿಸಿ ಹೂವುಗಳು ಉದುರಿ ಬೀಳುತ್ತಿವೆ.ಅಲ್ಲದೇ ಚಳ್ಳಿ ಕಾಯಿ ಕಡಿದು ಬೀಳುತ್ತಿರುವುದರಿಂದ ರೈತರು ಎಲ್ಲಿಲ್ಲದ ಸಂಕಷ್ಟ ಹೊರಹಾಕುತ್ತಿದ್ದಾರೆ.ಆದ್ದರಿಂದ ಚಿತ್ತಾಪೂರ, ಶಹಾಬಾದ, ಕಾಳಗಿ ತಾಲೂಕಿನ ಕೃಷಿ ಅಧಿಕಾರಿಗಳು ಮತ್ತು ರೈತ ಸಂಪರ್ಕ ಕೇಂದ್ರದ ಸಿಬ್ಬಂದಿಗಳು ಬೆಳೆಗಳ ರಕ್ಷಣೆಗೆ ಸೂಕ್ತ ಮಾರ್ಗದರ್ಶನ ನೀಡುವ ಅಗತ್ಯವಿದೆ.ಆದ್ದರಿಂದ ರೈತರಿಗೆ ಸೂಕ್ತ ಮಾರ್ಗದರ್ಶನ ನೀಡಿ ಕಷ್ಟದಲ್ಲಿರುವ ಅನ್ನದಾತನಿಗೆ ಬೆಳೆ ಹಾಳಾಗದಂತೆ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದ್ದಾರೆ.
ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ನಿವೃತ್ತ ನಿರ್ದೇಶಕ ಡಾ. ಎಂ ಎಸ್ ಪಾಸೋಡಿ ಅವರು ಜಪಾನ್…
ಕಲಬುರಗಿ: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಿ ಚರಂಡಿ ನೀರನ್ನು ಸ್ವಚ್ಛಗೊಳಿಸಿ, ಸೊಳ್ಳೆಗಳು ಬಾರದಂತೆ ಫಾಗಿಂಗ್ ಮಾಡಿಸಬೇಕು…
ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…
ಕಲಬುರಗಿ: ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…
ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…
ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…