ಸುರಪುರ: ನಗರದ ಹಸನಾಪುರ ಪೆಟ್ರೋಲ್ ಬಂಕ್ ಬಳಿಯಲ್ಲಿನ ನ್ಯಾಯವಾದಿ ಆದಪ್ಪ ಹೊಸಮನೆ ಎಂಬುವವರ ಮನೆಯ ಬಳಿಯಲ್ಲಿ ಸುಮಾರು ಏಳು ಅಡಿ ಉದ್ದದ ಕೇರೆ ಹಾವೊಂದು ಕಾಣಿಸಿಕೊಂಡು ಎಲ್ಲರಲ್ಲಿ ಆತಂಕ ಮೂಡಿಸಿತ್ತು.
ಹಾವನ್ನು ನೋಡಿದ ಜನರು ಒಂದು ಕ್ಷಣ ಗಾಬರಿಗೊಂಡು ಮನೆಯೊಳಗೆ ಕುಳಿತುಕೊಂಡಿದ್ದರು,ನಂತರ ನ್ಯಾಯವಾದಿ ಆದಪ್ಪ ಹೊಸಮನಿ ಉರಗ ಪ್ರೇಮಿ ರಾಮು ವಣಕಿಹಾಳ ಎಂಬುವವರಿಗೆ ಕರೆ ಮಾಡಿದ್ದರಿಂದ ಸ್ಥಳಕ್ಕೆ ಆಗಮಿಸಿದ ರಾಮು ವಣಕಿಹಾಳ ಚಾಣಕ್ಷತೆಯಿಂದ ಹಾವನ್ನು ಹಿಡಿದು ನಂತರ ಕಾಡಿಗೆ ಹೊಯ್ದು ಬಿಟ್ಟು ಬಂದಿದ್ದಾರೆ.ಇದರಿಂದಾಗಿ ಹಾವು ಕಂಡು ಒಂದು ಕ್ಷಣ ದಂಗಾಗಿದ್ದ ಜನರು ಈಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಈ ಕುರಿತು ನ್ಯಾಯವಾದಿ ಆದಪ್ಪ ಹೊಸಮನಿ ಮಾತನಾಡಿ,ಕಳೆದ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ಎಲ್ಲೆಡೆ ಗಿಡಗಂಟಿಗಳು ಬೆಳೆದಿದ್ದು ಪ್ರದೇಶವೆಲ್ಲಾ ತುಂಬಾ ಕಸದಿಂದ ದಟ್ಟವಾಗಿದೆ,ಇದರಿಂದಾಗಿ ಹಾವು ಚೇಳುಗಳಂತ ವಿಷ ಜಂತುಗಳು ಕಾಣಿಸಿಕೊಳ್ಳುತ್ತಿವೆ.ನಗರಸಭೆ ಇತ್ತ ಗಮನ ಹರಿಸಿ ಸ್ವಚ್ಛತೆಗೆ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.
ಕಲಬುರಗಿ: ಕಳೆದ 25 ವರ್ಷಗಳಿಂದ ಮಾದಿಗರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯದ ವಿವಿಧ ರಾಜಕೀಯ ಆಡಳಿತ ಸರಕಾರಗಳಿಗೆ ಪ್ರತಿಭಟನೆ,ಧರಣಿ, ಸತ್ಯಾಗೃಹ,…
ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಪ್ರಾಧ್ಯಾಫಕ ಹಾಗೂ ವಾಣಿಜ್ಯ ನಿಕಾಯದ ಡೀನ್ ಪ್ರೊ. ಎ.…
ಕಲಬುರಗಿ: ಜುಲೈ 1ರ ಸೋಮವಾರ ರಾತ್ರಿ 8 ಗಂಟೆಗೆ ಕಲಬುರಗಿ ನಗರದ ಆರಾಧ್ಯ ದೈವ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನದ…
ಆಳಂದ ; ಮಕ್ಕಳ ಆರೋಗ್ಯ, ಪೌಷ್ಟಿಕ ಆಹಾರದ ಕುರಿತ ವರದಿಯನ್ನು ತಂತ್ರಾಂಶದಲ್ಲಿ ದಾಖಲಿಸುವುದರ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರ ಕಾರ್ಯಚಟುವಟಿಕೆಗೆ ಅನುಕೂಲ…
ಶಹಾಪುರ ತಾಲೂಕಿನ ಸಗರ ಗ್ರಾಮ ಆಡಳಿತ ಅಧಿಕಾರಿ ರಮೇಶ್ ರಾಠೋಡ್ ಶಹಾಪುರ : ರೈತರು ಬೆಳೆವಿಮೆ, ಪರಿಹಾರ,ಸಾಲ ಮನ್ನಾ,ಇತರೆ ಸೇರಿದಂತೆ…
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…