ಜೆಸ್ಕಾಂ ವಿಭಾಗೀಯ ಕಚೇರಿ ಆರಂಭಕ್ಕೆ  ಮಲ್ಲಯ್ಯ ಪೋಲಂಪಲ್ಲಿ ಒತ್ತಾಯ

0
102

ಶಹಾಪುರ: ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ಶಾಪುರ್ ಪಟ್ಟಣ ದಿನೇ ದಿನೇ ಬೆಳೆಯುತ್ತಿದ್ದು ನಗರದ ಜೆಸ್ಕಾಂ ವಿಭಾಗೀಯ ಕಚೇರಿಯನ್ನು ಕೂಡಲೇ ಆರಂಭಿಸಬೇಕೆಂದು ಸರಕಾರಕ್ಕೆ ಸಾಮಾಜಿಕ ಕಾರ್ಯಕರ್ತ  ಮಲ್ಲಯ್ಯ ಪೊಲಂಪಲ್ಲಿ ಒತ್ತಾಯಿಸಿದರು.

ಸುಮಾರು ವರ್ಷಗಳಿಂದ ಅಭಿವೃದ್ಧಿಯ ಕೆಲಸಗಳು ನೆನೆಗುದಿಗೆ ಬಿದ್ದಿರುವುದು ಸರಕಾರದ ಹಾಗೂ ರಾಜಕೀಯ ವ್ಯಕ್ತಿಗಳೇ ಎಂದು ಅಸಮಾಧಾನ ವ್ಯಕ್ತಪಡಿಸಿದರು ಕೆಲವೊಂದು ಜೆಸ್ಕಾಂ ಅಧಿಕಾರಿಗಳು ಅಕ್ರಮ ಹಗರಣದಲ್ಲಿ ಭಾಗಿಯಾಗಿದ್ದಾರೆ ಅವರ ವಿರುದ್ಧ ಸೂಕ್ತ ಕೈಗೊಂಡು ಅವರನ್ನು ಅಮಾನತುಗೊಳಿಸಬೇಕೆಂದು ಚೆನ್ನಪ್ಪ ಆನೆಗುಂದಿ ಎಚ್ಚರಿಕೆ ನೀಡಿದರು.

Contact Your\'s Advertisement; 9902492681

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎಂ. ಸಾಗರ್ ಮಾತನಾಡಿ ಜೆಸ್ಕಾಂ ನಂಬಿಕೊಂಡು ಹಲವಾರು ರೈತರು ತಮ್ಮ ತಮ್ಮ ಹೊಲಗಳಲ್ಲಿ ಪಂಪ್ ಸೆಟ್ಟನ್ನು ಹಾಕಿಕೊಂಡಿದ್ದಾರೆ ಆದರೆ ರೈತರಿಗೆ ಪೂರಕವಾಗಿ ಜೆಸ್ಕಾಂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಕೂಗು ಕೇಳಿಬರುತ್ತಿದೆ. ಅಲ್ಲದೆ ಸಾರ್ವಜನಿಕರಿಂದ ವಿಪರೀತ ಹಣ ವಸೂಲಿ ದಂಧೆಯಲ್ಲಿ ಜೆಸ್ಕಾಂ ಅಧಿಕಾರಿಗಳು ತೊಡಗಿದ್ದಾರೆ. ಮುಂದಿನ ದಿನಗಳಲ್ಲಿ ಇದರ ವಿರುದ್ಧ ಉಗ್ರವಾದ  ಹೋರಾಟ ಮಾಡಬೇಕಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಿದ್ದಯ್ಯ ಹಿರೇಮಠ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಅಧ್ಯಕ್ಷ ದಾವಲಸಾಬ್ ನದಾಫ್, ನಿಂಗಣ್ಣ ತನಿಖೆದಾರ್, ಜೈಲಾಲ್ ತೋಟದಮನಿ, ಹಣಮಂತ ಟೋಕಾಪೂರ್, ಭೀಮಣ್ಣ, ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಮಹಮ್ಮದ್ ಖಾಲಿದ್, ಹಾಗೂ ಇತರರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here