ಸುರಪುರ: ಕಾಂಗ್ರಸ್ ಪಕ್ಷ ದೇಶದಲ್ಲಿ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕಾದರೆ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಪಾತ್ರ ಮುಖ್ಯವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಯಾದವ್ ಮಾತನಾಡಿದರು.
ನಗರದ ವಸಂತ ಮಹಲ್ನ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಯುವ ಕಾಂಗ್ರೆಸ್ ಸದಸ್ಯತ್ವ ಅಭಿಯಾನ ಹಾಗು ಕಾರ್ಯಕರ್ತರ ಜಾಗೃತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿ,ಯಾದಗಿರಿ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಕಾರ್ಯ ಉತ್ತಮವಾಗಿದೆ,ಮುಂಬರುವ ದಿನಗಳಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಶಾಸಕರಾಗುವುದು ಸತ್ಯವಾಗಿದೆ.ಆ ನಿಟ್ಟಿನಲ್ಲಿ ಮುಖಂಡರಾದ ರಾಜಾ ರೂಪಕುಮಾರ ನಾಯಕ ರಾಜಾ ವೇಣುಗೋಪಾಲ ನಾಯಕರ ಮಾರ್ಗದರ್ಶನದಲ್ಲಿ ಯುವಕರು ಕೆಲಸ ಮಾಡುವಂತೆ ಕರೆ ನೀಡಿದರು.
ನಂತರ ಮುಖಂಡ ರಾಜಾ ಕುಮಾರ ನಾಯಕ ಮಾತನಾಡಿ,ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರು ಕರೆ ನೀಡಿದಂತೆ ಜಿಲ್ಲೆಯಾದ್ಯಂತ ಈಗಾಗಲೇ ೫ ಸಾವಿರ ಯುವ ಕಾಂಗ್ರೆಸ್ ಸದಸ್ಯತ್ವ ಮಾಡಿಸಲಾಗಿದ್ದು ಇನ್ನೂ ಮೂರು ಸಾವಿರದಷ್ಟು ಸದಸ್ಯತ್ವ ಮಾಡಿಸುವುದಾಗಿ ತಿಳಿಸಿದರು.ಅಲ್ಲದೆ ಯುವ ಕಾಂಗ್ರೆಸ್ನ ಯಾವುದೇ ಕಾರ್ಯಕರ್ತರು ಯಾವ ಕಾರಣಕ್ಕೂ ಹೆದರಬೇಕಿಲ್ಲ ನಿಮ್ಮೊಂದಿಗೆ ಸದಾಕಾಲ ನಾವೆಲ್ಲರು ಇರುವುದಾಗಿ ಭರವಸೆ ನೀಡಿದರು. ಮುಂಬರು ದಿನಗಳಲ್ಲಿ ಪಕ್ಷವನ್ನು ಎಲ್ಲಾ ನಿಟ್ಟಿನಲ್ಲಿ ಸದೃಢಗೊಳಿಸೋಣ ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡರಾದ ಚೇತನ್ ಗೋನಾಯಕ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಿಂಗರಾಜ ಬಾಚಿಮಟ್ಟಿ ಯುವ ಮುಖಂಡ ರಾಜಾ ವೇಣುಗೋಪಾಲ ನಾಯಕ ಡೇವಿಡ್ ಮುದನೂರ ಶರಣು ಗೋನಾಲ ಪ್ರಶಾಂತ ಉಗ್ರಂ ಮತ್ತಿತರರು ಮಾತನಾಡಿದರು.ಇದಕ್ಕೂ ಮುನ್ನ ಅನಿಲಕುಮಾರ್ ಯಾದವ್ ಅವರನ್ನು ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಿಂದ ವಸಂತ ಮಹಲ್ ವರೆಗೆ ಸಾವಿರಾರು ಕಾರ್ಯಕರ್ತರು ಬೃಹತ್ ಬೈಕ್ ರ್ಯಾಲಿ ಮೂಲಕ ಮೆರವಣಿಗೆ ನಡೆಸಿ ಕರೆ ತಂದರು.
ಈ ಸಂದರ್ಭದಲ್ಲಿ ಮುಖಂಡರಾದ ರಾಜಾ ರೂಪಕುಮಾರ ನಾಯಕ ರಾಜಾ ವಿಜಯಕುಮಾರ ನಾಯಕ ರಾಜಾ ಸುಶಾಂತ ನಾಯಕ ಮುಖಂಡರಾದ ಸುಗುರೇಶ ವಾರದ ಶರಣು ಮುಧೋಳ ಮಲ್ಲು ಯಾದವ್ ಪ್ರಕಾಶ ಯಾದವ್ ಆನಂದ ಮುಧೋಳ ದಾವೂದ್ ಪಠಾಣ್ ಸುಲೇಮಾನ್ ರಮೇಶ ಅರಕೇರಿ ಶರಣು ಸೋಲಾಪುರ ಸೇರಿದಂತೆ ಅನೇಕ ಮುಖಂಡರು ಹಾಗು ಕಾರ್ಯಕರ್ತರು ಭಾಗವಹಿಸಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…