ನಗರದ ಸಮಸ್ಯೆಗಳ ನಿವಾರಣೆಗೆ ಎಲ್ಲರು ಸೇರಿ ಕೆಲಸ ಮಾಡೋಣ: ಸುಜಾತಾ ವಿ.ಜೇವರ್ಗಿ

ಸುರಪುರ: ಇಲ್ಲಿಯ ನಗರಸಭೆಗೆ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ಸುಜಾತಾ ವೇಣುಗೋಪಾಲ ಜೇವರ್ಗಿ ಮತ್ತು ಮಹೇಶ ಎಸ್.ಎನ್.ಪಾಟೀಲ್ ಕಳೆದ ೨೮ ರಂದು ಅವಿರೋಧವಾಗಿ ನೇಮಕಗೊಂಡಿದ್ದರು.

ಗುರುವಾರ ಬೆಳಿಗ್ಗೆ ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ನಡೆಯಿತು.ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುಜಾತಾ ವೇಣುಗೋಪಾಲ ಜೇವರ್ಗಿಯವರು ಮಾತನಾಡಿ,ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ದೊಡ್ಡ ಮಟ್ಟದಲ್ಲಿದೆ ಅದು ಎಲ್ಲರಿಗೂ ತಿಳಿದಿರುವ ಸಂಗತಿಯಾಗಿದ್ದು ಇನ್ನೂ ಅನೇಕ ಸಮಸ್ಯೆಗಳು ನಗರದಲ್ಲಿವೆ ಎಲ್ಲ ಸಮಸ್ಯೆಗಳನ್ನು ನಿವಾರಿಸಲು ಆಡಳಿತ ವಿರೋಧ ಪಕ್ಷ ಎಂಬ ಯಾವುದೇ ಭೇದವಿಲ್ಲದೆ ಎಲ್ಲರು ಸೇರಿ ಸಮಸ್ಯೆಗಳ ನಿವಾರಣೆಗೆ ಕೆಲಸ ಮಾಡೋಣ,ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಮನವಿ ಮಾಡಿದರು.

ಉಪಾಧ್ಯಕ್ಷ ಮಹೇಶ ಎಸ್.ಎನ್.ಪಾಟೀಲ್ ಮಾತನಾಡಿ, ನಗರದ ಜನತೆ ಯಾವುದೇ ಸಮಸ್ಯೆಗಳಿಗಾಗಿ ಕರೆ ಮಾಡಿದರೆ ನಗರಸಭೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ಸ್ಪಂಧಿಸಿ ಮತ್ತು ಯಾವುದೇ ಕಾರಣಕ್ಕೂ ಫೋನ್‌ಗಳನ್ನು ಬಂದ್ ಮಾಡಬೇಡಿ ಮತ್ತು ಯಾರೇ ಕರೆ ಮಾಡಿದರೆ ಸ್ವೀಕರಿಸುವಂತೆ ತಿಳಿಸಿದರು.

ಇದೇ ಸಂದರ್ಭದಲ್ಲಿ ಮುಖಂಡರಾದ ವೇಣುಗೋಪಾಲ ಜೇವರ್ಗಿ ಮಾತನಾಡಿ,ಅಧ್ಯಕ್ಷರು ಮತ್ತು ಉಪಾಧ್ಯಕ್ಷರಿಗೆ ಕೆಲಸ ಮಾಡಲು ಉತ್ತಮ ಅವಕಾಶ ಲಭಿಸಿದೆ ಜನರ ಸಮಸ್ಯೆಗಳಿಗೆ ಸ್ಪಂಧಿಸಿ ಮತ್ತು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವಂತೆ ಕಿವಿಮಾತು ಹೇಳಿದರು.ಅಲ್ಲದೆ ನಾನು ಒಬ್ಬ ಸಾಮಾನ್ಯ ಪ್ರಜೇಯಾಗಿ ತಮ್ಮ ಗಮನಕ್ಕೆ ತರಬಯಸುತ್ತಿದ್ದು ಜನರ ಸಮಸ್ಯೆಗಳಿಗೆ ತಾವು ಸ್ಪಂಧಿಸದಿದ್ದಲ್ಲಿ ಜನರೊಂದಿಗೆ ಸೇರಿ ನಿಮ್ಮ ವಿರುಧ್ಧವೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.ಇದೇ ಸಂದರ್ಭದಲ್ಲಿ ನಗರಸಭೆ ಸದಸ್ಯ ನರಸಿಂಹಕಾಂತ ಪಂಚಮಗಿರಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಅಧಿಕಾರ ಸ್ವೀಕರಿಸಿದ ಇಬ್ಬರಿಗೂ ನಗರಸಭೆಯ ಸದಸ್ಯರು ಮತ್ತು ಸಿಬ್ಬಂದಿಗಳು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಮುಖಂಡ ರಾಜಾ ಹನಮಪ್ಪ ನಾಯಕ (ತಾತಾ) ನಗರಸಭೆ ಸದಸ್ಯರಾದ ಸೋಮನಾಥ ಡೊಣ್ಣಿಗೇರಾ ರಾಜಾ ಪಿಡ್ಡನಾಯಕ (ತಾತಾ)ಶಿವಕುಮಾರ ಕಟ್ಟಿಮನಿ ಮಹ್ಮದಗೌಸ್ ಅಯ್ಯಪ್ಪ ಕುಂಬಾರಪೇಟೆ ಜೆಟ್ಟೆಪ್ಪ ವಣಕಿಹಾಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

2 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

13 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

15 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

16 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

16 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

16 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420