ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವುದು ಅತ್ಯಗತ್ಯ: ಡಾ: ಎಸ್.ಎಸ್.ಗುಬ್ಬಿ

ಶಹಾಪುರ :ಹಗಲಿರುಳು ಪರಿಶ್ರಮ,ಕಠಿಣ ವಿದ್ಯಾಭ್ಯಾಸದ ಜೊತೆಗೆ ಬದುಕಿಗೆ ಪೂರಕವಾದ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಸಾಧನೆಯ ಮೆಟ್ಟಿಲೇರಲು ಸಾಧ್ಯ ಎಂದು ಕಲಬುರಗಿಯ ಖ್ಯಾತ ವೈದ್ಯರಾದ ಡಾ:ಎಸ್.ಎಸ್. ಗುಬ್ಬಿ ಹೇಳಿದರು.

ನಗರದ ಚರಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಡಾ. ಅಮರೇಶ ಅರುಣಿ ಅವರಿಗೆ ಹಮ್ಮಿಕೊಂಡಿರುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಪಟ್ಟಣದ ಶ್ರೀಮತಿ ಶಿವಲೀಲಾ ಬಸವರಾಜ ಅರುಣಿ ಅವರ ಪುತ್ರ ಡಾ.ಅಮರೇಶ್ ಅರುಣಿಯವರು ದೆಹಲಿಯ(AIMS) ಅತ್ಯುನ್ನತ ಪದವಿಯಾದ”ರೋಬೋಟಿಕ್” ಸರ್ಜರಿ ಪ್ರವೇಶಾತಿ ಪಡೆದ ಕರ್ನಾಟಕದ ಏಕೈಕ ವ್ಯಕ್ತಿಯಾಗಿದ್ದಾರೆ ಎಂದು ಕುಂಬಾರಗೇರಿ ಹಿರೇಮಠದ ಪರಮಪೂಜ್ಯರಾದ ಸೂಗುರೇಶ್ವರ ಶಿವಾಚಾರ್ಯರು ಹೇಳಿದರು.

ಸರಕಾರಿ ಶಾಲೆಯಲ್ಲಿ ಓದುವ ಮುಖಾಂತರ ಬೇರೆ ಶಾಲೆಗಳಿಗಿಂತ ಕಡಿಮೆಯೇನಿಲ್ಲ ಎಂಬುದನ್ನು ಸಾಧನೆ ಮಾಡಿ ಎಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು,ಸುರಪುರದ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಬಸವರಾಜ ಜಮದ್ರಖಾನಿ ಹೇಳಿದರು. ವೈದ್ಯಲೋಕದಲ್ಲಿ ಮುಂದೊಂದು ದಿನ ಈ ನಾಡಿಗೆ ಇತಿಹಾಸ ಸೃಷ್ಟಿಸಲಿ ಎಂದು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

ಈ ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಗುರು ಸಿದ್ಧಲಿಂಗೇಶ್ವರ ಸಂಸ್ಥಾನ ಮಠ ಕನ್ಯಾಕೋಳೂರ ಸ್ವಾಮಿಗಳಾದ ಶ್ರೀ ಷ.ಬ್ರ.ಚನ್ನವೀರ ಶಿವಾಚಾರ್ಯರು ವಹಿಸಿಕೊಂಡಿದ್ದರು,ಈ ಸಂದರ್ಭದಲ್ಲಿ ಸಮಾಜಮುಖಿ ಕೆಲಸ ಮಾಡಿದ ಐದು ಜನ ಹಿರಿಯ ಸಾಧಕರಾದ ಗೌಡಪ್ಪಗೌಡ ಮಾಸ್ಟರ್,ಗುರುಸಂಗಪ್ಪ ದೇಸಾಯಿ,ವೆಂಕೋಬರಾವ್ ಶಿರವಾಳಕರ, ಸೋಮಶೇಖರಯ್ಯ ಸ್ವಾಮಿ ಹಿರೇಮಠ,ಗುರುಬಸಯ್ಯ ಗದ್ದುಗೆ,ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.ಈ ಸಮಾರಂಭದ ವೇದಿಕೆ ಮೇಲೆ ಡಾ. ಶರಣು.ಬಿ ಗದ್ದುಗೆ, ಬಸವರಾಜ ಹಿರೇಮಠ,ಹಾಗೂ ಇತರರು ಉಪಸ್ಥಿತರಿದ್ದರು. ಕುಮಾರಿ ದೀಪಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು, ಸುರೇಶ ಅರುಣಿ ಸ್ವಾಗತಿಸಿದರು, ಬಸವರಾಜ ಸಿನ್ನೂರ ನಿರೂಪಿಸಿದರು,ನಾಗರಾಜ ಜಮದರಖಾನಿ ವಂದಿಸಿದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

11 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420