ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನ ರಾಜಕೀಯ ದುರುದ್ದೇಶಪೂರಿತ: ಮಾಜಿ ಸಿಎಂ

0
136

ಬೆಂಗಳೂರು: ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಸಿಬಿಐ ಬಂಧಿಸಿರುವುದು ರಾಜಕೀಯ ದುರುದ್ದೇಶಪೂರಿತ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪ್ರತಿಕ್ರಿಯೆಸಿದ ಅವರು ಸೈದ್ಧಾಂತಿಕವಾಗಿ ರಾಜಕೀಯ ವಿರೋಧಿಗಳನ್ನು ಎದುರಿಸಲಾಗದ ಬಿಜೆಪಿ ಸಿಬಿಐ ನಂತಹ ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಂಡು ವಿರೋಧ ಪಕ್ಷದ ದನಿ ಅಡಗಿಸಲು ಪ್ರಯತ್ನಿಸುತ್ತಿರುವುದಕ್ಕೆ ಈ ಪ್ರಕರಣ ಇನ್ನೊಂದು ಸಾಕ್ಷಿ ಎಂದರು.

Contact Your\'s Advertisement; 9902492681

ಮಾಜಿ ಸಚಿವ ವಿನಯ ಕುಲಕರ್ಣಿ ಜೊತೆ ನಾನು ಮಾತಾಡಿದ್ದೆ. ತಾನು ನಿರಪರಾಧಿ, ತನ್ನದೇನೂ ಪಾತ್ರ ಇಲ್ಲ ಎಂದು ತಿಳಿಸಿದ್ದರು. ತನಿಖೆ ಮಾಡಿದ್ದ ರಾಜ್ಯದ ಪೊಲೀಸರು ಕೂಡಾ ಯಾವುದೇ ಆರೋಪ ಹೊರಿಸಿಲ್ಲ. ಇದರಿಂದ ನಿರಾಶೆಗೀಡಾದ ಬಿಜೆಪಿ ನಾಯಕರು ಸಿಬಿಐ ಮೂಲಕ ಅವರನ್ನು ಹಣಿಯಲು ಹೊರಟಿದ್ದಾರೆ ಎಂದು ಕಿಟಿಕಾರಿದ್ದಾರೆ.

ಕಾಂಗ್ರೆಸ್ ನಾಯಕರನ್ನು ತಮ್ಮ ಪಕ್ಷಕ್ಕೆ ಸೆಳೆಯುವ ಪ್ರಯತ್ನದಲ್ಲಿರುವ ಬಿಜೆಪಿ, ಅವರ ಮೇಲೆ ಪೊಲೀಸ್, ಸಿಬಿಐ, ಆದಾಯ ತೆರಿಗೆ ಇಲಾಖೆ, ಇ.ಡಿ. ಮೊದಲಾದ ಕೇಂದ್ರಾಧೀನ ಸಂಸ್ಥೆಗಳ ಮೂಲಕ ಒತ್ತಡ ಹೇರುವ ಪ್ರಯತ್ನ ನಡೆಸುತ್ತಿದೆ. ಇಂತಹ ಸವಾಲನ್ನು ಎದುರಿಸಿ ಗೆಲ್ಲುವ ಶಕ್ತಿಯನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here