ಕಲಬುರಗಿ: ಕರ್ನಾಟಕ ರಾಜ್ಯಾದ್ಯಾಂತ ಟೈಲರ್ ವೃತ್ತಿ ಮಾಡುವವರು ಅಸಂಘಟಿತ ವಲಯದವರಾಗಿದ್ದು, ಯಾವುದೇ ಸೌಲತ್ತುಗಳಿಲ್ಲದೆ ಬಳಲುತ್ತಿದ್ದಾರೆ. ಟೈಲರ್ಗಳ ಕಲ್ಯಾಣ ಮಂಡಳಿಗೆ ಟೆಕ್ಸಟೈಲ್ ಮಿಲ್ಸ್, ಗಾರ್ಮೆಂಟ್ಸ್, ಬಟ್ಟೆ ಅಂಗಡಿಗಳು ಹಾಗೂ ಬಟ್ಟೆ ಹೊಲಿಗೆಗೆ ಪೂರಕವಾಗಿ ಉತ್ಪನ್ನ ಮಾಡುವ ಸರಕುದಾರ ಉತ್ಪಾದಕರಿಂದ ಶೇ ೨% ಸೆಸ್ ಸಂಗ್ರಹ ಮಾಡುವ ಮೂಲಕ ಟೈಲರ್ ಕಲ್ಯಾಣ ಮಂಡಳಿ ಜಾರಿಗೆ ತಂದು ರಾಜ್ಯಾದ್ಯಂತ ಇರುವ ಟೈಲರ್ಗಳ ಹಾಗೂ ಟೈಲರ್ಗಳ ಕುಟುಂಬದವರಿಗೆ ನೆರವು ನೀಡಬೇಕೆಂದು ಎಐಟಿಯುಸಿ ಜಿಲ್ಲಾಧ್ಯಕ್ಷರಾದ ಪ್ರಭುದೇವ ಯಳಸಂಗಿ ಒತ್ತಾಯಿಸಿದ್ದಾರೆ.
ಇಂದು ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಷಯದ ಕುರಿತು ಒತ್ತಾಯಿಸಿ 9 ರಂದು ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಆಗ್ರಹಿಸಲಾಗುವುದೆಂದು ತಿಳಿಸಿದರು.
ಇಂದು ಟೈಲರ್ ವೃತ್ತಿಯಲ್ಲಿ ತೊಡಗಿರುವವರಲ್ಲಿ ಪುರುಷರು ಸೇರಿದಂತೆ ಬಹುತೇಕ ಮಹಿಳೆಯರಿದ್ದಾರೆ. ಮನೆಗಳಲ್ಲಿ ಬಟ್ಟೆ ಹೊಲಿಯುವ, ಅಂಗಡಿಗಳಲ್ಲಿ ಹೊಲಿಯುವ, ಕಾರ್ಮಿಕರ ಕಾಯ್ದೆ ಅನ್ವಯಿಸದೆ ಇರುವ ಸಣ್ಣ ಸಣ್ಣ ಗಾರ್ಮೆಂಟ್ಸ್ ಘಟಕಗಳಲ್ಲಿ ಟೈಲರಿಂಗ ಮಾಡುವ ಟೈಲರ್ಗಳು ನಮ್ಮ ರಾಜ್ಯದಲ್ಲಿ ಸುಮಾರು ೨೦ ಲಕ್ಷದಷ್ಟಿರುವ ಅಂದಾಜಿದೆ. ಟೈಲರ್ ವೃತ್ತಿ ಮಾಡುತ್ತಿರುವವರಲ್ಲಿ ಪ್ರೌಢಶಿಕ್ಷಣ ಪಡೆದವರಿದ್ದಾರೆ. ಪದವಿ ಪೂರ್ವ ಶಿಕ್ಷಣ ಪಡೆದವರೂ ಇದ್ದಾರೆ. ಕನಿಷ್ಠ ಪ್ರೌಢಶಿಕ್ಷಣ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣ ಪಡೆದ ಇವರುಗಳು ಸರ್ಕಾರಿ ಕೆಲಸ ಕಾಯ್ದೆ ಸ್ವಯಂ ಉದ್ಯೋಗ ಹುಡುಕಿಕೊಳ್ಳುವಲ್ಲಿ ಮುಂದಾಗಿ ಟೈಲರಿಂಗ್ ತರಬೇತಿ ಪಡೆದು ಸ್ವತಃ ಟೈಲರ್ ವೃತ್ತಿ ಮಾಡುತ್ತಿದ್ದಾರೆ. ಕೆಲವರು ಸಣ್ಣಪುಟ್ಟ ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುತ್ತಿದ್ದರೂ ಅಲ್ಲಿನ ಕೆಲಸಗಾರರು ಇಪ್ಪತ್ತರ ಸಂಖ್ಯೆಯ ಒಳಗಿರುವುದರಿಂದ ಅಲ್ಲಿ ಅವರಿಗೆ ಕಾರ್ಮಿಕ ಕಾಯ್ದೆ ಅನ್ವಯಿಸದೆ ಇರುವುದರಿಂದ ಕಾಯ್ದೆಬದ್ಧ ಕಾನೂನಿಗೆ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಧನ ಸಹಾಯ, ಮಕ್ಕಳ ವಿದ್ಯಾಭ್ಯಾಸಕ್ಕೆ ಸ್ಕಾಲರ್ಶಿಪ್, ಮಕ್ಕಳ ಮದುವೆಗೆ ಧನ ಸಹಾಯ, ಅಪಘಾತ ಪರಿಹಾರ, ಪಿಂಚಣಿ ವ್ಯವಸ್ಥೆ, ಮಹಿಳಾ ಟೈಲರ್ಗಳಿಗೆ ಎರಡು ಮಕ್ಕಳಿಗೆ ಹೆರಿಗೆ ಭತ್ಯೆ ಧನಸಹಾಯ, ಟೈಲರ್ಗಳ ಸಹಜ ಸಾವು ಮತ್ತು ಅಪಘಾತ ಸಾವು, ಪರಿಹಾರ ಮುಂತಾದ ಸೌಲಭ್ಯಗಳನ್ನು ಒದಗಿಸಲು ಸರಕಾರ ಟೈಲರ್ಸ್ ಕಲ್ಯಾಣ ಮಂಡಳಿ ಸ್ಥಾಪಿಸಬೇಕು ಈ ಸಂದರ್ಭದಲ್ಲಿ ಆಗ್ರಹಿಸಿದರು.
ಕಾನೂನು ಸಲಹೆಗಾರರಾದ ನ್ಯಾಯವಾದಿ ಹಣಮಂತರಾಯ ಅಟ್ಟೂರ, ಜಿಲ್ಲಾ ಸಂಚಾಲಕರಾದ ಕಲ್ಯಾಣಿ ತುಕ್ಕಾಣಿ, ಅನಿತಾಬಾಯಿ ಭಕರೆ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…