ಬೆಂಗಳೂರು/ಕಲಬುರಗಿ: ಕೊರೋನಾ ಲಾಕ್ಡೌನ್ನಿಂದ ಸಂಕಷ್ಟದ ಖೆಡ್ಡಾದಲ್ಲಿ ಬಿದ್ದಿರುವ ರಾಜ್ಯದ ಜನ ಇನ್ನೂ ಸರಿಯಾಗಿ ಎದ್ದು ನಿಂತಿಲ್ಲ, ಈಗ ಸರಕಾರ ವಿದ್ಯುಚ್ಚಕ್ತಿ ದರ ಹೆಚ್ಚಳಕ್ಕೆ ಮುಂದಾಗಿರೋದು ಸರಿಯಾದಂತಹ ಕ್ರಮವಲ್ಲ ಎಂದಿರುವ ವಿದಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ. ಅಜಯ್ ಸಿಂಗ್ ಜನರ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ತಕ್ಷಣ ಸದರಿ ಕ್ರಮದಿಂದ ಹಿಂದಡಿ ಇಡಬೇಕು ಎಂದು ಸಿಎಂ ಯಡಿಯೂರಪ್ಪನವರಿಗ ಆಗ್ರಹಿಸಿದ್ದಾರೆ.
ಕೊರೊನಾದಿಂದ ಜನತೆ ಸಂಕಷ್ಟದಲ್ಲಿದ್ದಾರೆ, ಆರ್ಥಿಕ ಚಟುವಟಿಕೆ ಸ್ಥಗಿತಗೊಂಡಿದೆ. ಜನರ ಬಳಿ ಹಣವಿಲ್ಲ, ಇಂತಹ ಸಂದರ್ಭದಲ್ಲಿ ದರ ಏರಿಕೆ ಮಾಡಬಾgದು. ಕೊರೊನಾ ಹಿನ್ನೆಲೆಯಲ್ಲಿ ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿರುವಾಗ ಉದ್ದಿಮೆಗಳು ನಷ್ಟ ಅನುಭವಿಸುತ್ತಿರುವಾಗ ಸರ್ಕಾರ ದರ ಏರಿಕೆ ಮಾಡಿರುವುದು ತಪ್ಪು. ಈ ದರ ಏರಿಕೆಯನ್ನ ಕೂಡಲೇ ವಾಪಸ್ ಪಡೆಯಬೇಕು ಎಂದು ಡಾ. ಅಜಯ್ಸಿಂಗ್ ಒತ್ತಾಯಿಸಿದ್ದಾರೆ.
ವಿದ್ಯುಚ್ಚಕ್ತಿ ದರ ಹೆಚ್ಚಳದ ಬದಲಿಗೆ ಸರಕಾರ ಇಂಧನ ದರಗಳನ್ನು ಕಡಿಮೆ ಮಾಡಲಿ, ಪೆಟ್ರೋಲ್, ಡೀಸೆಲ್ ಮೇಲಿನ ರಾಜ್ಯದ ಪಾಲಿನ ಸುಂಕ ಹಿಂದಕ್ಕೆ ಪಡೆದು ಇವುಗಳ ದರ ಕಮ್ಮಿಯಾದಲ್ಲಿ ಮಾರುಕಟ್ಟೆಯಲ್ಲಿ ಆರ್ಥಿಕ ಚೇತರಿಗೆ ಕಾಣುತ್ತದೆ. ಇಂತಹ ಉಪಕ್ರಮಗಳನ್ನು ಕೈಗೊಳ್ಳದೆ ರಾಜ್ಯ ಸರಕಾರ ಮನಸೋ ಇಚ್ಚೆ ವರ್ತಿಸುತ್ತ ಜನರನ್ನು ಗೋಳು ಹುಯ್ದುಕೊಳ್ಳುತ್ತಿದೆ ಎಂದು ಡಾ. ಅಜಯ್ ಸಿಂಗ್ ಸರಕಾರದ ಕ್ರಮವನ್ನು ಟೀಕಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…