ಬಿಸಿ ಬಿಸಿ ಸುದ್ದಿ

ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಒತ್ತಾಯಿಸಿ ಆಮ್ ಆದ್ಮಿ ಪಕ್ಷದಿಂದ ಪ್ರತಿಭಟನೆ

ಬೆಂಗಳೂರು: ಯೋಜನೆ ಕಾರ್ಯಾರಂಭ ಮಾಡಿ ಅದನ್ನು ಕಾಲಾವಧಿಯೊಳಗೆ ಮುಗಿಸದೇ ಪ್ರತಿ ವರ್ಷ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿಕೊಂಡು, ಜನರ ತೆರಿಗೆ ಹಣ ನುಂಗುವುದನ್ನೇ ಅಭ್ಯಾಸ ಮಾಡಿಕೊಂಡಿರುವುದಕ್ಕೆ ತಾಜಾ ಉದಾಹರಣೆ ಎಂದರೆ ಶಿವಾನಂದ ವೃತ್ತದ ಬಳಿ ನಿರ್ಮಿಸಲು ಹೊರಟಿರುವ ಉಕ್ಕಿನ ಸೇತುವೆ ಎಂದು ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ವ್ಯಂಗ್ಯವಾಡಿದರು.

ನಗರದ ಶಿವಾನಂದ ವೃತ್ತದ ಉಕ್ಕಿನ ಸೇತುವೆ ಬಳಿ ಆಮ್ ಆದ್ಮಿ ಪಕ್ಷದಿಂದ ನಡೆದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ಸುಮಾರು 3 ವರ್ಷಗಳ ಹಿಂದೆ ಅಂದರೆ
ಜೂನ್ 30, 2017 ರಂದು ಕಾರ್ಯಾದೇಶವಾಗಿನಿಂದ ಕೇವಲ ಶೇ 40 ರಷ್ಟು ಕಾಮಗಾರಿ ಪೂರ್ಣಗೊಂಡಿರುವುದನ್ನು ನೋಡಿದರೆ ಬಿಬಿಎಂಪಿಯ ಆಡಳಿತ ವೈಖರಿಗೆ ಕನ್ನಡಿಯಾಗಿದೆ.

ಈ ಕಾಮಗಾರಿಯ ಅವಧಿ 18 ತಿಂಗಳು ಅಂದರೆ 2019ರ ಮಾರ್ಚ್ ಅಂತ್ಯಕ್ಕೆ ಮುಗಿಸಬೇಕಿತ್ತು, ಈಗಾಗಲೇ ಬರೋಬ್ಬರಿ 27 ತಿಂಗಳುಗಳು ಕಳೆದಿವೆ. 2020 ಮುಗಿಯುತ್ತಾ ಬಂದರೂ ಅದರ ಸುಳಿವಿಲ್ಲ. ಈ ಉಕ್ಕಿನ ಸೇತುವೆಯನ್ನು ಪ್ರಾರಂಭಿಸುವಾಗ ಅಂದಾಜು ಮಾಡಿದ್ದ ಯೋಜನಾ ವೆಚ್ಚ 19 ಕೋಟಿ. ಈಗಾಗಲೇ ಎರಡು ಬಾರಿ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿದ್ದು 60 ಕೋಟಿಗೆ ಮುಟ್ಟಿದೆ. ಇದೇ ರೀತಿ ಎಲ್ಲಾ ಕಾಮಗಾರಿಗಳನ್ನು ಕಾಲಾವಧಿಯಲ್ಲಿ ಮುಗಿಸದೆ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಈಗ ಇಲ್ಲಿ ಕಾಮಗಾರಿ ಆರಂಭಿಸಿದರೆ ಹಿಂದೆಂದೂ ಕಾಣದಷ್ಟು ಸಂಚಾರ ದಟ್ಟಣೆ ಉಂಟಾಗುತ್ತದೆ.ಶಿವಾನಂದ ಸರ್ಕಲ್ ಮಾತ್ರವಲ್ಲದೆ ಸುತ್ತಲಿನ ಮಲ್ಲೇಶ್ವರ, ಆನಂದರಾವ್ ವೃತ್ತ ಹಾಗೂ ಇನ್ನಿತರೆ ಕಡೆಗಳಲ್ಲೂ ಸಂಚಾರ ದಟ್ಟಣೆ ವಿಪರೀತವಾಗಲಿದೆ.

Mohan Dasari – President, Suresh Rathod – Vice President and Laxmikanth Roa – Political Advisor were present at the protest

ಮೊದಲು ಮೇಲ್ಸೇತುವೆ ಉದ್ದವನ್ನು 326 ಮೀ.ಗೆ ನಿಗದಿ ಮಾಡಲಾಗಿತ್ತು. ಕಾಮಗಾರಿ ಆರಂಭವಾಗಿ ಒಂದೂವರೆ ವರ್ಷದ ನಂತರ ರೇಸ್ಕೋರ್ಸ್ ರಸ್ತೆ ದಿಕ್ಕಿಗೆ ಮೇಲ್ಸೇತುವೆ ಉದ್ದವನ್ನು 493 ಮೀ.ಗೆ ಏರಿಕೆ ಮಾಡಲಾಗಿದೆ ಎಂಬುದು ಏಕೆ ಎಂದು ಅಧಿಕಾರಿಗಳು ಉತ್ತರಿಸಬೇಕು ಎಂದು ಆಗ್ರಹಿಸಿದರು.

ಸಂಚಾರ ದಟ್ಟಣೆಯಿಂದ ಕಿರಿಕಿರಿ ಅನುಭವಿಸುತ್ತಿರುವ ಜನರಿಗೆ ಉತ್ತಮ ಸೌಕರ್ಯ ಒದಗಿಸುತ್ತೇವೆ ಎಂದು ಆರಂಭಿಸುವ ಕಾಮಗಾರಿಗಳನ್ನು ಗುತ್ತಿಗೆದಾರರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಮುಂದೂಡಿ ಯೋಜನಾ ವೆಚ್ಚವನ್ನು ಹೆಚ್ಚಳ ಮಾಡಿ, ಹಣ ನುಂಗುವ ಹುನ್ನಾರವಾಗಿದೆ. ಈ ಕೂಡಲೇ ಈ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಬೇಕು ಎಂದು ಒತ್ತಾಯಿಸಿದರು.

ಪ್ರಸ್ತುತ ಮುಗಿದಿರುವ ಕಾಮಗಾರಿಯ ಗುಣಮಟ್ಟ ಸಹ ಕಳಪೆ ಆಗಿದ್ದು ಈಗಾಗಲೇ ಹಾಕಿರುವ ಉಕ್ಕಿನ ಕಂಬಗಳ ಸಾಮರ್ಥ್ಯವೂ ಸಹ ಅನುಮಾನಸ್ಪದವಾಗಿದ್ದು ಅರ್ಧ ಕಾಮಗಾರಿ ಮುಗಿಸಿ ನಿಲ್ಲಿಸಿರುವ ಕಂಬಗಳು ತುಕ್ಕು ಹಿಡಿದಿವೆ.

ದೆಹಲಿ ಸರ್ಕಾರ ಈಗಾಗಲೇ ಸುಮಾರು 25 ಕ್ಕೂ ಹೆಚ್ಚು ಫ್ಲೈಓವರ್ಗಳನ್ನು ಸುಮಾರು 4 ವರ್ಷಗಳ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಿದೆ, ಇದು ಎಂಜಿನಿಯರಿಂಗ್ ಶ್ರೇಷ್ಠತೆಗೆ ಸಾಕ್ಷಿಯಾಗಿದೆ.

ವಿಕಾಸಪುರಿಯಿಂದ ಮೀರಾಭಾಗ್ ಎಲಿವೇಟೆಡ್ ಕಾಮಗಾರಿ ಒಂದು ಕ್ರಾಂತಿಕಾರಕ ಯೋಜನೆ ಎಂದೇ ಕರೆಯಬಹುದು
ಈ ಯೋಜನೆಯ ಒಟ್ಟಾರೆ ಉದ್ದ: 4300, ವೆಚ್ಚ: ರೂ .559.60 ಕೋಟಿ ಖರ್ಚಾಗಬಹುದು ಎಂದು ಅಂದಾಜಿಸಿದ್ದ ಯೋಜನೆಗೆ ಖರ್ಚಾಗಿದ್ದು 445 ಕೋಟಿ, ಉಳಿತಾಯ ರೂ 114.60 ಕೋಟಿ
ಈ ಕಾಮಗಾರಿ ಮಂಜೂರಾದ ದಿನಾಂಕ 24.07.2016 ಪೂರ್ಣಗೊಂಡ ದಿನಾಂಕ: 21.07.2017 ಕೇವಲ ಒಂದು ವರ್ಷದ ಅವಧಿಯಲ್ಲಿ ಉದ್ದನೆಯ ಎಲಿವೇಟೆಡ್ ಕಾಮಗಾರಿ ಮುಗಿಸಿರುವುದು ನಿಜಕ್ಕೂ ಹೆಮ್ಮೆಯ ಸಾಧನೆ

ಈ ಮೇಲಿನ ಎರಡು ನಿದರ್ಶನಗಳು ಮಾತ್ರ ನಿಮ್ಮ ಮುಂದೆ ಇರಿಸಲಾಗಿದೆ. ಕಳೆದ 6 ವರ್ಷಗಳಲ್ಲಿ ಇಂತಹ 20 ಕ್ಕೂ ಹೆಚ್ಚು ಯಶಸ್ವಿ ಕಾಮಗಾರಿಗಳನ್ನು ಮುಗಿಸಿದ ನಿದರ್ಶನವಿದೆ.

ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಬಾಕಿ ಉಳಿಸಿಕೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸದಿದ್ದರೆ ಎಲ್ಲಾ ಅಪೂರ್ಣ ಕಾಮಗಾರಿಗಳ ಎದುರು ಸರಣಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

emedialine

Recent Posts

ನ್ಯಾಯವಾದಿ ವಿನೋದ ಕುಮಾರ ಎಸ್. ಜೇ. ನಾಮಪತ್ರ ಸಲ್ಲಿಕೆ

ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…

10 hours ago

13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…

10 hours ago

ಕಾರ್ಮಿಕರ ಸಚಿವರ ಕಲಬುರಗಿ ಪ್ರವಾಸ ರದ್ದು

ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…

10 hours ago

ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಾಶಿ ಮಾದರಿಯಲ್ಲಿ ದತ್ತನ‌ ಕ್ಷೇತ್ರ ಅಭಿವೃದ್ಧಿ

ಕರ್ನಾಟಕ‌ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…

10 hours ago

ಚಿಂಚೋಳಿ: ಶರಣು ಪಾಟೀಲ್ ಮೋತಕಪಲ್ಲಿ ನಾಮಪತ್ರ ಸಲ್ಲಿಕೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…

11 hours ago

ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ತಿದ್ದು ಪಡಿಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…

12 hours ago