ಬಿಸಿ ಬಿಸಿ ಸುದ್ದಿ

ಸುಕನ್ಯಾ ಸಮೃದ್ಧಿ ಯೋಜನೆ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕೆ ಆಶಾಕಿರಣ-ಜಯಶ್ರೀ ಮತ್ತಿಮಡು

ಶಹಾಬಾದ:ಕೇಂದ್ರ ಸರಕಾರ ತನ್ನ ಸಾಮಾಜಿಕ ಕಲ್ಯಾಣದ ಯೋಜನೆಯಡಿ ಜಾರಿಗೆ ತಂದಿರುವ ಸುಕನ್ಯಾ ಸಮೃದ್ಧಿ ಯೋಜನೆಯು ನಿಜಕ್ಕೂ ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕೆ ಆಶಾಕಿರಣ ಎಂದು ಬಿಜೆಪಿ ಮುಖಂಡೆ ಜಯಶ್ರೀ ಬಸವರಾಜ ಮತ್ತಿಮಡು ಹೇಳಿದರು.

ಅವರು ನಗರದ ಜೆಪಿ ಕಾಲೋನಿಯಲ್ಲಿ ಬಿಜೆಪಿ ಮಹಿಳಾ ಮೋಚರ್ಾದ ವತಿಯಿಂದ ಆಯೋಜಿಸಲಾದ ಸುಕನ್ಯಾ ಸಮೃದ್ಧಿ ಯೋಜನೆಯ ಜಾಗೃತಿ ಶಿಬಿರದಲ್ಲಿ ಮಾತನಾಡಿದರು.

ಹೆಣ್ಣು ಮಗುವಿನ ಉನ್ನತ ಶಿಕ್ಷಣಕ್ಕೆ,ವಿವಾಹ,ಮನೆ ಖರೀದಿ, ಬಂಗಾರ ಒಡವೆ ಮುಂತಾದ ಅರ್ಥಪೂರ್ಣ ಕಾರ್ಯಗಳಿಗೆ ಸುಕನ್ಯಾ ಸಮೃದ್ಧಿ ಯೋಜನೆ ಲಾಭದಾಯಕ.ಅದಕ್ಕಾಗಿ ತಮ್ಮ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆದು ಈ ಯೋಜನೆಯ ಲಾಭ ಪಡೆಯಿರಿ ಎಂದು ಹೇಳಿದರು.

ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಭಾಗಿರಥಿ ಗುನ್ನಾಪೂರ ಮಾತನಾಡಿ, ದೇಶದ ಹೆಣ್ಣು ಮಕ್ಕಳ ಭವಿಷ್ಯವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಆರಂಭಿಸಿದ ಸುಕನ್ಯಾ ಸಮೃದ್ಧಿ ಯೋಜನೆ ನಿಜಕ್ಕೂ ಹೆಣ್ಣು ಮಕ್ಕಳು ಸ್ವಾಭಿಮಾನದಿಂದ ಬದುಕಲು ಸಾಧ್ಯವಾಗುತ್ತದೆ.ಪ್ರಧಾನಿ ಮೋದಿಯವರು ಬೇಟಿ ಬಚಾವೊ, ಬೇಟಿ ಪಡಾವೊ ಅಭಿಯಾನದಡಿ ಈ ಯೋಜನೆಯನ್ನು ಪ್ರಾರಂಭಿಸಿ ಇಡೀ ಹೆಣ್ಣು ಮಕ್ಕಳ ಭವಿಷ್ಯಕ್ಕೆ ದಾರಿದೀಪವಾಗಿದ್ದಾರೆ.ಈ ಯೋಜನೆ ಹೆಣ್ಣು ಮಕ್ಕಳಿಗೆ ಮಾತ್ರ ಅನ್ವಯಿಸುತ್ತದೆ.ಖಾತೆ ತೆರೆಯುವ ಸಮಯದಲ್ಲಿ ಹೆಣ್ಣು ಮಗುವಿಗೆ 10 ವರ್ಷಕ್ಕಿಂತ ಕಡಿಮೆ ಇರಬೇಕು.ಇದು ಸಣ್ಣ ಠೇವಣಿ ಯೋಜನೆಯಾಗಿದ್ದು, ಹೆಣ್ಣು ಮಗುವಿನ ಶಿಕ್ಷಣ ಮತ್ತು ವಿವಾಹ ವೆಚ್ಛಗಳನ್ನು ಪೂರೈಸುತ್ತದೆ ಎಂದರು.

ಮಹಿಳಾ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಜ್ಯೋತಿ ಶಮರ್ಾ ಮಾತನಾಡಿದರು. ಮಹಿಳಾ ಘಟಕದ ತಾಲೂಕಾಧ್ಯಕ್ಷೆ ಜಯಶ್ರೀ ಸೂಡಿ, ನಿವೃತ್ತ ಶಿಕ್ಷಕಿ ಕಮಲಾಬಾಯಿ ಕಂಬಾನೂರ, ನಗರಸಭೆ ಸದಸ್ಯ ರವಿ ರಾಠೋಡ, ಸರಸ್ವತಿ ಅಶೋಕ, ಸುಜಾತಾ, ಶಿಲ್ಪಾ ಸೇರಿದಂತೆ ಇತರರು ಇದ್ದರು.

emedia line

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago