ಶಹಾಬಾದ:ನಗರದಲ್ಲಿ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನ ನಿರ್ಮಾಣ ಮಾಡಲು ಜಾಗವಿಲ್ಲದ ಕಾರಣ, ಸರ್ಕಾರಿ ಗೈರಾಣಿ ಜಮೀನಿನಲ್ಲಿ ಎರಡು ಎಕರೆ ಜಾಗ ಮಂಜೂರಾತಿ ಮಾಡಬೇಕೆಂದು ಒತ್ತಾಯಿಸಿ ಶುಕ್ರವಾರ ಕರ್ನಾಟಕ ನವನಿರ್ಮಾಣ ವೇದಿಕೆಯ ವತಿಯಿಂದ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಂತರ ಮಾತನಾಡಿದ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ.ಕೆ.ನಾಟೀಕಾರ, ಈಗಾಗಲೇ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನ ನಿರ್ಮಾಣ ಮಾಡಲು 2016-17ನೇ ಸಾಲಿನಲ್ಲಿ 1 ಕೋಟಿ ರೂಪಾಯಿ ಮಂಜೂರಾಗಿದ್ದು, ಸದರಿ ಭವನದ ನಿರ್ಮಾಣ ಮಾಡಲು ನಗರದಲ್ಲಿ ಜಾಗವಿಲ್ಲ.ಆದ್ದರಿಂದ ಸರಕಾರಿ ಗೈರಾಣಿ ಜಮೀನು ಸರ್ವೆ ನಂ.184 ರಲ್ಲಿ 27 ಎಕರೆ 38 ಗುಂಟೆ ಜಮೀನು ಲಭ್ಯವಿದೆ.ಆ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಎರಡು ಎಕರೆ ಜಮೀನು ಮಂಜೂರು ಮಾಡಬೇಕು.ಇದರಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಮದುವೆ, ವಿಚಾರಗೋಷ್ಠಿ, ವಿಚಾರ ಸಂಕೀರಣ, ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಲು ಅನುಕೂಲವಾಗುತ್ತದೆ.ಆದ್ದರಿಂದ ಕೂಡಲೇ 2 ಎಕರೆ ಜಮೀನು ಮಂಜೂರು ಮಾಡಿ, ಭವನದ ನಿಮರ್ಾಣಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.
ಕರ್ನಾಟಕ ನವನಿರ್ಮಾಣ ವೇದಿಕೆಯ ಕಲಬುರಗಿ ನಗರಾಧ್ಯಕ್ಷ ಸುದರ್ಶನ.ಎಸ್, ಕರ್ನಾಟಕ ನವನಿರ್ಮಾಣ ವೇದಿಕೆಯ ಶಹಾಬಾದ ಅಧ್ಯಕ್ಷ ನಾಗರಾಜ ಮುದ್ನಾಳ, ಉಪಾಧ್ಯಕ್ಷ ದ್ವಾರಕನಾಥ ಭಂಡಾರಿ, ಪ್ರಧಾನ ಕಾರ್ಯದರ್ಶಿ ಅಂಬರೇಷ ಮೈನಾಳಕರ್,ಕಾರ್ಯದರ್ಶಿ ರೇವಣಸಿದ್ದಪ್ಪ ಪಸಪುಲ್, ಸಹಕಾರ್ಯದರ್ಶಿ ರವಿ ಹುಸನಪ್ಪಾ, ಶಿವರಾಜ ಕೋರೆ, ರವಿ ಬೆಳಮಗಿ, ಶರಣು ಪಗಲಾಪೂರ,ಕರ್ಣ ಕಾಳನೂರ,ನಾಗಪ್ಪ ರಾಯಚೂರಕರ್,ನಂದಕಿಶೋರ ಕಾಂಬಳೆ, ಮರಲಿಂಗ ಮಂಡಿ ಇತರರು ಇದ್ದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…