ಬಿಸಿ ಬಿಸಿ ಸುದ್ದಿ

ಡಾ.ಬಾಬು ಜಗಜೀವನರಾಮ ಭವನಕ್ಕೆ ಜಾಗ ಮಂಜೂರಾತಿ ಮಾಡಿ

ಶಹಾಬಾದ:ನಗರದಲ್ಲಿ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನ ನಿರ್ಮಾಣ ಮಾಡಲು ಜಾಗವಿಲ್ಲದ ಕಾರಣ, ಸರ್ಕಾರಿ ಗೈರಾಣಿ ಜಮೀನಿನಲ್ಲಿ ಎರಡು ಎಕರೆ ಜಾಗ ಮಂಜೂರಾತಿ ಮಾಡಬೇಕೆಂದು ಒತ್ತಾಯಿಸಿ ಶುಕ್ರವಾರ ಕರ್ನಾಟಕ ನವನಿರ್ಮಾಣ ವೇದಿಕೆಯ ವತಿಯಿಂದ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಮಾತನಾಡಿದ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾಧ್ಯಕ್ಷ ಚಂದ್ರಕಾಂತ.ಕೆ.ನಾಟೀಕಾರ, ಈಗಾಗಲೇ ಡಾ.ಬಾಬು ಜಗಜೀವನರಾಮ ಅವರ ಸಮುದಾಯ ಭವನ ನಿರ್ಮಾಣ ಮಾಡಲು 2016-17ನೇ ಸಾಲಿನಲ್ಲಿ 1 ಕೋಟಿ ರೂಪಾಯಿ ಮಂಜೂರಾಗಿದ್ದು, ಸದರಿ ಭವನದ ನಿರ್ಮಾಣ ಮಾಡಲು ನಗರದಲ್ಲಿ ಜಾಗವಿಲ್ಲ.ಆದ್ದರಿಂದ ಸರಕಾರಿ ಗೈರಾಣಿ ಜಮೀನು ಸರ್ವೆ ನಂ.184 ರಲ್ಲಿ 27 ಎಕರೆ 38 ಗುಂಟೆ ಜಮೀನು ಲಭ್ಯವಿದೆ.ಆ ಜಾಗದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಎರಡು ಎಕರೆ ಜಮೀನು ಮಂಜೂರು ಮಾಡಬೇಕು.ಇದರಿಂದ ಪರಿಶಿಷ್ಟ ಜಾತಿ ಸಮುದಾಯದವರಿಗೆ ಮದುವೆ, ವಿಚಾರಗೋಷ್ಠಿ, ವಿಚಾರ ಸಂಕೀರಣ, ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಮಾಡಲು ಅನುಕೂಲವಾಗುತ್ತದೆ.ಆದ್ದರಿಂದ ಕೂಡಲೇ 2 ಎಕರೆ ಜಮೀನು ಮಂಜೂರು ಮಾಡಿ, ಭವನದ ನಿಮರ್ಾಣಕ್ಕೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.

ಕರ್ನಾಟಕ ನವನಿರ್ಮಾಣ ವೇದಿಕೆಯ ಕಲಬುರಗಿ ನಗರಾಧ್ಯಕ್ಷ ಸುದರ್ಶನ.ಎಸ್, ಕರ್ನಾಟಕ ನವನಿರ್ಮಾಣ ವೇದಿಕೆಯ ಶಹಾಬಾದ ಅಧ್ಯಕ್ಷ ನಾಗರಾಜ ಮುದ್ನಾಳ, ಉಪಾಧ್ಯಕ್ಷ ದ್ವಾರಕನಾಥ ಭಂಡಾರಿ, ಪ್ರಧಾನ ಕಾರ್ಯದರ್ಶಿ ಅಂಬರೇಷ ಮೈನಾಳಕರ್,ಕಾರ್ಯದರ್ಶಿ ರೇವಣಸಿದ್ದಪ್ಪ ಪಸಪುಲ್, ಸಹಕಾರ್ಯದರ್ಶಿ ರವಿ ಹುಸನಪ್ಪಾ, ಶಿವರಾಜ ಕೋರೆ, ರವಿ ಬೆಳಮಗಿ, ಶರಣು ಪಗಲಾಪೂರ,ಕರ್ಣ ಕಾಳನೂರ,ನಾಗಪ್ಪ ರಾಯಚೂರಕರ್,ನಂದಕಿಶೋರ ಕಾಂಬಳೆ, ಮರಲಿಂಗ ಮಂಡಿ ಇತರರು ಇದ್ದರು.

emedia line

Recent Posts

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ದೊಡ್ಡಮನಿ ನಿಧನ

ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…

24 mins ago

ಜೇವರ್ಗಿ: ಲಂಚಾಪಡೆಯುತ್ತಿದ್ದಾಗ ಮಹಿಳಾ ಸಿಬ್ಬಂದಿ ಲೋಕಾಯುಕ್ತರ ಬಲೆಗೆ

ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…

13 hours ago

371 ಜೆ ಅಡಿ ಉದ್ಯೋಗ ನೇಮಕಾತಿ ಸಂಬಂಧದ ಗೊಂದಲ ನಿವಾರಿಸಿ ಮಾರ್ಗಸೂಚಿ ಸಿದ್ಧಪಡಿಸಲು ಸಚಿವರ ಸೂಚನೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…

14 hours ago

ಶ್ಯಾಮರಾವ ನಾಟಿಕಾರಗೆ ಅಧ್ಯಕ್ಷರನ್ನಾಗಿ ನೇಮಕಕ್ಕೆ ಡಾ. ಮಲ್ಲಿಕಾರ್ಜುನ ಖರ್ಗೆಗೆ ಮನವಿ

ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…

15 hours ago

ಚಿರಂಜೀವಿ ವೆಂಕಯ್ಯ ಕುಶಾಲ್ ಗುತ್ತೇದಾರ್ ಗೆ ಸನ್ಮಾನ

ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…

15 hours ago

ಮಹಿಳಾ ಘಟಕದ ನೂತನ ಪದಾಧಿಕಾರಿಗಳ ನೇಮಕ

ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…

15 hours ago