ಶ್ರೀ ಕೋರಿಸಿದ್ದೇಶ್ವರರ ಸ್ಮರಣೋತ್ಸವ ಕಾರ್ಯಕ್ರಮ

ಸುರಪುರ: ನಾಲವಾರದ ಆರಾಧ್ಯ ದೈವವಾದ ಶ್ರೀ ಕೋರಿ ಸಿದ್ದೇಶ್ವರರ ಜನ್ಮಸ್ಥಳವಾದ ನಗರದ ತಿಮ್ಮಾಪುರದಲ್ಲಿ ಶ್ರೀ ಕೋರಿ ಸಿದ್ದೇಶ್ವರರ ಸ್ಮರಣೋತ್ಸವ ಕಾರ್ಯಕ್ರಮ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜಾ ಕೈಂಕರ್ಯ ನೆರವೇರಿಸಿದ ಆಕಾಶವಾಣಿ ಕಲಾವಿದ ಶರಣು ಕುಮಾರ ಜಾಲಹಳ್ಳಿ ಮಾತನಾಡಿ,ಕಾಖಂಡಕಿಯ ಮಲ್ಲಾರಾಧ್ಯರ ಕೃಪೆಯಿಂದ ನಾಲವಾರದಲ್ಲಿ ನೆಲೆ ನಿಂತಿರುವ ಶ್ರೀ ಕೋರಿ ಸಿದ್ದೇಶ್ವರರು ಶಿವಲಿಂಗಾರ್ಯ ಶಿವದೇವಿಯವರ ಉದರದಲ್ಲಿ ಜನಿಸಿ ಇಂದು ಲೋಕ ಪೂಜಿತರಾಗಿದ್ದಾರೆ.ಅಂತಹ ಮಹಾತ್ಮ ಕೋರಿಸಿದ್ದೇಶ್ವರರು ಜನಸಿದ ಈ ಪುಣ್ಯ ನೆಲದಲ್ಲಿ ನಾವೆಲ್ಲರು ಜನಿಸಿರುವುದು ಮಹಾನ್ ಪುಣ್ಯವಾಗಿದೆ ಎಂದರು.

ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ ಮಾತನಾಡಿ,ಪ್ರತಿ ವರ್ಷವು ನಡೆಯುವ ಶ್ರೀ ಕೋರಿ ಸಿದ್ದೇಶ್ವರರ ಈ ಪುಣ್ಯ ಸ್ಮರಣೋತ್ಸವದಲ್ಲಿ ಪಾಲ್ಗೊಳ್ಳುವ ಮೂಲಕ ಈ ಭಾಗದ ಜನರು ಪುನಿತರಾಗುತ್ತಿದ್ದಾರೆ.ಇಂತಹ ಸುದಿನದಲ್ಲಿ ಪಾಲ್ಗೊಳ್ಳುವ ನಾವೆಲ್ಲರು ಧನ್ಯರು,ನಮಗೆ ಸದಾಕಾಲ ಶ್ರೀ ಕೋರಿಸಿದ್ದೇಶ್ವರರ ಆಶಿರ್ವಾದ ಲಭಿಸುತ್ತಿರಲೆಂದು ಪ್ರಾರ್ಥಿಸಿದರು.

ಇದೇ ಸಂದರ್ಭದಲ್ಲಿ ವಾರದ ಕುಟುಂಬದಿಂದ ಹಮ್ಮಿಕೊಂಡಿದ್ದ ಪೂಜಾ ಕಾರ್ಯಕ್ರಮವನ್ನು ಗಾಯಕ ಶರಣು ಕುಮಾರ ಜಾಲಹಳ್ಳಿಯವರು ಪೂಜಾ ಕೈಂಕರ್ಯ ನೆರವೇರಿಸಿದರು ನಂತರ ಪ್ರಸಾದ ವಿತರಣೆಯನ್ನು ನಡೆಸಲಾಯಿತು.ಈ ಸಂದರ್ಭದಲ್ಲಿ ಅಂಬರೀಶ ಕುಂಬಾರ ಚೆನ್ನಣ್ಣ ಎಲಿಗಾರ ವೀರಭದ್ರಪ್ಪ ಕುಂಬಾರ ಯಂಕಪ್ಪ ಸಂಜೀವರಡ್ಡಿ ಚೆನ್ನಪ್ಪ ಆಲ್ದಾಳ ಗುರುಲಿಂಗಯ್ಯ ಸ್ವಾಮಿ ನಾಗಯ್ಯ ಹಿರೇಮಠ ಸಾಯಬಣ್ಣ ಹೆಳವರ ರಜತ್‌ಗೌಡ ಇತರರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

6 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420