ಆಳಂದ: ರಾಜ್ಯದ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯ ಸಾಧಿಸಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಬಿಹಾರ ಫಲಿತಾಂಶವು ಆಶಾದಾಯಕವಾಗಿದ್ದು ಬಿಹಾರದಲ್ಲಿ ಪಕ್ಷದ ನೆಲೆ ಮತ್ತಷ್ಟು ವಿಸ್ತಾರಗೊಂಡಿದೆ. ಈ ಫಲಿತಾಂಶವು ಬಿಜೆಪಿಯ ಶಕ್ತಿಯನ್ನು ಮತ್ತಷ್ಟು ವೃದ್ಧಿಸಿದೆ. ದೇಶದ ಮತ್ತು ರಾಜ್ಯದ ಜನತೆ ಭಾರತೀಯ ಜನತಾ ಪಕ್ಷದ ಜೊತೆ ಇದ್ದಾರೆ ಎನ್ನುವುದು ಮತ್ತೊಮ್ಮೆ ಸಾಬಿತಾಗಿದೆ.
ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪನವರ ಸಮರ್ಥ ನಾಯಕತ್ವಕ್ಕೆ ಸಿಕ್ಕ ಮನ್ನಣೆಯಾಗಿದೆ ಅಭಿಪ್ರಾಯಪಟ್ಟಿದ್ದಾರೆ.