ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ ಎಂದು ತಿಳಿಸಿದ್ದಾರೆ.
ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು ಎಂದು ತಿಳಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೆಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದೂ ಇಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ ಎಂದು ಸೋಲನ್ನು ಒಪ್ಪಿಕೊಂಡಿದ್ದಾರೆ.
ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ ಎಂದರು.
ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು ಎಂದು ಅತ್ಮವಲೋಕನ ಮಾಡಿಕೊಂಡಿದ್ದಾರೆ.
ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು ಎಂದರು.
ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ ಎಂದು ಹೇಳಿದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…