ಕಲಬುರಗಿ: ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳು, 2019-20ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ನಮೂನೆ-90 ರಲ್ಲಿ ಹಾಗೂ 2020-21ನೇ ಸಾಲಿನ ವಾರ್ಷಿಕ ಬಜೆಟ್ ಎಸ್ಟಿಮೆಟ್ನ್ನು ನಮೂನೆ-72ರಲ್ಲಿ ಹಾಗೂ ವಾರ್ಷಿಕ ವಕ್ಫ್ ವಂತಿಗೆಯನ್ನು ಕೂಡಲೇ ಕಲಬುರಗಿ ಜಿಲ್ಲಾ ವಕ್ಫ್ ಕಚೇರಿಯಲ್ಲಿ ಸಲ್ಲಿಸಬೇಕು. ಇದಕ್ಕೆ ತಪ್ಪಿದ್ದಲ್ಲಿ ವಕ್ಫ್ ಕಾಯ್ದೆ-1995 (ತಿದ್ದುಪಡಿ-2013) ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಲಬುರಗಿ ಜಿಲ್ಲಾ ವಕ್ಫ್ ಅಧಿಕಾರಿಗಳು ತಿಳಿಸಿದ್ದಾರೆ.
ವಕ್ಫ್ ಕಾಯ್ದೆ-1995 (ತಿದ್ದುಪಡಿ-2013)ರ ಕಾಯ್ದೆ 46ರ ಪ್ರಕಾರ ಕಲಬುರಗಿ ಜಿಲ್ಲೆಯ ಎಲ್ಲಾ ವಕ್ಫ್ ಸಂಸ್ಥೆಗಳ ಮುತುವಲ್ಲಿ, ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ತಮ್ಮ ವಕ್ಫ್ ಸಂಸ್ಥೆಯ 2019-20ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ನಮೂನೆ-90ರಲ್ಲಿ, ಬಜೆಟ್ ಎಸ್ಟಿಮೇಟನ್ನು ನಮೂನೆ-72ರಲ್ಲಿ ಹಾಗೂ ಕಾಯ್ದೆ-72ರ ಪ್ರಕಾರ ವಾರ್ಷಿಕ ವಂತಿಗೆಯನ್ನು ಕೂಡಲೇ ಜಿಲ್ಲಾ ವಕ್ಫ್ ಕಾರ್ಯಾಲಯಕ್ಕೆ ಸಲ್ಲಿಸಬೇಕು.
ಈವರೆಗೆ ಕೆಲವೇ ವಕ್ಫ್ ಸಂಸ್ಥೆಗಳಿಂದ ಮಾತ್ರ ವಾರ್ಷಿಕ ಲೆಕ್ಕಪತ್ರ, ಬಜೆಟ್ ಅಂದಾಜು ಮತ್ತು ವಂತಿಗೆ ಸಂದಾಯವಾಗಿರುತ್ತದೆ. ಸಂಸ್ಥೆಯ ವಾರ್ಷಿಕ ಲೆಕ್ಕಪತ್ರ, ವಾರ್ಷಿಕ ಬಜೆಟ್ ಅಂದಾಜು ಹಾಗೂ ವಾರ್ಷಿಕ ವಂತಿಗೆಯನ್ನು ಕಲಬುರಗಿ ಜಿಲ್ಲಾ ವಕ್ಫ್ ಕಚೇರಿಗೆ ತಪ್ಪದೇ ಸಲ್ಲಿಸುವುದು ಸಂಸ್ಥೆಯ ಮುತ್ತುವಲ್ಲಿ, ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಕರ್ತವ್ಯವಾಗಿದೆ.
ಅದೇ ರೀತಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು 2014ನೇಯ ವರ್ಷದಲ್ಲಿ ನೂತನ ಬಾಡಿಗೆ ಕಾನೂನು ಜಾರಿ ಮಾಡಿದ್ದು, ಕಲಬುರಗಿ ಜಿಲ್ಲೆಯಲ್ಲಿರುವ ವಕ್ಫ್ ಸಂಸ್ಥೆಗಳ ಅಧ್ಯಕ್ಷರು / ಮುತ್ತವಲ್ಲಿಗಳು ಕಲಬುರಗಿ ಜಿಲ್ಲಾ ವಕ್ಫ್ ಕಚೇರಿಯಿಂದ ನೂತನ ವಕ್ಫ್ ರೂಲ್ಸ್ಗಳನ್ನು ಪಡೆದು ಅದರನ್ವಯ ವಕ್ಫ್ ಸ್ವತ್ತನ್ನು ಬಾಡಿಗೆ ನೀಡಬೇಕು.
ಎಲ್ಲಾ ಬಾಡಿಗೆದಾರರ ಬಾಡಿಗೆ ಕರಾರುಗಳನ್ನು ವಕ್ಫ್ ಮಂಡಳಿಯ ರೂಲ್ಸಿನನ್ವಯ ನವೀಕರಿಸಿ ಕಲಬುರಗಿ ಜಿಲ್ಲಾ ವಕ್ಫ್ ಕಚೇರಿಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.
ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀಕುಟುಂಬಕ್ಕೆ ಒಂದೆಡೆ ದುಃಖ, ತಳವಳ, ಕಳವಳ, ಸಂಕಟ, ಮತ್ತೊಂದೆಡೆಸಂತಸ,…
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…