ಶಹಾಬಾದ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ಬಸವೇಶ್ವರ ಮೂರ್ತಿಯನ್ನು ವಿರೂಪಗೊಳಿಸಿದ ದುಷ್ಕರ್ಮಿ ಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿಲಾಯಿತು.
ಇಡೀ ಮನುಜ ಕಲಕ್ಕೆ ಸಮಾನತೆಯ ಸಮಾಜವನ್ನು ನಿರ್ಮಾಣ ಮಾಡಿದ ಮತ್ತು ಮಾನವೀಯತೆ ಸಂದೇಶ ಸಾರಿದ ಬಸವಣ್ಣನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ನಿಜಕ್ಕೂ ಖಂಡನಾರ್ಹವಾದುದು. ಇಡೀ ವಿಶ್ವವೇ ಬಸವಣ್ಣನವರ ವಿಚಾರಗಳನ್ನು ಒಪ್ಪಿಕೊಂಡಿದೆ.ಅಲ್ಲದೇ ಇಂಗ್ಲೇಡ್ನಲ್ಲಿ ಬಸವಣ್ಣನವರ ಮೂರ್ತಿಯನ್ನು ಸ್ಥಾಪನೆ ಮಾಡಿ ಅವರನ್ನು ಗೌರವಿಸಲಾಗಿದೆ.ಆದರೆ ನಮ್ಮ ರಾಜ್ಯದಲ್ಲಿ ಇಂತಹ ಮಹಾ ಮಾನವತವಾದಿ, ವಿಶ್ವಗುರು ಬಸವಣ್ಣನವರ ಬಗ್ಗೆ ತಿಳಿಯದೇ ಈ ರೀತಿಯ ಕೆಲಸ ಮಾಡಿರುವುದು ಸರಿಯಿಲ್ಲ.ಕೂಡಲೇ ಕಿಡಿಗೇಡಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.ಅಲ್ಲದೇ ಮೂರ್ತಿಯನ್ನು ಪುನರ್ ಸ್ಥಾಪನೆ ಮಾಡಬೇಕು. ಇಲ್ಲದಿದ್ದರೇ ನಿರಂತರವಾಗಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ವೀರಶೈವ ಲಿಂಗಾಯತ ಯುವ ವೇದಿಕೆ ತಾಲೂಕಾಧ್ಯಕ್ಷ ಮಲ್ಲಿಕಾರ್ಜುನ ಗೊಳೇದ್, ತಾಲೂಕಾ ಪ್ರಧಾನ ಕಾರ್ಯದರ್ಶಿ ಅಭಿಷೇಕ ಪಾಟೀಲ, ಉಪಾಧ್ಯಕ್ಷ ಮಹಾರುದ್ರ ಇಂಗಿನಶೆಟ್ಟಿ, ಸಚಿನ್ ಪಾಟೀಲ, ಮಹಾಂತಗೌಡ ಪಾಟೀಲ, ನಾಗೇಶ ಕೊಳಕೂರ, ಶಿವಕುಮಾರ ನಾಯ್ಕಲ್ ಸೇರಿದಂತೆ ಇತರರು ಇದ್ದರು.