ಬಿಸಿ ಬಿಸಿ ಸುದ್ದಿ

ಕಬ್ಬಿಗೆ ಬೆಂಬಲ ಬೆಲೆ ನಿಡುವಂತೆ ಆಗ್ರಹಿಸಿ ಪ್ರತಿಭಟನೆ

ಆಳಂದ: ತಾಲೂಕಿನ ಭೂಸನೂರ ಹತ್ತಿರದ ಎನ್. ಎಸ್. ಎಲ್. ಸಕ್ಕರೆ ಕಾರ್ಖಾನೆಯಲ್ಲಿ ಪ್ರಸಕ್ತ ಸಾಲಿನ ನುರಿಸುವ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಆಗ್ರಹಿಸಿ ನಿಂಬರ್ಗಾ ವಲಯ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷರಾದ ಬಸವರಾಜ ಯಳಸಂಗಿ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಂಡು ಆಡಳಿತಕ್ಕೆ ಒತ್ತಾಯಿಸಿದರು.

ನಿಂಬರ್ಗಾ ಉಪ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವ ಮುಖಂಡ ಬಸವರಾಜ ಯಳಸಂಗಿ, ಸಂಕಷ್ಟದಲ್ಲಿ ಕಬ್ಬು ಬೆಳೆದ ರೈತರಿಗೆ ಕಬ್ಬು ನುರಿಸುವ ಮೊದಲೇ ಬೆಲೆ ಘೋಷಿಸಿ ಅದರಂತೆ ಸಕಾಲಕ್ಕೆ ಪಾವತಿಸಬೇಕು.

ಈಗಾಗಲೇ ಕಾರ್ಖಾನೆ ಆರಂಭಿಸಿ ಕಬ್ಬು ನುರಿಸಲಾಗುತ್ತಿದೆ. ಆದರೆ ಇದುವರೆಗೂ ಬೆಲೆ ನೀಡುವ ಕುರಿತು ಯಾವುದೇ ನಿರ್ಧಾರ ಪ್ರಕಟಿಸದೆಯಿರೋದು ರೈತರಲ್ಲಿ ಗೊಂದಲ ಉಂಟು ಮಾಡಿದೆ.ಈ ಕೂಡಲೇ ಎನ್.ಎಸ್.ಎಲ್ ಆಡಳಿತ ಮಂಡಳಿಯು ಬೆಲೆ ನೀಡುವ ಕುರಿತು ಘೋಷಣೆ ಮಾಡಬೇಕು. ಪ್ರತಿ ಟನ್ ಕಬ್ಬಿಗೆ 3,500 ರೂ. ಬೆಲೆ ನೀಡಬೇಕು. ಹಾಗೂ ಪ್ರತಿ ಟನ್ ಕಬ್ಬಿಗೆ 1 ಕೆಜಿ ಯಂತೆ ರಿಯಾಯಿತಿ ದರದಲ್ಲಿ ರೈತರಿಗೆ ಸಕ್ಕರೆ ಕೊಡಬೇಕು. ಕಟಾವಿಗೆ ಬಂದ ಕಬ್ಬು ಸಮಯಕ್ಕೆ ಕಟಾವು ಕೈಗೊಳ್ಳಬೇಕು. ಕಾರ್ಖಾನೆಗೆ ಕಬ್ಬು ಸಾಗಿಸಿ ತೂಕವಾದ ಮೇಲೆ ಸಕಾಲಕ್ಕೆ ಹಣ ಪಾವತಿಸಬೇಕು. ಆಡಳಿತ ಮಂಡಳಿ ಅವರು ರೈತರ ಸಭೆ ಕರೆದು ದರ ನಿಗದಿ ಪಡಿಸಿ ಬೆಲೆ ಘೋಷಣೆ ಮಾಡಬೇಕು. ಸಂಬಂಧಪಟ್ಟ ಅಧಿಕಾರಿಗಳು ರೈತರ ನೆರವಿಗೆ ಬಂದು ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಉಪ ತಹಶೀಲ್ದಾರ್ ಮುಖಾಂತರ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವ ಮುಖಂಡ ಬಸವರಾಜ ಯಳಸಂಗಿ,ಮಲ್ಲಿನಾಥ ನಾಟಿಕಾರ, ಶಾಂತೇಶ್ ಮಠಪತಿ, ಮಹಾದೇವ ಮಿಟೆಕಾರ, ಮಡಿವಾಳಪ್ಪ ಮಡಿವಾಳ, ಮಲ್ಲಿನಾಥ ಮಾ.ಪಾಟೀಲ್, ರಮೇಶ್ ಚಿಂಚೂರ, ಈರಣ್ಣ ಶರಣ,ಬಾಬು ಪಡಸಾವಳಿ,ವೀರಭದ್ರ ನಂದಿ,ಮಲ್ಲಿಕಾರ್ಜುನ ಕೊರೆ,ಧರ್ಮರಾಯ ವಗ್ದರ್ಗಿ, ಕ್ಷೇಮಲಿಂಗ ಕಂಭಾರ, ಸಂತೋಷ್ ಧಂಗಾಪುರ,ಶ್ರೀಶೈಲ ನಿಗಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

2 hours ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

2 hours ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

2 hours ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

3 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

4 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

7 hours ago