ನಮೋಶಿ ಗೆಲುವಿಗೆ ಶಾಸಕ ಸುಭಾಷ್ ಗುತ್ತೇದಾರ ಸಂತಸ

0
21

ಆಳಂದ: ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ನಾಲ್ಕನೇ ಬಾರಿಗೆ ಶಶೀಲ ನಮೋಶಿಯವರು ಜಯ ಗಳಿಸಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಗೆಲುವು ಸರ್ಕಾರದ ವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಶಿಕ್ಷಕರು ಸರ್ಕಾರದ ಜೊತೆ ಇದ್ದಾರೆ ಎನ್ನುವುದು ಸಾಬೀತಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಸರ್ಕಾರವು ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಶ್ರಮವಹಿಸುತ್ತಿದೆ ಎಂದು ಹೇಳಿದ್ದಾರೆ.

Contact Your\'s Advertisement; 9902492681

ರಾಜ್ಯದ ಉಳಿದ ಮೂರು ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಜಯ ಗಳಿಸಿದ್ದಾರೆ ಇದು ಜನರು ಬಿಜೆಪಿಯ ಮೇಲೆ ಇಟ್ಟಿರುವ ನಂಬಿಕೆಯಾಗಿದೆ. ಜಯ ಸಾಧಿಸಿರುವ ಬಿಜೆಪಿಯ ಅಭ್ಯರ್ಥಿಗಳಾದ ಪುಟ್ಟಣ್ಣ, ಎಸ್ ವಿ ಸಂಕನೂರ ಮತ್ತು ಶಶೀಲ ನಮೋಶಿಯವರಿಗೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿನಂದನೆ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here