ಕೃಷಿ

ಯಂತ್ರೋಪಕರಣ ಖರೀದಿಗೆ ಸಹಾಯಧನ: ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ಕಲಬುರಗಿ: ಪ್ರಸಕ್ತ 2020-21ನೇ ಸಾಲಿಗೆ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ (ಆರ್.ಕೆ.ವಿ.ವೈ.) ಯ “ತೋಟಗಾರಿಕೆಯಲ್ಲಿ ಯಾಂತ್ರೀಕರಣ” ಯೋಜನೆಯಡಿ ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಅರ್ಹ ಫಲಾನುಭವಿಗಳು ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಭೂಮಿ ಸಿದ್ಧತೆಗೆ, ಬೆಳೆ ಕಟಾವಿಗೆ ಮತ್ತು ಬೆಳೆ ಕಟಾವಿನ ನಂತರ ಉಪಯೋಗಿಸುವ ವಿವಿಧ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಪಡೆಯಬಹುದಾಗಿದೆ. ದಿನಾಂಕ:01-04-2020 ರ ನಂತರ ಖರೀದಿಸಿದ ಯಂತ್ರಗಳಿಗೆ ಮಾತ್ರ ಸಹಾಯಧನ ಪರಿಗಣಿಸಲಾಗುವುದು. ಸರ್ಕಾರದ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಸಣ್ಣ ಮತ್ತು ಅತಿ ಸಣ್ಣ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ.50 ರಷ್ಟು ಸಹಾಯಧನ ಹಾಗೂ ಇತರೆ ವರ್ಗದ ಫಲಾನುಭವಿಗೆ ಶೇ.40 ರಷ್ಟು ಸಹಾಯಧನ ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ನಿಗದಿತ ಅರ್ಜಿ ನಮೂನೆಯನ್ನು ಆಯಾ ತಾಲೂಕುಗಳ ಸಂಬಂಧಪಟ್ಟ ತೋಟಗಾರಿಕೆ ಇಲಾಖೆಯ ಕಚೇರಿಯಿಂದ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಅಗತ್ಯ ದಾಖಲಾತಿಗಳಾದ ರೈತರ ಪಹಣಿ, ನೀರು ಬಳಕೆ ಪ್ರಮಾಣಪತ್ರ, ತೋಟಗಾರಿಕೆ ಬೆಳೆ ದೃಢೀಕರಣ ಹಾಗೂ ಕೃಷಿ ಇಲಾಖೆಯಿಂದ ಪಡೆದ ನಿರಾಪೇಕ್ಷಣಾ ಪ್ರಮಾಣ ಪತ್ರ (ಎನ್.ಓ.ಸಿ.) ಮತ್ತಿತರ ದಾಖಲೆಗಳನ್ನು ಲಗತ್ತಿಸಿ 2020ರ ನವೆಂಬರ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಫಲಾನುಭವಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಫಜಲಪುರ ತಾಲೂಕು: ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ 08470-283542, ಮೊಬೈಲ್ ಸಂಖ್ಯೆ 7760969088, ಆಳಂದ ತಾಲೂಕು: ದೂರವಾಣಿ ಸಂಖ್ಯೆ 08477-203155, ಮೊಬೈಲ್ ಸಂಖ್ಯೆ 8095143035. ಚಿಂಚೋಳಿ ತಾಲೂಕು: ದೂರವಾಣಿ ಸಂಖ್ಯೆ 08475-273341, ಮೊಬೈಲ್ ಸಂಖ್ಯೆ 8095143035.

ಚಿತ್ತಾಪುರ ತಾಲೂಕು: ದೂರವಾಣಿ ಸಂಖ್ಯೆ 08474-236446. ಮೊಬೈಲ್ ಸಂಖ್ಯೆ 9449004777. ಕಲಬುರಗಿ ತಾಲೂಕು: 08472-231230, ಮೊಬೈಲ್ ಸಂಖ್ಯೆ 9986211661. ಜೇವರ್ಗಿ ತಾಲೂಕು: 08442-236446 ಹಾಗೂ ಮೊಬೈಲ್ ಸಂಖ್ಯೆ 9448651017. ಸೇಡಂ ತಾಲೂಕು: ದೂರವಾಣಿ ಸಂಖ್ಯೆ 08441-276810, ಮೊಬೈಲ್ ಸಂಖ್ಯೆ 9731439282 /9480633045ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

8 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

8 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

10 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

10 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

10 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

11 hours ago