ಬಿಸಿ ಬಿಸಿ ಸುದ್ದಿ

ಕಾರ್ಮಿಕ ಇಲಾಖೆ ನೂತನ ನಿರೀಕ್ಷಕರಿಗೆ ಕಾರ್ಮಿಕರ ಒಕ್ಕೂಟ ಸನ್ಮಾನ

ಸುರಪುರ: ನಗರದ ಕಾರ್ಮಿಕರ ಇಲಾಖೆಗೆ ನೂತನ ನಿರೀಕ್ಷಕರಾಗಿ ಆಗಮಿಸಿದ ಸಬೀರಾ ಬೇಗಂ ಅವರಿಗೆ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾರ್ಮಿಕರ ಒಕ್ಕೂಟದ ಮುಖಂಡರು ಸನ್ಮಾನಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿದ ನಿರೀಕ್ಷಕರಾದ ಸಬೀರಾ ಬೇಗಂ ಮಾತನಾಡಿ,ಕಾರ್ಮಿಕ ಇಲಾಖೆಯಲ್ಲಿ ಅನೇಕ ಸೌಲಭ್ಯಗಳಿವೆ ಅವುಗಳನ್ನು ಕಾರ್ಮಿಕರು ಪಡೆದುಕೊಳ್ಳಬೇಕು,ಅಲ್ಲದೆ ಇಲಾಖೆಯಿಂದ ಮಾಡಬೇಕಾದ ಯಾವುದೇ ಕೆಲಸದ ಕುರಿತು ಕಾರ್ಮಿಕರು ಸಹಕಾರ ನೀಡಬೇಕು.ನನ್ನ ಸೇವೆಯಲ್ಲಿ ಯಾವುದೇ ಕರ್ತವ್ಯ ಲೋಪವಾಗದಂತೆ ನಿಷ್ಠೆಯಿಂದ ಕೆಲಸ ಮಾಡುವುದಾಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಸನ್ಮಾನಿಸಿದ ಒಕ್ಕೂಟದ ಅಧ್ಯಕ್ಷ ಮುಬೀನ್ ದಖನಿ ಮಾತನಾಡಿ,ಕಳೆದ ಕೆಲ ತಿಂಗಳುಗಳ ಹಿಂದೆ ಸರಕಾರ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಕೋವಿಡ್-೧೯ ಪರಿಹಾರವಾಗಿ ತಲಾ ೫ ಸಾವಿರ ರೂಪಾಯಿಗಳನ್ನು ನೀಡುವುದಾಗಿ ತಿಳಿಸಿ ಅನೇಕ ಕಾರ್ಮಿಕರಿಗೆ ಪರಿಹಾರ ಹಣ ಬಂದಿದೆ,ಅಲ್ಲದೆ ಅನೇಕ ಕಾರ್ಮಿಕರಿಗೆ ಇನ್ನೂ ಪರಿಹಾರ ಧನ ಬಂದಿಲ್ಲ ಕೊಡಿಸುವಂತೆ ಹಾಗು ಇನ್ನೂ ಅನೇಕ ಕಾರ್ಮಿಕರಿಗೆ ಸದಸ್ಯತ್ವದ ಗುರುತಿನ ಚೀಟಿ ಬಂದಿರುವುದಿಲ್ಲ ತರಿಸಿ ಕೊಡುವಂತೆ ವಿನಂತಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವೈಜನಾಥ ಹೊಸ್ಮನಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಂದಾಲೆ ಮಹ್ಮದ ಆರೀಫ್ ಆನಂದ ಅರಕೇರಿ ಶ್ರೀನಿವಾಸ ಜಾಲಗಾರ ಸೈಯದ್ ಹಜರ್ ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾದ ಸರೋಜಾ ಪ್ರಭಾಕರ ನಗನೂರು ರಾಘವೇಂದ್ರ ಭಕ್ರಿ ಸೇರಿದಂತೆ ಇತರರಿದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

7 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

7 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

9 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

9 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

9 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

10 hours ago